Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂದಿನ ತಿಂಗಳು ಬೆಂಗಳೂರಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಾವೇಶ: ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ

21/08/2025 9:05 PM

ಹಣದ ಹರಿವನ್ನು ಹೆಚ್ಚಿಸಲು ಯಾರಿಗೂ ಹೇಳದೆ ಏಳು ಲವಂಗವನ್ನು ಇರಿಸಿ ಈ ರಹಸ್ಯ ಪರಿಹಾರವನ್ನು ಮಾಡಿ

21/08/2025 9:01 PM

‘ಸಿಗಂದೂರು ಸೇತುವೆ’ ನೋಡೋದಕ್ಕೆ ತೆರಳುವವರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

21/08/2025 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KPSCಯಿಂದ ‘PDO ಹುದ್ದೆ’ಗೆ ಅರ್ಜಿ ಸಲ್ಲಿಕೆ ವಯೋಮಿತಿ ‘3 ವರ್ಷ’ ಸಡಿಲಿಸಿ ಅಧಿಕೃತ ಆದೇಶ | KPSC PDO Recruitment
KARNATAKA

BREAKING: KPSCಯಿಂದ ‘PDO ಹುದ್ದೆ’ಗೆ ಅರ್ಜಿ ಸಲ್ಲಿಕೆ ವಯೋಮಿತಿ ‘3 ವರ್ಷ’ ಸಡಿಲಿಸಿ ಅಧಿಕೃತ ಆದೇಶ | KPSC PDO Recruitment

By kannadanewsnow0917/09/2024 8:19 PM

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ ಪಿಡಿಓ ಸೇರಿದಂತೆ ವಿವಿಧ ಹುದ್ದೆಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ.

“ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ.”
ಮೇಲ್ಕಂಡ ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ, ವಯೋಮಿತಿಯನ್ನು ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿದ್ದಾರೆ.

ವಯೋಮಿತಿ:

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:03.10.2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು ಎಂದು ತಿಳಿಸಿದ್ದಾರೆ.

  • ಸಾಮಾನ್ಯ ವರ್ಗದವರಿಗೆ ಗರಿಷ್ಠ – 38 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3 ಬಿ ವರ್ಗದವರಿಗೆ ಗರಿಷ್ಠ 41 ವರ್ಷ
  • ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ವರ್ಗದವರಿಗೆ ಗರಿಷ್ಠ 43 ವರ್ಷಗಳು

ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ಗ್ರೂಪ್-ಸಿ ವೃಂದದ “ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:18.09.2024 ರಿಂದ 03.10.2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ.

ವಿಶೇಷ ಸೂಚನೆ:-

1. ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

2, ವಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ, ಆಯೋಗದ ಅಧಿಸೂಚನೆ ಸಂಖ್ಯೆ:ಇ(2)598/2023-24/ಪಿಎಸ್‌ಸಿ, ದಿನಾಂಕ:15.03.2024ರಲ್ಲಿ ತಿಳಿಸಲಾಗಿರುವ ಮಾಹಿತಿ/ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.

3. ಈಗಾಗಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ | Karnataka Cabinet Meeting

ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

Share. Facebook Twitter LinkedIn WhatsApp Email

Related Posts

ಮುಂದಿನ ತಿಂಗಳು ಬೆಂಗಳೂರಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಾವೇಶ: ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ

21/08/2025 9:05 PM2 Mins Read

ಹಣದ ಹರಿವನ್ನು ಹೆಚ್ಚಿಸಲು ಯಾರಿಗೂ ಹೇಳದೆ ಏಳು ಲವಂಗವನ್ನು ಇರಿಸಿ ಈ ರಹಸ್ಯ ಪರಿಹಾರವನ್ನು ಮಾಡಿ

21/08/2025 9:01 PM2 Mins Read

‘ಸಿಗಂದೂರು ಸೇತುವೆ’ ನೋಡೋದಕ್ಕೆ ತೆರಳುವವರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

21/08/2025 9:00 PM2 Mins Read
Recent News

ಮುಂದಿನ ತಿಂಗಳು ಬೆಂಗಳೂರಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಾವೇಶ: ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ

21/08/2025 9:05 PM

ಹಣದ ಹರಿವನ್ನು ಹೆಚ್ಚಿಸಲು ಯಾರಿಗೂ ಹೇಳದೆ ಏಳು ಲವಂಗವನ್ನು ಇರಿಸಿ ಈ ರಹಸ್ಯ ಪರಿಹಾರವನ್ನು ಮಾಡಿ

21/08/2025 9:01 PM

‘ಸಿಗಂದೂರು ಸೇತುವೆ’ ನೋಡೋದಕ್ಕೆ ತೆರಳುವವರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

21/08/2025 9:00 PM

BREAKING : ಬಾಕ್ಸಿಂಗ್ ದಂತಕಥೆ ‘ಮೈಕ್ ಟೈಸನ್’ ಬಿಗ್ ಬಾಸ್ 19ಗೆ ಎಂಟ್ರಿ : ವರದಿ

21/08/2025 9:00 PM
State News
KARNATAKA

ಮುಂದಿನ ತಿಂಗಳು ಬೆಂಗಳೂರಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಾವೇಶ: ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ

By kannadanewsnow0921/08/2025 9:05 PM KARNATAKA 2 Mins Read

ಮಂಡ್ಯ : ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲು ಮುಂದಿನ ತಿಂಗಳು ಬೆಂಗಳೂರಿನಲ್ಲಿ ಬೃಹತ್…

ಹಣದ ಹರಿವನ್ನು ಹೆಚ್ಚಿಸಲು ಯಾರಿಗೂ ಹೇಳದೆ ಏಳು ಲವಂಗವನ್ನು ಇರಿಸಿ ಈ ರಹಸ್ಯ ಪರಿಹಾರವನ್ನು ಮಾಡಿ

21/08/2025 9:01 PM

‘ಸಿಗಂದೂರು ಸೇತುವೆ’ ನೋಡೋದಕ್ಕೆ ತೆರಳುವವರೇ ಎಚ್ಚರ.! ಹೀಗೆ ಮಾಡಿದ್ರೆ ‘ದಂಡ ಫಿಕ್ಸ್’

21/08/2025 9:00 PM

BREAKING: ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ

21/08/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.