Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking: ಎಂಜಿನ್ ಸಮಸ್ಯೆ : ದೆಹಲಿಗೆ ಮರಳಿದ ಮುಂಬಯಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ

22/12/2025 12:25 PM

ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ ನಿರ್ಮಿತ ‘ರೈಫಲ್ ಟೆಲಿಸ್ಕೋಪ್’ ಪತ್ತೆ, ತನಿಖೆ ಆರಂಭ

22/12/2025 12:03 PM

ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಯಾರನ್ನು ಬೇಕಾದರೂ ಭೇಟಿ ಆಗಬಹುದು : ಸಿಎಂ ಸಿದ್ದರಾಮಯ್ಯ

22/12/2025 11:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಧ್ಯಮ ಸಲಹೆಗಾರರಾದ ‘ಕೆ.ವಿ ಪ್ರಭಾಕರ್’ಗೆ ‘KSDMF’ನಿಂದ ಅಭಿನಂದನೆ: ಶೀಘ್ರದಲ್ಲೇ ರಾಜ್ಯಮಟ್ಟದ ಸಮ್ಮೇಳನ
KARNATAKA

ಮಾಧ್ಯಮ ಸಲಹೆಗಾರರಾದ ‘ಕೆ.ವಿ ಪ್ರಭಾಕರ್’ಗೆ ‘KSDMF’ನಿಂದ ಅಭಿನಂದನೆ: ಶೀಘ್ರದಲ್ಲೇ ರಾಜ್ಯಮಟ್ಟದ ಸಮ್ಮೇಳನ

By kannadanewsnow0929/04/2025 9:10 PM

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಬಿ ಬೆಲಗೂರು ಹೇಳಿದ್ದಾರೆ.

ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಡಿಜಿಟಲ್ ಮಾಧ್ಯಮ ನೀತಿಯಿಂದಾಗಿ ಬೇರೆ ಪತ್ರಿಕೆ, ಟಿವಿಯಂತೆ ಡಿಜಿಟಲ್ ಮಾಧ್ಯಮವು ಪತ್ರಿಕೋದ್ಯಮದ ಭಾಗವೆಂದು ಅಧಿಕೃತವಾಗಿದೆ. ದೇಶದಲ್ಲಿ ಡಿಜಿಟಲ್ ಪಾಲಿಸಿ ಕೆಲವು ರಾಜ್ಯಗಳಲ್ಲಿ ಇದೆಯಾದರೂ ನಮ್ಮ ರಾಜ್ಯದಲ್ಲಿ ಈ ನೀತಿ ಸಮಗ್ರವಾಗಿದ್ದು, ವೃತ್ತಿಪರವಾಗಿ ರಚನೆಯಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರುವಲ್ಲಿ ಮಹತ್ವದ ಕಾರ್ಯವನ್ನು ನಿರ್ವಹಿಸಿದ್ದಾರೆ. ಡಿಜಿಟಲ್ ಮಾಧ್ಯಮವು ಪರ್ಯಾಯ ಮಾಧ್ಯಮವಾಗಿ ನೈಜ ಪತ್ರಿಕೋದ್ಯಮ, ನಿಷ್ಪಕ್ಷಪಾತವಾಗಿ, ಮಾನವತೆಯಿಂದಾಗಿ ಪರ್ಯಾಯ ಪತ್ರಿಕೋದ್ಯಮವು ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದರು.

ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ತನ್ನ ಸಂಘಟಿತ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಡಿಜಿಟಲ್ ಮಾಧ್ಯಮ-2024 ಜಾರಿಗೆ ತರಲಾಗಿದೆ. ಈ ನೀತಿಯಲ್ಲಿ ಪತ್ರಕರ್ತರಿಗೆ ಪೂರಕವಾಗಿ ಕೆಲವೊಂದು ಅಗತ್ಯ ಬದಲಾವಣೆ, ತಿದ್ದುಪಡಿಯಾಗಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೆಎಸ್ ಡಿಎಂಎಫ್ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಂಸ್ಥೆಯ ಆಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರಾದ ಬಿ.ಸಮೀವುಲ್ಲಾ ಜೊತೆಗಿನ ವೃತ್ತಿ ಬಾಂಧವ್ಯವನ್ನು ಸ್ಮರಿಸಿದರು. ರಾಜ್ಯದಲ್ಲಿ ಡಿಜಿಟಲ್ ನೀತಿ ತರುವ ಬಗ್ಗೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಡಿಜಿಟಲ್ ಮಾಧ್ಯಮದ ಅಗತ್ಯತೆ ಬಗ್ಗೆ ತಿಳಿ ಹೇಳಿ ಆ ಬಗ್ಗೆ ಚರ್ಚೆ ನಡೆಸಿದ್ದೆ. ಕೃತಕ ಬುದ್ದಿಮತ್ತೆಯು ಡಿಜಿಟಲ್ ಮಾಧ್ಯಮಕ್ಕೂ ದಾಂಗುಡಿಯಿಟ್ಟಿದೆ ಎಂದರು.

