Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ
KARNATAKA

ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ

By kannadanewsnow0930/09/2025 10:02 PM

ಬೆಂಗಳೂರು: “ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ.

ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, “ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.

ನನ್ನ ವಿರುದ್ಧ ಇರುವ ದಾಖಲೆ ಜನರ ಮುಂದಿಡಲಿ:

“ಕುಮಾರಸ್ವಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ ನಡೆಸುವ ಷಡ್ಯಂತ್ರ ಹೊಸತಲ್ಲ. ಈ ಹಿಂದೆ ನನ್ನ ತಂಗಿ, ತಮ್ಮ ಸೇರಿದಂತೆ ಎಲ್ಲರ ಮೇಲೂ ಪ್ರಯತ್ನ ಮಾಡಿದ್ದರು. ಇದಕ್ಕೆ ಕೊನೆ ಹಾಡಬೇಕು. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರ ಬರುತ್ತಿದೆ ಎಂದಿದ್ದಾರೆ. ಅವರಿಗೆ ಉತ್ತರ ನೀಡುತ್ತೇನೆ. ಯಾವುದಾದರೂ ಒಂದು ಪ್ರತಿಷ್ಠಿತ ಮಾಧ್ಯಮದಲ್ಲಿ ಅವರನ್ನು ಹಾಗೂ ನನ್ನನ್ನು ಕರೆಸಿ. ಈ ಹಿಂದೆ ಸಾತನೂರಿನಲ್ಲಿ ಟಿ- 20 ಪಂದ್ಯ ನಡೆದಂತೆ ನಡೆಯಲಿ. ನಾನು ವಿಧಾನಸಭೆಯಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದೆ. ಅವರು ಸಂಸತ್ತಿಗೆ ಹೊರಟು ಹೋದರು. ಅವರ ಬದಲು ಬೇರೆ ನಾಯಕರ ಜೊತೆ ಚರ್ಚೆ ಮಾಡೋಣ ಎಂದರೆ ಅವರ ಪಕ್ಷದಲ್ಲಿ ನಮಗೆ ಸರಿಸಮನಾದ ನಾಯಕರಿಲ್ಲ. ಹೀಗಾಗಿ ಮಧ್ಯಮಗಳೇ ನಮ್ಮ ನಡುವಿನ ಚರ್ಚೆಗೆ ವೇದಿಕೆ ಸಿದ್ಧಪಡಿಸಲಿ. ಈ ಹಿಂದೆ ಬಹಳಷ್ಟು ಬಾರಿ ಚರ್ಚೆಗೆ ಆಹ್ವಾನ ನೀಡಿದ್ದೆ, ಈಗಲೂ ಹೇಳುತ್ತಿದ್ದೇನೆ. ಸುಮ್ಮನೇ ಹಿಟ್ ಅಂಡ್ ರನ್ ಮಾಡುವುದಲ್ಲ. ನನ್ನ ವಿರುದ್ಧ ಅವರು ಮಾಡಿರುವ ಆರೋಪಗಳ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ. ಅವರ ಕುಟುಂಬದ ಬಗ್ಗೆ ನನ್ನ ಬಳಿ ಇರುವ ಭಂಡಾರದಿಂದ ನಾನು ದಾಖಲೆಗಳನ್ನು ತೆಗೆದು ಇಡುತ್ತೇನೆ, ಅವರು ತಮ್ಮ ಭಂಡಾರದಿಂದ ನನ್ನ ವಿರುದ್ಧ ಇರುವ ದಾಖಲೆಗಳನ್ನು ಜನರ ಮುಂದಿಡಲಿ” ಎಂದು ಕುಟುಕಿದರು.

“ಜೈಲಿಗೆ ಹಾಕುವ ಅಧಿಕಾರ ಇರುವುದು ನ್ಯಾಯಾಧೀಶರಿಗೆ ಮಾತ್ರ. ನನ್ನ ವಿಚಾರದಲ್ಲಿ ಅವರೇ ನ್ಯಾಯಾಧೀಶರಂತೆ ಮಾತನಾಡುತ್ತಿದ್ದಾರೆ. ನ್ಯಾಯದೀಶರಂತೆ ವರ್ತಿಸುತ್ತಿರುವ ಅವರೂ ಕೂಡ ನ್ಯಾಯಾಲಯಕ್ಕೆ ಹೋಗುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ನಿಯೋಗ ಹೋಗಲು ಸಿದ್ಧ:

ನೆರೆ ಪರಿಹಾರ ಸೇರಿದಂತೆ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಜೊತೆ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂಬ ಕುಮಾರಸ್ವಾಮಿ ಅವರ ಸಲಹೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಕೇಂದ್ರದ ಸಚಿವರು. ಅವರ ನೇತೃತ್ವದಲ್ಲೇ, ನಾಯಕತ್ವದಲ್ಲೇ ರಾಜ್ಯದ ನಿಯೋಗ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿಗಳ ಬಳಿ ಹೋಗಲು ಸಿದ್ಧ. ಅವರು ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದಾರೆ. ನಮ್ಮ ಸಹಕಾರ ಕೇಳಿದ್ದಾರೆ. ಅವರು ಎಲ್ಲಿ ಕೈಗಾರಿಕೆ ಸ್ಥಾಪಿಸಲು ಮುಂದಾಗುತ್ತಾರೋ ಸಂಪೂರ್ಣ ಸಹಕಾರ ನೀಡಲು ನಮ್ಮ ಸರ್ಕಾರ ಸಿದ್ಧ. ಅಥವಾ ಅವರ ಮಗ ಹೇಳಿದಂತೆ ಅವರದೇ ಜಮೀನಿನಲ್ಲಿ ಕೈಗಾರಿಕೆ ಮಾಡಿದರೂ ಅನುಮತಿ ನೀಡುತ್ತೇವೆ” ಎಂದು ತಿಳಿಸಿದರು.

