Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಂತ ಹಂತವಾಗಿ ಸಮಗ್ರ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ
KARNATAKA

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಂತ ಹಂತವಾಗಿ ಸಮಗ್ರ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ಹಾಗೂ ಹೊಸದಾಗಿ ಸಮಿತಿ ರಚನೆ ಸಂಬಂಧ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸಭೆ ನಡೆಸಿದರು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಜನ ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ.

ದಿನಾಂಕ:15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ‌ ಕೆಳಕಂಡ ತೀರ್ಮಾನಗಳನ್ನು‌ ತೆಗೆದುಕೊಳ್ಳಲಾಗಿದೆ. ಆಯುಕ್ತರು, ಮುಜರಾಯಿ ಇಲಾಖೆ ಅವರು ಅಧ್ಯಕ್ಷರಾಗಿರುತ್ತಾರೆ‌

1.ದೇವಳದ ಸುತ್ತು ಗೋಪುರ (ಸುತ್ತುಪೌಳಿ) ನಿರ್ಮಾಣ.

ಇದನ್ನು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯದ ಕಟ್ಟಡದ ವಿನ್ಯಾಸಕ್ಕೆ ಸರಿ ಹೊಂದುವಂತೆ, ಮರು ವಿನ್ಯಾಸ ಮಾಡಿ, ಅನುಮತಿ ಪಡೆದು ನಿರ್ಮಿಸಲು ತೀರ್ಮಾನ

2. ಆಶ್ಲೇಷಬಲಿ, ಪೂಜಾ ಮಂದಿರ ನಿರ್ಮಾಣ:-

ಮಾಸ್ಟರ್ ಪ್ಲಾನ್ ಪ್ರಕಾರ ತುಳಸಿತೋಟದಲ್ಲಿ ಸ್ಥಳ ಗುರುತಿಸಿದ್ದು, ದೇವಾಲಯದ ಕಟ್ಟಡದ ವಿನ್ಯಾಸಕ್ಕೆ ಹೊಂದಾಣಿಕೆಯಾಗುವಂತೆ ಸ್ಥಳೀಯ ಸಂಸ್ಕೃತಿಗೆ ಅನುಗುಣವಾಗಿ ದೇವಾಲಯದ ವತಿಯಿಂದ ಅಂದಾಜು ಮತ್ತು ನಕ್ಷೆ ತಯಾರಿಸಿ ಇದರಂತೆ ನಿರ್ಮಿಸಲು ದಾನಿಗಳು ಮುಂದೆ ಬಂದಲ್ಲಿ ಅವರಿಗೆ ಅನುಮತಿ ನೀಡಲು, ಇಲ್ಲವಾದಲ್ಲಿ ದೇವಾಲಯದ ವತಿಯಿಂದ ನಿರ್ಮಿಸಲು ತೀರ್ಮಾನ.

3. ಅನ್ನದಾಸೋಹ, ಹಾಲಿ ಇರುವ ದಾಸೋಹ:-

ಹಾಲಿ ಇರುವ ದಾಸೋಹ ಉಳಿಸಿಕೊಳ್ಳಲು ಸಾಧ್ಯವಿದ್ದರೆ ಉಳಿಸಿಕೊಂಡು ವಿಸ್ತರಿಸಲು ಅಥವಾ ಹೊಸದಾಗಿ ದೊಡ್ಡದಾದ ದಾಸೋಹ ಭವನ ನಿರ್ಮಿಸಲು ಅಗತ್ಯ ಅಂದಾಜು ನಕ್ಷೆ ಸಲ್ಲಿಸಲು ತೀರ್ಮಾನ

4. ರಥ ಬೀದಿ:-

ಉತ್ತಮ ವಿನ್ಯಾಸದಲ್ಲಿ ಸ್ಥಳೀಯ ಸಂಸ್ಕೃತಿ ಬಿಂಬಿಸುವ ದೇವಾಲಯದ ವಿನ್ಯಾಸಕ್ಕೆ ಸರಿ ಹೊಂದುವಂತೆ ಒಂದು ಉತ್ತಮವಾದ ರಥದ ಬೀದಿಯಲ್ಲಿ ಭಕ್ತರು ಕೂರಲು ಉತ್ತಮ ವ್ಯವಸ್ಥೆ ನಿರ್ಮಿಸಲು ತೀರ್ಮಾನ.

