ಬೆಂಗಳೂರು: ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ನೂತನ ಉಪಾಧ್ಯಕ್ಷೆಯಾಗಿ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ.ಟಿಎಸ್ ಅವರು ಪದಗ್ರಹಣ ಮಾಡಿದರು.
ಇಂದು ಪಿಆರ್ಸಿಐ (PRCI) ಪದಗ್ರಹಣ ಮತ್ತು ಹಸ್ತಾಂತರ ಸಮಾರಂಭ ನಡೆಯಿತು. ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ವತಿಯಿಂದ ಬೆಂಗಳೂರು ಜೆ.ಪಿ.ನಗರ ಸಾಂಸ್ಕೃತಿಕ ಸಂಘದಲ್ಲಿ ಪದಗ್ರಹಣ ಹಾಗೂ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಡಾ. ದೇವಾನಂದ ಗೋಪಾಲ್ (ಡಿಆರ್ಡಿಒ ಮಾಜಿ ವಿಜ್ಞಾನಿ) ಮುಖ್ಯ ಅತಿಥಿಯಾಗಿ ಎಂ.ಬಿ. ಜಯರಾಮ್ (ಚೇರ್ಮನ್ ಎಮೆರಿಟಸ್ ಮತ್ತು ಮುಖ್ಯ ಮಾರ್ಗದರ್ಶಕರು) ಹಾಗೂ ಗೀತಾ ಶಂಕರ್ (ರಾಷ್ಟ್ರೀಯ ಅಧ್ಯಕ್ಷರು) ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಡಾ. ಟಿ. ವಿನಯ ಕುಮಾರ್ ಅವರು ಆಡಳಿತ ಮಂಡಳಿಯ (ಗವರ್ನಿಂಗ್ ಕೌನ್ಸಿಲ್) ಅಧ್ಯಕ್ಷರಾಗಿ ಹಾಗೂ ಡಾ. ಲತಾ ಟಿ.ಎಸ್., ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಕೆಎಸ್ಆರ್ಟಿಸಿ ಅವರು ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಚಿನ್ಮಯೀ ಪ್ರವೀಣ್ ಅವರು ಕಾರ್ಯದರ್ಶಿಯಾಗಿ ಪದಗ್ರಹಣ ಮಾಡಿದರು.
ಆಡಳಿತ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ಡಾ. ಬಿ.ಕೆ. ರವಿ (ಉಪಕುಲಪತಿ, ಉತ್ತರ ಬೆಂಗಳೂರು ವಿಶ್ವವಿದ್ಯಾಲಯ), ರವೀಂದ್ರನ್, ಸಿ.ಜೆ. ಸಿಂಗ್, ಆರ್.ಎನ್. ಮಹಾಪಾತ್ರ ಹಾಗೂ ಅರಿಜಿತ್ ಸಿಂಗ್ ಅವರು ಜವಾಬ್ದಾರಿ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಡಾ. ಪ್ರಶಾಂತ್ ವೇಣುಗೋಪಾಲ್ ಅವರು ಯಂಗ್ ಕಮ್ಯುನಿಕೇಟರ್ಸ್ ಕ್ಲಬ್ನ ರಾಷ್ಟ್ರೀಯ ಮುಖ್ಯಸ್ಥರಾಗಿ ಹಾಗೂ ಪಶುಪತಿ ಶರ್ಮಾ ಅವರು ಪಿಆರ್ಸಿಐಯ ಪ್ರಧಾನ ಕಾರ್ಯದರ್ಶಿಯಾಗಿ ಪದಗ್ರಹಣ ಮಾಡಿದರು.
ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ.!
BREAKING : 15 ನಿಮಿಷಗಳ ಕಾಲ `ಲಿಫ್ಟ್’ನಲ್ಲಿ ಸಿಲುಕಿದ ಕೆ.ಹೆಚ್.ಮುನಿಯಪ್ಪ, MLC ಚಂದ್ರಪ್ಪ.!