ನಾನು ಬೆಂಗಳೂರಿನವನು, ನನ್ನ ಆಸ್ತಿ ಬೆಂಗಳೂರಿನಲ್ಲೇ ಇದೆ

ಬಿಡದಿ ಟೌನ್ ಶಿಪ್ ಮಾಡುತ್ತಿರುವುದು ರಿಯಲ್ ಎಸ್ಟೇಟ್ ಗಾಗಿ ಎಂಬ ಆರೋಪ ಬಗ್ಗೆ ಕೇಳಿದಾಗ, “ರಿಯಲ್ ಎಸ್ಟೇಟ್ ಬಗ್ಗೆ ಅವರಿಂದ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾನು ಬೆಂಗಳೂರಿನವನು ನನ್ನ ಆಸ್ತಿ ಬೆಂಗಳೂರು ಜಿಲ್ಲೆಯಲ್ಲೇ ಇದೆ. ನಾನು ಹೊರಗಿನಿಂದ ಬಂದು ಜಮೀನು ತೆಗೆದುಕೊಂಡಿಲ್ಲ” ಎಂದು ಹರಿಹಾಯ್ದರು.

ಕುಮಾರಸ್ವಾಮಿಯೇ ದೂರು ನೀಡಿ ತನಿಖೆ ಮಾಡಿಸಲಿ

ಬ್ರಾಹ್ಮಣರ ಜಮೀನು ಲೂಟಿ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಈಗಲೂ ಅಧಿಕೃತವಾಗಿ ದೂರು ಕೊಡಿಸಿ, ತನಿಖೆ ಮಾಡಿಸಲಿ. ನನಗೆ ಅಂತಹ ದಾರಿದ್ರ್ಯ ಬಂದಿಲ್ಲ” ಎಂದು ತಿಳಿಸಿದರು.

ನೆರೆ ಪೀಡಿತ ಪ್ರದೇಶಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕೇಳಿದಾಗ, “ಸಂಬಂಧ ಪಟ್ಟ ಎಲ್ಲಾ ಸಚಿವರು ಹೋಗಿದ್ದಾರೆ, ಮುಖ್ಯಮಂತ್ರಿಗಳು ಕೂಡ ಹೋಗಿ ಪರಿಶೀಲನೆ ಮಾಡಿದ್ದಾರೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕಂಜೆಕ್ಷನ್ ಶುಲ್ಕ ವಿಧಿಸಲು ತೀರ್ಮಾನಿಸಲಾಗಿದೆಯೇ ಎಂದು ಕೇಳಿದಾಗ, “ಅದೆಲ್ಲವೂ ಸುಳ್ಳು, ಕೆಲವು ಉದ್ಯಮಿಗಳು ಬೆಂಗಳೂರಿನ ನಾಗರೀಕರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಬೆಂಗಳೂರಿನ ಬಗ್ಗೆ ಆಸಕ್ತಿ ಇರುವವರು ಕೆಲವು ಸಲಹೆ ನೀಡುತ್ತಾರೆ. ನಾವು ಆ ಸಲಹೆಗಳನ್ನು ಪರಿಶೀಲನೆ ಮಾಡುತ್ತೇವೆ. ಇದನ್ನು ಕೇಂದ್ರ ಬಿಜೆಪಿ ಸರ್ಕಾರದ ಮುಂದಿಟ್ಟಿರುವ ಪ್ರಸ್ತಾಪವಿರಬೇಕು, ನಮ್ಮ ಮುಂದೆ ಇಂತಹ ಯಾವುದೇ ಪ್ರಸ್ತಾಪಗಳಿಲ್ಲ” ಎಂದು ತಿಳಿಸಿದರು.

ನಿಮ್ಮ ಸರ್ಕಾರಿ ನಿವಾಸದ ಮನೆ ಮುಂದೆ ಕಳಪೆ ರಸ್ತೆ ಕಾಮಗಾರಿ ನಡೆಸಿದ್ದು, ಈಗ ಮತ್ತೆ ದುರಸ್ತಿ ಮಾಡಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಶಾಸಕರ ಕ್ಷೇತ್ರಗಳ ಎಲ್ಲ ಕಾಮಗಾರಿಗಳೂ ಕಳಪೆಯೇ” ಎಂದು ಹೇಳಿದರು.

ಸಂಪುಟ ಪುನಾರಚನೆಯ ವಿಚಾರವಾಗಿ ಕೆಲವು ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರವಾಗಿ ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಇರುವವರು ಮಾತನಾಡುತ್ತಾರೆ” ಎಂದರು.

BREAKING: ಮಧ್ಯ ಫಿಲಿಪೈನ್ಸ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ | Earthquake In Philippines

BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ

Share. Facebook Twitter LinkedIn WhatsApp Email

Related Posts

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM1 Min Read

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM1 Min Read

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM2 Mins Read
Recent News

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಕಾಲೇಜುಗಳು ತಮ್ಮ ಪ್ರವೇಶ ರದ್ದುಗೊಳಿಸುವ ವಿದ್ಯಾರ್ಥಿಗಳಿಗೆ ‘ಶುಲ್ಕ’ ಮರು ಪಾವತಿಸುವುದು ಕಡ್ಡಾಯ ; UGC

09/11/2025 9:48 PM
State News
KARNATAKA

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

By kannadanewsnow0909/11/2025 10:13 PM KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ…

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.