ಸಣ್ಣ ಪತ್ರಿಕೆಯಂತೆ ಡಿಜಿಟಲ್ ಮಾಧ್ಯಮವನ್ನು ಕೈಹಿಡಿಯುವ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಮಾತನಾಡಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳಿಗೂ ಜಾಹೀರಾತು ನೀಡಲು ಹಣಕಾಸು ವೆಚ್ಚ, ಡಿಜಿಟಲ್ ಮೀಡಿಯಾ ನೀತಿಯ ನೀಲನಕ್ಷೆ ಬಗ್ಗೆಯೂ ತಿಳಿಸಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದರು. ಹೀಗಾಗಿ ಡಿಜಿಟಲ್ ಜಾಹೀರಾತು ನೀತಿ ತರಲು ಸಾಧ್ಯವಾಯಿತು. ಈ ನಿಟ್ಟಿನಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಪತ್ರಕರ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದೆ ಬದಲಾವಣೆ ಮಾಡಲಾಗುವುದು ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತ್ರಕರ್ತರ ಅಭಿವೃದ್ಧಿಗಾಗಿ ಆರೋಗ್ಯ, ಗ್ರಾಮೀಣ ಪತ್ರಕರ್ತರಿಗಾಗಿ ಬಸ್ ಪಾಸ್, ದಿನಪತ್ರಿಕೆ ಹಂಚುವವರಿಗೂ ಅನುಕೂಲ‌ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಾಧ್ಯಮ ಮಾನ್ಯತೆಯಿರುವವರಿಗೆ ಆರೋಗ್ಯ ಸಂಜೀವಿನಿಯಡಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳುತ್ತೇವೆ. ಡಿಜಿಟಲ್ ಮಾಧ್ಯಮದವರಿಗೂ ವಾರ್ತಾ ಇಲಾಖೆಯಿಂದ ಐಡಿ ಕಾರ್ಡ್ ಅಥವಾ ಮಾನ್ಯತಾ ಕಾರ್ಡ್ ನೀಡಲು ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಜೊತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಮಾತನಾಡಿ, ಡಿಜಿಟಲ್ ಮೀಡಿಯಾ ಫೋರಂ ಈಗಿನ ಡಿಜಿಟಲ್ ಮಾಧ್ಯಮಕ್ಕೆ ಅತ್ಯಗತ್ಯವಾಗಿತ್ತು. ವೃತ್ತಿಪರ ಡಿಜಿಟಲ್ ಪತ್ರಕರ್ತರಿಗೆ ಈ ಕೆಎಸ್ ಡಿಎಂಎಫ್ ಫೋರಂ ಹೆಚ್ಚಿನ ಅನುಕೂಲವಾಗಿದೆ ಎಂದರು.

ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಜಂಟಿ ಕಾರ್ಯದರ್ಶಿ ಮಾಲತೇಶ್ ಅರಸ್ ಹರ್ತಿಕೋಟೆ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಕೆಎಸ್ ಡಿಎಂಎಫ್ ಉಪಾಧ್ಯಕ್ಷರಾದ ಸುನಿಲ್ ಶಿರಸಿಂಗಿ, ಪ್ರಧಾನ ಕಾರ್ಯದರ್ಶಿ ಕೆ.ಎಂ ಶಿವಕುಮಾರ್, ಖಜಾಂಚಿ ಸನತ್ ಕುಮಾರ್ ರೈ, ಜಂಟಿ ಕಾರ್ಯದರ್ಶಿಗಳಾದ ಮಾಲತೇಶ್ ಅರಸ್ ಹರ್ತಿಕೋಟೆ, ರಜನಿ ಹಾಗೂ ಕೆಎಸ್ ಡಿಎಂಎಫ್ ಸದಸ್ಯರು, ಹಿರಿಯ ಪತ್ರಕರ್ತರಾದ ಹಮೀದ್ ಪಾಳ್ಯ, ಪ್ರತಿಧ್ವನಿ ಶಿವಕುಮಾರ್, ವಿಜಯ್ ಭರಮಸಾಗರ, ಮಂಜು ಬಾಣಗೆರೆ, ರವೀಂದ್ರ ಜೋಶಿ, ಮುತ್ತುರಾಜ್, ಶ್ಯಾಮ್ , ರಮೇಶ್ , ದರ್ಶನ್ ಮತ್ತು ಅನೇಕರು ಭಾಗವಹಿಸಿದ್ದರು.

