ಮಂಡ್ಯ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಂದ ಸ್ಯಾಂಡಲ್ ವುಡ್ ಗೆ ಕಳಂಕ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿದ್ದು, ನಟ ದರ್ಶನ್ ನನ್ನು ನನ್ನ ಮಗುವಂತ ತಿಳಿದುಕೊಳ್ಳಿ ಎಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯದಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳುವುದು ಬೇಡ.ನಮ್ಮದು ಚಂದನವನ.ಒಂದು ಮಳೆಗೆ ಮರ ಒಣಗಿದರೇನಂತೆ ಇನ್ನೊಂದು ಮಳೆಗೆ ಕಾಡು ಬೆಳೆದೆ ಬೆಳೆಯುತ್ತದೆ. ಸಿನಿಮಾ ಕಲಾವಿದರಾದವರು ಸಣ್ಣದಾಗಿ ಯೋಚನೆ ಮಾಡಬೇಕು. ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು.ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ ನಿಜ ಜೀವನದಲ್ಲಿ ಸ್ಕ್ರಿಪ್ಟನ್ನು ತರಬಾರದು ನಿಜ ಜೀವನದಲ್ಲಿ ಕ್ಯಾರೆಕ್ಟರ್ ಆಗಬಾರದು ಇದು ಕಲಾವಿದರ ಕರ್ತವ್ಯ.

ನಟ ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ದಾಗ ತಂದೆ ಎಷ್ಟು ನೋವು ಅನುಭವಿಸುತ್ತಾನೋ, ನಾನು ನೋವು ಅನುಭವಿಸಿದ್ದೇನೆ. ಮಗುನು ಅಷ್ಟೇ ನೋವು ತಿಂದಿರುತ್ತೆ. ದರ್ಶನ್ ಕೊಟ್ಟಿರುವ ಕೊಡುಗೆ ಇದೆಯಲ್ಲ ಆ ಬಗ್ಗೆ ಗಮನ ಕೊಡೋಣ ಎಂದು ಮಂಡ್ಯದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

Share.
Exit mobile version