Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಫೋನ್’ನಲ್ಲಿ ಸರ್ಕಾರದ ಈ ‘ಅಪ್ಲಿಕೇಶನ್’ ಇರ್ಲೇಬೇಕು! ಒಂದೇ ಕ್ಲಿಕ್’ನಲ್ಲಿ ವಂಚನೆ, ಹ್ಯಾಕಿಂಗ್’ನಿಂದ ನಿಮ್ಮನ್ನು ರಕ್ಷಿಸುತ್ತೆ

09/11/2025 9:24 PM

‘ಮಾರ್ವಾಡಿ’ಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.? ಅವ್ರಿಂದ ಕಲಿಯಬೇಕಾದ ಬ್ಯುಸಿನೆಸ್ ತಂತ್ರಗಳಿವು!

09/11/2025 9:02 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳೇ ಗಮನಿಸಿ: KSRTCಯಿಂದ ‘ವಿದ್ಯಾರ್ಥಿ ಬಸ್ ಪಾಸ್’ಗೆ ಅರ್ಜಿ ಆಹ್ವಾನ
KARNATAKA

ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳೇ ಗಮನಿಸಿ: KSRTCಯಿಂದ ‘ವಿದ್ಯಾರ್ಥಿ ಬಸ್ ಪಾಸ್’ಗೆ ಅರ್ಜಿ ಆಹ್ವಾನ

By kannadanewsnow0931/05/2024 6:00 PM

ಬೆಂಗಳೂರು: ಇಂದಿನಿಂದ ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದಾವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸೋ ಸಂಬಂಧ ಕೆ ಎಸ್ ಆರ್ ಟಿಸಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳುಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದಿದೆ.

ವಿದ್ಯಾರ್ಥಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ

  1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ URL-https://sevasindhuservices.karnataka.gov.in/buspassservices/
  2. ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುಧೇ ಶುಲ್ಕ ಇರುವುದಿಲ್ಲ.
  3. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
  4. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು ಆeಛಿಟಚಿಡಿಚಿಣioಟಿ ಈoಡಿmಅನ್ನು ಸೇವಾಸಿಂಧು ತಂತ್ರಾAಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ (https://ksrtc.karnataka.gov.in/studentpass)ಡೌನ್‌ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submiಣಮಾಡುವುದು.
  5. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿ ಪಾಸುಗಳನ್ನು ದಿನಾಂಕ: 01.06.2024 ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.
  6. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
  7. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ.ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ.ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನುಪಡೆಯಬಹುದಾಗಿರುತ್ತದೆ.
  8. ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in/student pass

ಹೀಗಿದೆ ವಿದ್ಯಾರ್ಥಿ ಪಾಸಿನ ದರದ ವಿವರ

  • ಪ್ರಾಥಮಿಕ ಶಾಲೆ – 10 ತಿಂಗಳ ಅವಧಿಗೆ ಸಾಮಾನ್ಯ ವಿದ್ಯಾರ್ಥಿಗಳಿಗೆ 100+ 50 ಸಂಸ್ಕರಣಾ ಶುಲ್ಕ ಸೇರಿ ರೂ.150. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ.750 ಸಾಮಾನ್ಯ ವರ್ಗದವರಿಗೆ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಪ್ರೌಢಶಾಲಾ ಬಾಲಕಿಯರಿಗೆ 10 ತಿಂಗಳಿಗೆ ರೂ.550 ಸಾಮಾನ್ಯ ವಿದ್ಯಾರ್ಥಿಗಳಿಗೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಕಾಲೇಜು, ಡಿಪ್ಲೋಮಾ ಸಾಮಾನ್ಯ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ.1050. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಐಟಿಐ 12 ತಿಂಗಳ ಸಾಮಾನ್ಯ ವಿದ್ಯಾರ್ಥಿಗಳ ಬಸ್ ಪಾಸ್ ಗೆ ರೂ.1310. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.160.
  • ವೃತ್ತಿಪರ ಕೋರ್ಸುಗಳ 10 ತಿಂಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಸ್ ಗೆ ರೂ.1550. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಸಂಜೆ ಕಾಲೇಜು, ಪಿಹೆಚ್ ಡಿ ವಿದ್ಯಾರ್ಥಿಗಳಿಗೆ 10 ತಿಂಗಳ ಸಾಮಾನ್ಯ ವಿದ್ಯಾರ್ಥಿಗಳ ಬಸ್ ಪಾಸ್ ಗೆ ರೂ.1350. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.

ವರದಿ: ವಸಂತ ಬಿ ಈಶ್ವರಗೆರೆ

BREAKING: ಮಹಿಳೆ ಅಪಹರಣ ಕೇಸಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ: ಬಂಧನದ ಭೀತಿ

ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್‌ ಈಶ್ವರಪ್ಪ ಸವಾಲು

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM1 Min Read

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM1 Min Read

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ತಡೆಯಲ್ಲ, ಮುಂದೂಡಿಕೆ: ‘KPCL EE ವಿಜಯ್ ಕುಮಾರ್’ ಸ್ಪಷ್ಟನೆ

09/11/2025 8:15 PM1 Min Read
Recent News

ನಿಮ್ಮ ಫೋನ್’ನಲ್ಲಿ ಸರ್ಕಾರದ ಈ ‘ಅಪ್ಲಿಕೇಶನ್’ ಇರ್ಲೇಬೇಕು! ಒಂದೇ ಕ್ಲಿಕ್’ನಲ್ಲಿ ವಂಚನೆ, ಹ್ಯಾಕಿಂಗ್’ನಿಂದ ನಿಮ್ಮನ್ನು ರಕ್ಷಿಸುತ್ತೆ

09/11/2025 9:24 PM

‘ಮಾರ್ವಾಡಿ’ಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.? ಅವ್ರಿಂದ ಕಲಿಯಬೇಕಾದ ಬ್ಯುಸಿನೆಸ್ ತಂತ್ರಗಳಿವು!

09/11/2025 9:02 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM
State News
KARNATAKA

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

By kannadanewsnow0909/11/2025 9:01 PM KARNATAKA 1 Min Read

ಮಡಿಕೇರಿ: ರಾಜ್ಯದಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ. 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನ…

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ತಡೆಯಲ್ಲ, ಮುಂದೂಡಿಕೆ: ‘KPCL EE ವಿಜಯ್ ಕುಮಾರ್’ ಸ್ಪಷ್ಟನೆ

09/11/2025 8:15 PM

ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’

09/11/2025 7:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.