ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ.
ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ.
ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್ನಿಂದ ವೋಲ್ವೊ ಬಸ್ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್ ತಲುಪಲಿದೆ. ನಿಮ್ಮ ಹತ್ತಿರದ ಖಾಸಗಿ ಟಿಕೆಟ್ ಕೌಂಟರ್ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ವೆಬ್ಸೈಟ್ https://www.ksrtc.in/ ಟಿಕೆಟ್ ಬುಕ್ಕಿಂಗ್ ಮಾಡಬಹುದು.
ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ.
ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ… pic.twitter.com/6ncIA0RYOG
— DIPR Karnataka (@KarnatakaVarthe) December 3, 2024
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







