Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನೆ ನಿಲ್ಲಿಸಿದ್ರೆ ಮಾತ್ರ ಸಿಂಧೂ ನದಿ ನೀರು: ಪಾಕ್ ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಉತ್ತರ

15/05/2025 5:15 PM

ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

15/05/2025 5:08 PM

ಶಿವಮೊಗ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್‌ಲೈನ್ ಅರ್ಜಿ ಆಹ್ವಾನ

15/05/2025 5:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KPSC ನೇಮಕಾತಿ : ಸಂತ್ರಸ್ತರ ಪರವಾಗಿ ಧರಣಿ ಎಚ್ಚರಿಕೆ ನೀಡಿದ ಮಾಜಿ ಸಚಿವ ಎಸ್. ಸುರೇಶ್ ಕುಮಾರ
KARNATAKA

KPSC ನೇಮಕಾತಿ : ಸಂತ್ರಸ್ತರ ಪರವಾಗಿ ಧರಣಿ ಎಚ್ಚರಿಕೆ ನೀಡಿದ ಮಾಜಿ ಸಚಿವ ಎಸ್. ಸುರೇಶ್ ಕುಮಾರ

By kannadanewsnow0529/01/2024 12:07 PM

ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕಾರ್ಯ ವೈಖರಿಯಿಂದ ನೊಂದಿರುವ ಸಂತ್ರಸ್ತರ ಪರವಾಗಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ ಎಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಗೃಹ ಕಚೇರಿಗೆ ಸುಮಾರು 150ಕ್ಕೂ ಅಧಿಕ ಸಂಖ್ಯೆಯ ಯುವಕರು ಮತ್ತು ಯುವತಿಯರು ಬಂದಿದ್ದರು. ಇವರೆಲ್ಲರೂ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ (KPSC ) ಕಾರ್ಯ ವೈಖರಿಯಿಂದ ನೊಂದಿರುವ ಸಂತ್ರಸ್ತ ಯುವ ಜನತೆ. ಅವರೆಲ್ಲರನ್ನು ನೊಂದ, ಆತಂಕದ ಸ್ಥಿತಿಯಲ್ಲಿ ನೋಡಿ ನನಗೆ ನಿಜಕ್ಕೂ ವೇದನೆಯಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಸಂತ್ರಸ್ತರ ಪರಿಸ್ಥಿತಿ ವಿವರಿಸಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಎರಡು ಪತ್ರ ಬರೆದಿದ್ದೇನೆ. ಖುದ್ದಾಗಿ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಆಯೋಗದ ಕಾರ್ಯದರ್ಶಿಗಳ ಜೊತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಗಳ ಜೊತೆ ಈ ವಿಚಾರ ತಿಳಿಸಿದ್ದೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.ರಾಜ್ಯದ ಹಿರಿಯ ಸಚಿವರಲ್ಲಿ ಒಬ್ಬರಾದ ಕೆ.ಜೆ.ಜಾರ್ಜ್ ಅವರೊಂದಿಗೂ ಇವರ ಬವಣೆ ವಿವರಿಸಿದ್ದೇನೆ. ‘ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಗಾದೆಗೆ ಸೂಕ್ತವಾಗಿದೆ ಇವರ ಇಂದಿನ ಸ್ಥಿತಿ – ಗತಿ ಎಂದರು.

ಕೆಪಿಎಸ್‌ಸಿ ಆಯೋಗದ ಮತ್ತು ಕಾರ್ಯದರ್ಶಿಗಳ ನಡುವಿನ ವಿರಸ ಈ ಯುವಕರನ್ನು ಅಕ್ಷರಶಃ ಬೀದಿ ಪಾಲು ಮಾಡಿದೆ. ಇವರೆಲ್ಲ ಅದೆಷ್ಟು ಬಾರಿ ಕೆಪಿಎಸ್‌ಸಿ ಗೇಟಿನ ಬಳಿ ಹೋಗಿದ್ದಾರೋ ಲೆಕ್ಕವೇ ಇಲ್ಲ. ಇವರನ್ನು ಕೆಪಿಎಸ್‌ಸಿ ಗೇಟ್ ಒಳಗೆ ಬಿಡುವುದೂ ಇಲ್ಲ. ಇವರಿಗೆ ಸರಿಯಾದ ಮಾಹಿತಿ ದೊರಕುವುದೂ ಇಲ್ಲ. ದೂರ ದೂರದ ಊರುಗಳಿಂದ ತಮ್ಮ ನೇಮಕಾತಿ ಆದೇಶಕ್ಕಾಗಿ ಬರುವ ಜನರು ಅದೆಷ್ಟು ದುಡ್ಡು ಖರ್ಚು ಮಾಡಿಕೊಂಡಿದ್ದರೋ, ರಾತ್ರಿ ಹೊತ್ತು ಮಲಗಲು ಅದೆಷ್ಟು ಕಷ್ಟ ಪಟ್ಟಿದ್ದಾರೋ ತಿಳಿಯದು ಎಂದು ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಉದ್ಯೋಗ ಸೌಧ ಎಂದು ಹೆಸರಿಟ್ಟುಕೊಂಡಿರುವ ಈ ಕಟ್ಟಡದಿಂದ ಈ ಯುವಕರಿಗೆ ನಿರಂತರ ಅನ್ಯಾಯವಾಗುತ್ತಿದೆ. ಇವರೆಲ್ಲ ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಹಳ ದೀರ್ಘ ಸಮಯ ಕೆಲಸ ಮಾಡಬೇಕಿದೆ ಎಂಬುದನ್ನೂ ನಾವು ಗಮನಿಸಬೇಕು. ಇವರುಗಳು ಸಂಪೂರ್ಣ ಹತಾಶೆಗೊಂಡು ಸಿನಿಕರಾಗುವುದು ನಾಡಿನ ಆರೋಗ್ಯಕ್ಕೆ ಒಳಿತಲ್ಲ. ಆದ್ದರಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಸಂತ್ರಸ್ತರ ಪರವಾಗಿ ನ್ಯಾಯ ಕೇಳಲು ಉದ್ಯೋಗ ಸೌಧದ ಮುಂದೆ ಕೂರುತ್ತೇನೆ ಎಂದು ತಿಳಿಸಿದ್ದಾರೆ.ಎಂದು ತಿಳಿಸಿದ್ದಾರೆ.