ಇಲಾಖೆಯಿಂದ ಐಡಿ ಕಾರ್ಡ್ ವಿತರಣೆ

ಮಾಧ್ಯಮ ಅಕಾಡೆಮಿಯಲ್ಲಿಯೂ ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೂ ಪ್ರಶಸ್ತಿಗೆ ಪರಿಗಣಿಸಲು ಅಕಾಡೆಮಿ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡುತ್ತೇನೆ. ಡಿಜಿಟಲ್ ಮಾಧ್ಯಮದವರಿಗೂ ವಾರ್ತಾ ಇಲಾಖೆಯಿಂದ ಮಾಧ್ಯಮ ಮಾನ್ಯತೆಯ ಕಾರ್ಡ್ ಅಥವಾ ಐಡಿ ಕಾರ್ಡ್ ನೀಡಲು ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಜೊತೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು.

ಶೀಘ್ರವೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ

ಸದ್ಯದಲ್ಲೇ ಕೆಎಸ್ ಡಿಎಂಎಫ್ ಫೋರಮ್ ವತಿಯಿಂದ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಳ್ಳಲಾಗುವುದು. ಈ ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF) ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ತಿಳಿಸಿದರು.

BREAKING: ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ನೇಮಕ | Justice B R Gavai

ಎಚ್ಚರಿಕೆ! ಈ ಪಾಸ್ ವರ್ಡ್ ಗಳನ್ನು ಎಂದಿಗೂ ಬಳಸಬೇಡಿ, 1 ಸೆಕೆಂಡಿನೊಳಗೆ ಹ್ಯಾಕ್ ಮಾಡಬಹುದು. ಪೂರ್ಣ ಪಟ್ಟಿ ಇಲ್ಲಿದೆ | Password

BREAKING: ಮೇ.9ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

Share. Facebook Twitter LinkedIn WhatsApp Email

Related Posts

ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಯಾರನ್ನು ಬೇಕಾದರೂ ಭೇಟಿ ಆಗಬಹುದು : ಸಿಎಂ ಸಿದ್ದರಾಮಯ್ಯ

22/12/2025 11:51 AM1 Min Read

ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು : ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

22/12/2025 11:37 AM1 Min Read

BREAKING : ಹಾಸನದ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ : ಸ್ಥಳಕ್ಕೆ ಪೊಲೀಸರು ದೌಡು

22/12/2025 11:15 AM1 Min Read
Recent News

Breaking: ಎಂಜಿನ್ ಸಮಸ್ಯೆ : ದೆಹಲಿಗೆ ಮರಳಿದ ಮುಂಬಯಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ

22/12/2025 12:25 PM

ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ ನಿರ್ಮಿತ ‘ರೈಫಲ್ ಟೆಲಿಸ್ಕೋಪ್’ ಪತ್ತೆ, ತನಿಖೆ ಆರಂಭ

22/12/2025 12:03 PM

ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಯಾರನ್ನು ಬೇಕಾದರೂ ಭೇಟಿ ಆಗಬಹುದು : ಸಿಎಂ ಸಿದ್ದರಾಮಯ್ಯ

22/12/2025 11:51 AM

ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು : ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

22/12/2025 11:37 AM
State News
KARNATAKA

ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಯಾರನ್ನು ಬೇಕಾದರೂ ಭೇಟಿ ಆಗಬಹುದು : ಸಿಎಂ ಸಿದ್ದರಾಮಯ್ಯ

By kannadanewsnow0522/12/2025 11:51 AM KARNATAKA 1 Min Read

ಮೈಸೂರು : ಮಾಜಿ ಸಚಿವ ಕೆ ಎನ್ ರಾಜಣ್ಣರನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದರು ಈ ವೇಳೆ ಕೆ.ಎನ್…

ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು : ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

22/12/2025 11:37 AM

BREAKING : ಹಾಸನದ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ : ಸ್ಥಳಕ್ಕೆ ಪೊಲೀಸರು ದೌಡು

22/12/2025 11:15 AM

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30 ಮಂದಿಗೆ ಗಾಯ!

22/12/2025 11:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.