ಕೋಲಾರ : ಶಿಕ್ಷಕನೋರ್ವ ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ ಕೋಲಾರ ಸಮೀಪದ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಳಿಬಂದಿದ್ದು, ಪೋಷಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತದೆ ಎಂದು ಪ್ರಶ್ನಿಸಿ ಮುಜುಗರ ತರುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಿಕ್ಷಕ ಪ್ರಕಾಶ್ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ಮಾತನಾಡಿ, ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ಶಾಲೆ ಹಾಗೂ ಶಿಕ್ಷಕರ ವಿರುದ್ಧ ಕಿಡಿಕಾರಿದ್ದಾರೆ. ಹಾಗೂ ಶಿಕ್ಷಕನನ್ನು ಅಮಾನತು ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ.

ತೆರೆದ ಮ್ಯಾನ್ ಹೋಲ್ ನಿಂದ ಸಾವು ಸಂಭವಿಸಿದರೆ ಅಧಿಕಾರಿಗಳೇ ಹೊಣೆ: ಹೈಕೋರ್ಟ್‌ ಮಹತ್ವದ ತೀರ್ಪು

BREAKING NEWS : ಮುಂದುವರೆದ ‘ಮರಾಠಿ ಪುಂಡರ’ ಅಟ್ಟಹಾಸ : ‘ಸಿಎಂ ಬೊಮ್ಮಾಯಿ’ ಭಾವಚಿತ್ರಕ್ಕೆ ಮಸಿ

Share.
Exit mobile version