Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ‘ಏಕೀಕೃತ ಪಿಂಚಣಿ ಯೋಜನೆ’ : ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

24/06/2025 6:43 AM

FACT CHECK : ಕನಿಷ್ಠ ಪಿಎಫ್ ಪಿಂಚಣಿ 7500 ರೂ.ಗೆ ಹೆಚ್ಚಳ? ಇಲ್ಲಿದೆ ವೈರಲ್ ಸುದ್ದಿಯ ಬಗ್ಗೆ `EPFO’ ಸ್ಪಷ್ಟನೆ.!

24/06/2025 6:40 AM

ಸೇನೆಗೆ ಅವಮಾನಕಾರಿ ಹೇಳಿಕೆ: ಲಕ್ನೋ ಕೋರ್ಟ್ ವಿಚಾರಣೆಗೆ ರಾಹುಲ್ ಗಾಂಧಿ ಗೈರು

24/06/2025 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KPTCL’ ನೇಮಕಾತಿ: ತಾತ್ಕಾಲಿಕ, ಅಂತಿಮ ಆಯ್ಕೆಪಟ್ಟಿ ಪ್ರಕಟ ಬಗ್ಗೆ ‘ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ
KARNATAKA

‘KPTCL’ ನೇಮಕಾತಿ: ತಾತ್ಕಾಲಿಕ, ಅಂತಿಮ ಆಯ್ಕೆಪಟ್ಟಿ ಪ್ರಕಟ ಬಗ್ಗೆ ‘ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ

By kannadanewsnow0903/01/2024 5:27 AM

ಬೆಂಗಳೂರು: ಕೆಪಿಟಿಸಿಎಲ್ ನಿಂದ ಕರೆಯಲಾಗಿದ್ದಂತ ವಿವಿಧ ನೇಮಕಾತಿಗಳ ಸಂಬಂಧ, ಅಭ್ಯರ್ಥಿಗಳಿಗೆ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಕವಿಪನಿನಿ ಮತ್ತು ಎಸ್ಕಾಂಗಳಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಖಾಲಿ ಇರುವ ವಿವಿಧ ಪದವೃಂದದ ಸಹಾಯಕ ಇಂಜಿನಿಯರ್ (ವಿದ್ಯುತ್‌), ಸಹಾಯಕ ಇಂಜಿನಿಯರ್(ಸಿವಿಲ್), ಕಿರಿಯ ಇಂಜಿನಿಯರ್(ವಿದ್ಯುತ್), ಕಿರಿಯ ಇಂಜಿನಿಯರ್(ಸಿವಿಲ್) ಹಾಗೂ ಕಿರಿಯ ಸಹಾಯಕ, ಒಟ್ಟು 1492 ಹುದ್ದೆಗಳ ನೇಮಕಾತಿಗಾಗಿ ದಿನಾಂಕ 01.02.2022 ರಂದು ಉದ್ಯೋಗ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಆಯ್ಕೆಯನ್ನು ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಮಾಡಲಾಗುತ್ತಿದೆ. ಆಪ್ಟಿಟ್ಯೂಡ್ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಆಪ್ಟಿಟ್ಯೂಡ್ ಪರೀಕ್ಷೆಯನ್ನು ಪ್ರಾಧಿಕಾರವು ಸಫಲವಾಗಿ ಪೂರ್ಣಗೊಳಿಸಿ, ಫೆಬ್ರವರಿ-2023 ರಲ್ಲಿ ಅರ್ಹ ಅಭ್ಯರ್ಥಿಗಳ ಅಂಕಪಟ್ಟಿಯನ್ನು ಪ್ರಕಟಿಸಿರುತ್ತದೆ ಎಂದು ತಿಳಿಸಿದೆ.

ಈ ಮಧ್ಯೆ, ಕೆಲವು ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಮೀಸಲಾತಿ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊರಡಿಸಲಾದ ಸರ್ಕಾರದ ದಿನಾಂಕ: 01.02.2023 ರ ಸುತ್ತೋಲೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಇಂಜಿನಿಯರ್(ವಿ) ಹುದ್ದೆಗೆ ಪುಕಟಿಸಲಾದ ದಿನಾಂಕ: 04.02.2023 ರ ಅಂಕಪಟ್ಟಿಯನ್ನು ಪ್ರಶ್ನಿಸಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದ್ದರು. ಈ ಕಾರಣದಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ಸುಮಾರು 8 ತಿಂಗಳುಗಳ ಕಾಲ ವಿಳಂಬವಾಗಿರುತ್ತದೆ. ಸದರಿ ದಾವೆಗಳನ್ನು ಮಾನ್ಯ ನ್ಯಾಯಾಲಯವು, ದಿನಾಂಕ: 22.08.2023 ರಂದು ಇತ್ಯರ್ಥಗೊಳಿಸುತ್ತಾ, ಕಲ್ಯಾಣ-ಕರ್ನಾಟಕ ಮೀಸಲಾತಿ ಕೋರಿ ಮಿಕ್ಕುಳಿದ ವೃಂದದಲ್ಲಿ ಆಯ್ಕೆಗೆ ಅರ್ಹರಿರುವ ಅಭ್ಯರ್ಥಿಗಳಿಂದ ಅವರು ಸ್ಥಳೀಯ ವೃಂದಕ್ಕೆ ಆಯ್ಕೆಯಾಗಲು ಇಚ್ಚಿಸಿದಲ್ಲಿ, ಅಂತಹ ಅಭ್ಯರ್ಥಿಗಳಿಂದ ಇಚ್ಚಿತಾ ಪತ್ರವನ್ನು ಪಡೆಯುವಂತೆ ನಿರ್ದೇಶಿಸಿರುತ್ತದೆ ಹಾಗೂ ಸಹಾಯಕ ಇಂಜಿನಿಯರ್(ವಿ) ಹುದ್ದೆಗೆ ದಿನಾಂಕ: 03.01.2023 ರಂದು ಪ್ರಕಟಿಸಿದ ಅಂಕಪಟ್ಟಿಗಳ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಆದೇಶಿಸಿರುತ್ತದೆ. ಸದರಿ ರಿಟ್ ಅರ್ಜಿಗಳು ಇತ್ಯರ್ಥಗೊಂಡ ನಂತರ ಮಾನ್ಯ ನ್ಯಾಯಾಲಯದ ಆದೇಶದನ್ವಯ ಯಾವುದೇ ಕಾಲವಿಳಂಬವಿಲ್ಲದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ ಎಂದು ಹೇಳಿದೆ.