ನಾನು ಹೋಗಿ ಮಾತನಾಡಿದಾಗ ಆಯೋಗದ ಅಧ್ಯಕ್ಷರು ಭರವಸೆ ಮಾತನ್ನು ಆಡುತ್ತಾರೆ’ ಆದರೆ ಸಂತ್ರಸ್ತರಿಗೆ ಬೇಕಾಗಿರುವುದು ತಮಗೆ ನ್ಯಾಯಯುತವಾಗಿ ಸಿಗಬೇಕಿರುವ ಫಲಿತಾಂಶ ಅಥವಾ ನೇಮಕಾತಿ ಪತ್ರ ಮಾತ್ರ ಎಂದು ಹೇಳಿದ್ದಾರೆ.ಹೊಟ್ಟೆ ತುಂಬಿರುವ ಉದ್ಯೋಗ ಸೌಧದ ಒಳಗಿನ ಜನಕ್ಕೆ ಕಟ್ಟಡದ ಹೊರಗಡೆ ಇರುವ ಈ ಯುವಕರ ಬವಣೆ ಅರ್ಥವಾಗುತ್ತಿಲ್ಲ ಎಂದು ಕುಟುಕಿದ್ದಾರೆ.

Share. Facebook Twitter LinkedIn WhatsApp Email

Related Posts

ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

15/05/2025 5:08 PM1 Min Read

ಶಿವಮೊಗ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್‌ಲೈನ್ ಅರ್ಜಿ ಆಹ್ವಾನ

15/05/2025 5:06 PM1 Min Read

BREAKING : ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಐಶ್ವರ್ಯಗೌಡ ಕೇಸ್ ನಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

15/05/2025 4:48 PM1 Min Read
Recent News

ಭಯೋತ್ಪಾದನೆ ನಿಲ್ಲಿಸಿದ್ರೆ ಮಾತ್ರ ಸಿಂಧೂ ನದಿ ನೀರು: ಪಾಕ್ ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಉತ್ತರ

15/05/2025 5:15 PM

ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

15/05/2025 5:08 PM

ಶಿವಮೊಗ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್‌ಲೈನ್ ಅರ್ಜಿ ಆಹ್ವಾನ

15/05/2025 5:06 PM

BREAKING : ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಐಶ್ವರ್ಯಗೌಡ ಕೇಸ್ ನಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

15/05/2025 4:48 PM
State News
KARNATAKA

ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

By kannadanewsnow0915/05/2025 5:08 PM KARNATAKA 1 Min Read

ಬೆಂಗಳೂರು: ನಿವೃತ್ತ ಪತ್ರಕರ್ತರ ಮಾಸಾಶನದಲ್ಲಿರುವ ಕಠಿಣ ಷರತ್ತುಗಳನ್ನು ಸರಳೀಕರಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್…

ಶಿವಮೊಗ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್‌ಲೈನ್ ಅರ್ಜಿ ಆಹ್ವಾನ

15/05/2025 5:06 PM

BREAKING : ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಐಶ್ವರ್ಯಗೌಡ ಕೇಸ್ ನಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

15/05/2025 4:48 PM

BIG NEWS : ಸೋಫಿಯಾ ಖುರೆಷಿ ಪತಿ ಮನೆಯ ಮೇಲೆ ದಾಳಿ ಎಂದು ಸುಳ್ಳು ಪೋಸ್ಟ್ : ಆರೋಪಿ ವಿರುದ್ಧ ‘FIR’ ದಾಖಲು

15/05/2025 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.