ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಲುವಾಗಿ ನೀಡಿರುವಂತ ಸರ್ಕಾರಿ ಜಾಹೀರಾತು, ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸರ್ಕಾರದ ( BJP Government ) ವಿರುದ್ಧ ವಿಪಕ್ಷಗಳ ನಾಯಕರು ಮುಗಿಬಿದ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಕೂಡ ಸಿಎಂ ಬೊಮ್ಮಾಯಿಗೆ ( CM Bommai ) ಬಹಿರಂಗ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನ್ ಬರೆದಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ..

BIGG NEWS : ನೀರು ಕುಡಿದಿದ್ದಕ್ಕೆ ʻ ಶಿಕ್ಷಕನಿಂದ ದಲಿತ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿತ ʼ : ಚಿಕಿತ್ಸೆ ಫಲಿಸದೇ ಸಾವು

ಸನ್ಮಾನ್ಯ ಮುಖ್ಯಮಂತ್ರಿಗಳೇ,

ವಿಷಯ: ಸ್ವಾತಂತ್ರ್ಯ ಅಮೃತ ಮಹೋತ್ಸವ ಕುರಿತ ಸರ್ಕಾರಿ ಜಾಹೀರಾತಿನಲ್ಲಿ ಜವಾಹರಲಾಲ್ ನೆಹರು ಅವರ ಕಡೆಗಣನೆ ಬಗ್ಗೆ.

ಇಡೀ ದೇಶ ಸ್ವಾಂತಂತ್ರ್ಯ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿ, ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಈ ವಿಚಾರದಲ್ಲಿ ಅಧಿಕಾರರೂಢ ಸರ್ಕಾರದ ಜವಾಬ್ದಾರಿ ಒಂದು ಪಟ್ಟು ಹೆಚ್ಚಾಗಿಯೇ ಇರುತ್ತದೆ.

ಆದರೆ, ದಿನಾಂಕ 14-08-2022 ರಂದು ಭಾನುವಾರ ದಿನಪತ್ರಿಕೆಗಳಲ್ಲಿ ಬಂದಿರುವ ಸರ್ಕಾರಿ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ, ದೇಶದ ಮೊದಲ ಪ್ರಧಾನಿ, ಸ್ವಾತಂತ್ರೋತ್ತರ ನವಭಾರತ ನಿರ್ಮಾಣದ ಶಿಲ್ಪಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಿದ್ದೀರಿ. ಆ ಮೂಲಕ ಇತಿಹಾಸ ತಿರುಚುವ ವಿಫಲ ಯತ್ನ ಮಾಡಿದ್ದೀರಿ.

ಆ.15ರಂದು ಬೆಂಗಳೂರಿನಲ್ಲಿ ‘ಕಾಂಗ್ರೆಸ್’ನಿಂದ ‘ಸ್ವಾತಂತ್ರ್ಯ ನಡಿಗೆ’: ನೀವು ಬರ್ತಾ ಇದ್ದೀರಾ.? ಈ ಎಲ್ಲಾ ವಿಶೇಷ ಸೌಲಭ್ಯದ ವ್ಯವಸ್ಥೆ

ಮುಖ್ಯಮಂತ್ರಿ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು. ಇದು ತಮ್ಮ ಆತ್ಮಸಾಕ್ಷಿಗೆ ಶೋಭೆ ತರುವ ಕೆಲಸವಲ್ಲ.

ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನೆಹರು ಅವರು ಅಸಕಾರ ಚಳುವಳಿ, ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಪ್ರತಿ ಹಂತದಲ್ಲೂ ತಮ್ಮ ಬದುಕು ಮುಡಿಪಿಟ್ಟವರು. ಅಲ್ಲದೆ ಸ್ವಾತಂತ್ರ್ಯ ಹೋರಾಟಕ್ಕಾಗಿ 9 ವರ್ಷಗಳ ಸೆರೆವಾಸ ಅನುಭವಿಸಿದ್ದರು.

ಸ್ವಾತಂತ್ರ್ಯ ಹೋರಾಟ, ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ ನಾವು ನೀವು ಬೆಳೆದಿದ್ದೇವೆ. ಆದರೂ ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು. ಇದು ಅಕ್ಷಮ್ಯ.

ಆಗಿರುವ ಪ್ರಮಾದಕ್ಕೆ ನೀವು ಕ್ಷಮೆ ಯಾಚಿಸಬೇಕು. ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಯತ್ತೇನೆ ಎಂದಿದ್ದಾರೆ.

BIGG NEWS : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಗೆ ಯತ್ನ : ಸಂಸದ ಬಿ.ವೈ. ರಾಘವೇಂದ್ರ

Share.
Exit mobile version