ಬೆಂಗಳೂರು: ಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ Grow Care India Environment Excellence Award -2025 ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿದೆ.
ಕೆ ಎಸ್ ಆರ್ ಟಿ ಸಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment Management ಪ್ರಶಸ್ತಿಯು Gold Category ಯಲ್ಲಿ ಲಭಿಸಿದೆ.
ಪ್ರಶಸ್ತಿಯನ್ನು ದಿನಾಂಕ: 17-01-2026 ರಂದು ನವದೆಹಲಿಯ ಏರೋಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA)ನಿರ್ದೇಶಕಿ ಹಾಗೂ ಜಂಟಿ ಕಾರ್ಯದರ್ಶಿಯವರಾದ ಮೃಣಾಲಿನಿ ಶ್ರೀವಾಸ್ತವ, ಭಾಪೊಸೇ, ಮತ್ತು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ದೆಹಲಿ ಕ್ಯಾಂಟೋನ್ಮೆಂಟ್ ಬೋರ್ಡ್ನ ಸದಸ್ಯರಾದ ರಾಜೇಶ್ ಗೋಯಲ್ ಅವರು ಕೆ. ವೆಂಕಟೇಶ್ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಚಿತ್ರದುರ್ಗ ವಿಭಾಗರವರಿಗೆ ಪ್ರದಾನ ಮಾಡಿದರು.








