Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

09/01/2026 7:46 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KPSCಯಿಂದ ‘PDO ಹುದ್ದೆ’ಗೆ ಅರ್ಜಿ ಸಲ್ಲಿಕೆ ವಯೋಮಿತಿ ‘3 ವರ್ಷ’ ಸಡಿಲಿಸಿ ಅಧಿಕೃತ ಆದೇಶ | KPSC PDO Recruitment
KARNATAKA

BREAKING: KPSCಯಿಂದ ‘PDO ಹುದ್ದೆ’ಗೆ ಅರ್ಜಿ ಸಲ್ಲಿಕೆ ವಯೋಮಿತಿ ‘3 ವರ್ಷ’ ಸಡಿಲಿಸಿ ಅಧಿಕೃತ ಆದೇಶ | KPSC PDO Recruitment

By kannadanewsnow0917/09/2024 8:19 PM

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ ಪಿಡಿಓ ಸೇರಿದಂತೆ ವಿವಿಧ ಹುದ್ದೆಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ.

“ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ.”
ಮೇಲ್ಕಂಡ ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ, ವಯೋಮಿತಿಯನ್ನು ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿದ್ದಾರೆ.

ವಯೋಮಿತಿ:

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:03.10.2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು ಎಂದು ತಿಳಿಸಿದ್ದಾರೆ.

  • ಸಾಮಾನ್ಯ ವರ್ಗದವರಿಗೆ ಗರಿಷ್ಠ – 38 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3 ಬಿ ವರ್ಗದವರಿಗೆ ಗರಿಷ್ಠ 41 ವರ್ಷ
  • ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ವರ್ಗದವರಿಗೆ ಗರಿಷ್ಠ 43 ವರ್ಷಗಳು

ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ಗ್ರೂಪ್-ಸಿ ವೃಂದದ “ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:18.09.2024 ರಿಂದ 03.10.2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ.

ವಿಶೇಷ ಸೂಚನೆ:-

1. ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

2, ವಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ, ಆಯೋಗದ ಅಧಿಸೂಚನೆ ಸಂಖ್ಯೆ:ಇ(2)598/2023-24/ಪಿಎಸ್‌ಸಿ, ದಿನಾಂಕ:15.03.2024ರಲ್ಲಿ ತಿಳಿಸಲಾಗಿರುವ ಮಾಹಿತಿ/ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.

3. ಈಗಾಗಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ | Karnataka Cabinet Meeting

ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

Share. Facebook Twitter LinkedIn WhatsApp Email

Related Posts

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

09/01/2026 7:46 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM1 Min Read
Recent News

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

09/01/2026 7:46 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM

WPL ಆರಂಭಕ್ಕೂ ಮುನ್ನವೇ ಗುಜರಾತ್ ಜೈಂಟ್ಸ್‌ಗೆ ಶಾಕ್: ಗಾಯದಿಂದ ಯಸ್ತಿಕಾ ಭಾಟಿಯಾ ಔಟ್!

09/01/2026 7:36 AM
State News
KARNATAKA

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

By kannadanewsnow5709/01/2026 7:46 AM KARNATAKA 1 Min Read

ಕಾರವಾರ: ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM

BIG NEWS : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

09/01/2026 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.