ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ. ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.

ತಮ್ಮ ಅಶ್ಲೀಲ ಸಿಡಿ ಭೀತಿಯಿಂದಾಗಿ ಯಾವುದೇ ಮಾನಹಾನಿ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮಧ್ಯಂತರ ಆದೇಶ ಪಡೆದಿದ್ದಾರೆ.

ಲೋಕಸಭಾ ಚುನಾವಣೆಯ ವೇಳೆಯಲ್ಲಿ ತಮ್ಮ ಹೆಸರಿಗೆ ಮಸಿ ಬಳಿಯೋ ಸಾಧ್ಯತೆಯಿಂದ ಕೋರ್ಟ್ ನಿಂದ ಅಶ್ಲೀಲ ಸಿಡಿ ಬಿಡುಗಡೆ ಮಾಡದಂತೆ ನಿರ್ಬಂಧಕಾಜ್ಞೆಯನ್ನು ತಂದಿದ್ದಾರೆ.

Share.
Exit mobile version