ಪ್ರಸ್ತುತ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿರುತ್ತದೆ ಹಾಗೂ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಯ ತಾತ್ಕಾಲಿಕ ಅಯ್ಕೆ ಪಟ್ಟಿಯನ್ನು ಈಗಾಗಲೇ ಪುಕಟಿಸಲಾಗಿದ್ದು, ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ: 03.01.2024 ರಂದು ಪ್ರಕಟಿಸಲಾಗುವುದು ಅಂತ ತಿಳಿಸಿದೆ.

ಸಹಾಯಕ ಇಂಜಿನಿಯರ್(ವಿ) ಹುದ್ದೆಗೆ ಸಂಬಂಧಿಸಿದಂತೆ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ, ಕಲ್ಯಾಣ ಕರ್ನಾಟಕ ಕೋಟಾದ ಅಭ್ಯರ್ಥಿಗಳಿಂದ ದಿನಾಂಕ: 03.01.2024 ರಂದು ಹೊಸದಾಗಿ ಇಚ್ಛಿತಾ ಪತ್ರಗಳನ್ನು ಪಡೆಯುವ ಪ್ರಕ್ರಿಯೆಯನ್ನು ನಿಗದಿಪಡಿಸಲಾಗಿರುತ್ತದೆ. ಸದರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನು ಎರಡು ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ.

ಸಹಾಯಕ ಇಂಜಿನಿಯರ್(ವಿ) ಹಾಗೂ ಕಿರಿಯ ಇಂಜಿನಿಯರ್ (ವಿ) ಎರಡೂ ಹುದ್ದೆಗಳಿಗೆ ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಆಯ್ಕೆ ಪಟ್ಟಿಯಲ್ಲಿ ಅರ್ಹತೆ ಪಡೆದಿರುವುದರಿಂದ, ಸಹಾಯಕ ಇಂಜಿನಿಯರ್(ವಿ) ಹುದ್ದೆಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ನಂತರ, ಕಿರಿಯ ಇಂಜಿನಿಯರ್(ವಿ) ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಕಿರಿಯ ಸಹಾಯಕ ಹುದ್ದೆಗೆ ಸಂಬಂಧಿಸಿದಂತೆ, ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯನ್ನು ನಡೆಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನು ಮೂರು ವಾರಗಳಲ್ಲಿ ಪ್ರಕಟಿಸಲಾಗುವುದು ಎಂದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

24/06/2025 6:25 AM1 Min Read

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜೂ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

24/06/2025 6:23 AM2 Mins Read

Rain Alert : ರಾಜ್ಯದಲ್ಲಿ ಜೂ.29ರವರೆಗೆ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ, ಆರೆಂಜ್’ ಅಲರ್ಟ್ ಘೋಷಣೆ

24/06/2025 6:16 AM1 Min Read
Recent News

BIG NEWS : ‘ಏಕೀಕೃತ ಪಿಂಚಣಿ ಯೋಜನೆ’ : ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

24/06/2025 6:43 AM

FACT CHECK : ಕನಿಷ್ಠ ಪಿಎಫ್ ಪಿಂಚಣಿ 7500 ರೂ.ಗೆ ಹೆಚ್ಚಳ? ಇಲ್ಲಿದೆ ವೈರಲ್ ಸುದ್ದಿಯ ಬಗ್ಗೆ `EPFO’ ಸ್ಪಷ್ಟನೆ.!

24/06/2025 6:40 AM

ಸೇನೆಗೆ ಅವಮಾನಕಾರಿ ಹೇಳಿಕೆ: ಲಕ್ನೋ ಕೋರ್ಟ್ ವಿಚಾರಣೆಗೆ ರಾಹುಲ್ ಗಾಂಧಿ ಗೈರು

24/06/2025 6:35 AM

BREAKING : ಇರಾನ್-ಇಸ್ರೇಲ್ ನಡುವೆ ಯಾವುದೇ ಕದನ ವಿರಾಮದ ಒಪ್ಪಂದಕ್ಕೆ ಬಂದಿಲ್ಲ : ಇರಾನ್ ವಿದೇಶಾಂಗ ಸಚಿವ

24/06/2025 6:32 AM
State News
KARNATAKA

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

By kannadanewsnow5724/06/2025 6:25 AM KARNATAKA 1 Min Read

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಮೆಟ್ರಿಕ್ ಪೂರ್ವ(1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ರಾಷ್ಟ್ರೀಯ ವಿದೇಶಿ…

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜೂ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

24/06/2025 6:23 AM

Rain Alert : ರಾಜ್ಯದಲ್ಲಿ ಜೂ.29ರವರೆಗೆ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ, ಆರೆಂಜ್’ ಅಲರ್ಟ್ ಘೋಷಣೆ

24/06/2025 6:16 AM

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

24/06/2025 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.