ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ ಹಾಗೂ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದಿದ್ದಾರೆ.
ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ ಭವಿಷ್ಯವಾಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಭದ್ರ ಎಂಬುದಾಗಿಯೇ ತಿಳಿಸಿದ್ದಾರೆ.
ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರೂ ಹಾಲು ಸಮಾಜ ಕೆಡದು. ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಕಷ್ಟ. ಅದು ಸುಲಭವೂ ಅಲ್ಲ. ಸಿಎಂ ಸಿದ್ಧರಾಮಯ್ಯ ಅವರು ಅವರಾಗೇ ಸಿಎಂ ಸ್ಥಾನ ಬಿಡಬೇಕೇ ಹೊರತು, ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ತೊಂದರೆ ತಾಪತ್ರೆಯವಿಲ್ಲ. ಮಳೆ ಬೆಳೆ ಚೆನ್ನಾಗಿ ಆಗುತ್ತದೆ. ಸುಭೀಕ್ಷೆಯಿಂದ ಕೂಡಿರಲಿದೆ. ನಾಡಿನಲ್ಲಿ ಯಾವುದೇ ಕೊರತೆ ಕಾಣೋದಿಲ್ಲ. ಯುಗಾದಿ ನಂತ್ರ ಕರ್ನಾಟಕದ ಬಗ್ಗೆ ಗೊತ್ತಾಗಲಿದೆ ಎಂದು ಕೋಠಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.
ಪ್ರಪಂಚದಲ್ಲಿ ಭೂಕಂಪನ, ಜನರ ಸಾವು ನೋವು ಆಗುವುದು. ಕಟ್ಟಡ ಬೀಳುವುದು ಮುಂದುವರೆಯಲಿದೆ. ಭೂ ಸುನಾಮಿ, ಜಲ ಸುನಾಮಿ, ವಾಯು ಸುನಾಮಿ ಕಾಣಿಸಿಕೊಳ್ಳುತ್ತದೆ. ಇಲ್ಲಿಯವರೆಗೆ ಜಲ ಸುನಾಮಿ ಆಗಿತ್ತು. ಈ ಭಾರಿ ಭೂ ಸುನಾಮಿ ಇದೆ. ಜಲ ಸುನಾಮಿ ಹಾಗೂ ವಾಯು ಸುನಾಮಿ ಹೆಚ್ಚಾಗಲಿದೆ. ಬಾಹ್ಯ ಸುನಾಮೆ ಅಂದ್ರೆ ಬಾಹ್ಯಾಕಾಶದಲ್ಲಿ ತೊಂದರೆ ಆಗಲಿದೆ. ಮುಂದುವರೆದು ಯುಗಾದಿಯ ನಂತ್ರ ಭವಿಷ್ಯ ಹೇಳುವುದಾಗಿ ತಿಳಿಸಿದರು.
BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ನಲ್ಲಿ ಹೆಚ್ಚು ಕಮಿಷನ್ : ಗುತ್ತಿಗೆದಾರರ ಸಂಘ ಗಂಭೀರ ಆರೋಪ!