5. ಕೊಠಡಿಗಳ ನಿರ್ಮಾಣ:-

ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ತಲಾ 200 ಕೊಠಡಿಗಳ 4 ಬ್ಲಾಕ್‌ನಲ್ಲಿ ಒಟ್ಟು ತೀರ್ಮಾನಿಸಲಾಯಿತು. 800 ಕೊಠಡಿಗಳ 4 ಸಂಕೀರ್ಣ ನಿರ್ಮಿಸಲು ತೀರ್ಮಾನ

6. ಶೌಚಾಲಯ ಮತ್ತು ಸ್ನಾನ ಗೃಹಗಳು:-

ಶೌಚಾಲಯ ಮತ್ತು ಸ್ನಾನಗೃಹಗಳ ಒಟ್ಟು 4 ಬ್ಲಾಕ್‌ಗಳಲ್ಲಿ ತಲಾ 24 ಶೌಚಾಲಯ ಹಾಗೂ 16 ಸ್ನಾನಗೃಹಗಳನ್ನು ನಿರ್ಮಿಸಲು ತೀರ್ಮಾನ.

7.ವಾಣಿಜ್ಯ ಸಂಕೀರ್ಣ:-

ದೇವಾಲಯಕ್ಕೆ ಬರುವ ದಾರಿಯಲ್ಲಿ ಸೂಕ್ತ ಸ್ಥಳದಲ್ಲಿ, ರಸ್ತೆ ಬದಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ತೀರ್ಮಾನ

8. ಪಾರ್ಕಿಂಗ್ ನಿರ್ಮಾಣ:-

ಉತ್ತಮ ಪಾರ್ಕಿಂಗ್ ವ್ಯವಸ್ಥೆ ಮಾಡಲು ಅಗತ್ಯವಿರುವ ಜಮೀನು ಖರೀದಿಸಲು ಕ್ರಮ

9. ಡಾರ್ಮೆಟರಿ ನಿರ್ಮಾಣ:-

50 ಕೊಠಡಿ ಹೊಂದಿರುವ ಡಾರ್ಮೆಟರಿಗಳನ್ನು ನಿರ್ಮಿಸಲು ತೀರ್ಮಾನ

10. ಕ್ಯೂ ಲೈನ್ ನಿರ್ಮಾಣ (Queue-Line Complex):-

ಎಲ್ಲಾ ಸೌಕರ್ಯಗಳನ್ನು ಹೊಂದಿರುವ ಕ್ಯೂ-ಲೈನ್ ಕಾಂಪ್ಲೆಕ್ಸ್ ಆಧುನಿಕ ವಾಗಿರುವಂತೆ ನಿರ್ಮಿಸಲು ತೀರ್ಮಾನ.

ALERT : `ಬಾಟಲ್ ನೀರು’ ಕುಡಿಯುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!

SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL

Share. Facebook Twitter LinkedIn WhatsApp Email

Related Posts

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

2 Mins Read

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

2 Mins Read

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

1 Min Read
Recent News

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

State News
KARNATAKA

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

By ಸುರೇಶ್‌ KARNATAKA 2 Mins Read

ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಸೈಬರ್ ಅಪರಾಧಿಗಳು ಹೊಸ ಹೊಸ ರೂಪದಲ್ಲಿ ಜನರನ್ನು ವಂಚಿಸುತ್ತಿದ್ದು, ಇದೀಗ ಜಿಲ್ಲೆಯ ಸರ್ಕಾರಿ ನೌಕರರೊಬ್ಬರು…

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.