Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ

ಟ್ರಂಪ್ ಶಾಂತಿ ಪ್ರಸ್ತಾವನೆ: ಆತುರವಿಲ್ಲ ಎಂದ ಇರಾನ್; ‘ತಮ್ಮದೇ ವೇಗ’ದಲ್ಲಿ ಪರೀಶಿಲನೆ ನಡೆಸುತ್ತಿರುವ ಟೆಹ್ರಾನ್ !

ಹಾರ್ಮುಜ್ ಜಲಸಂಧಿ ಬಳಿಕ ಹಡಗಿನಲ್ಲಿ ಆಕಸ್ಮಿಕ ಅಗ್ನಿ ಅವಘಡ: ಓರ್ವ ಭಾರತೀಯ ಸಾವು, ನಾಲ್ವರಿಗೆ ಗಂಭೀರ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: DKS
KARNATAKA

ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: DKS

By kannadanewsnow09

ಬೆಂಗಳೂರು : “ಕುಮಾರಸ್ವಾಮಿ-ಜಮೀರ್ ಅವರ ಸಂಬಂಧ ಗಳಸ್ಯ-ಕಂಠಸ್ಯ ರೀತಿಯದು. ಅವರ ನಡುವಣ ಮಾತುಕತೆ ಅವರ ವೈಯಕ್ತಿಕ ವಿಚಾರ. ಅದರಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿ ದೂರು ನೀಡಲಿ:

ಉಪಚುನಾವಣೆ ಪ್ರಚಾರದ ವೇಳೆ ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಕೇಳಿದಾಗ, “ಅವರಿಬ್ಬರ ನಡುವೆ ಹಳೆಯ ಸ್ನೇಹ ಇದೆ. ಜಮೀರ್ ಅವರು ಕುಮಾರಸ್ವಾಮಿ ಯಾವ ಚಡ್ಡಿ ಹಾಕಿದ್ದಾರೆ ನೋಡಿದ್ದೇನೆ ಎನ್ನುತ್ತಾರೆ. ಕುಮಾರಸ್ವಾಮಿ ಕೂಡ ಜಮೀರ್ ಅವರ ಬಗ್ಗೆ ನನಗೆ ಗೊತ್ತು ಎನ್ನುತ್ತಾರೆ. ಜಮೀರ್ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಾ? ಅವರ ನಡುವೆ ಸ್ನೇಹದಲ್ಲಿ ಹಿಂದೆಂದೂ ಇಂತಹ ಮಾತು ಬಂದಿಲ್ಲವಾದರೆ ಕುಮಾರಸ್ವಾಮಿ ಅವರು ಜಮೀರ್ ವಿರುದ್ಧ ಜನಾಂಗೀಯ ನಿಂದನೆ ದೂರು ನೀಡಲಿ” ಎಂದರು.

ವೈಯಕ್ತಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ:

ಜಮೀರ್ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತೀರಾ ಎಂದು ಕೇಳಿದಾಗ, “ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಅವರಿಬ್ಬರ ನಡುವಣ ವೈಯಕ್ತಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದು ಬೇಡ. ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಇದ್ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ಇವರು ಅವರಿಗೆ ಡ್ರೈವರ್ ಆಗಿದ್ದರೋ, ಡ್ರೈವರ್ ಓನರ್ ಕೆಲಸ ಮಾಡಿದ್ದರೋ ಅವರಿಬ್ಬರಿಗೆ ಗೊತ್ತು. ನನಗೆ ಆತ್ಮೀಯರಾಗಿರುವ ಅಲ್ಪಸಂಖ್ಯಾತ ಸಮುದಾಯದವರನ್ನು ಸಾಬ್ರೆ ಎಂದು ಕರೆಯುತ್ತೇವೆ. ಕೆಲವರನ್ನು ಗೌಡ ಎಂದು ಕರೆಯುತ್ತೇವೆ. ಇದು ಪ್ರೀತಿ ವಿಶ್ವಾಸದಲ್ಲಿ ನಡೆಯುವ ಸಂಭಾಷಣೆ. ಕುಮಾರಸ್ವಾಮಿ ಮೇಲೆ ಜಮೀರ್ ಗೆ ಪ್ರೀತಿ. ಕುಮಾರಸ್ವಾಮಿ ಕೂಡ ಪ್ರೀತಿಯಿಂದ ಇವರನ್ನು ಕುಳ್ಳ ಎಂದು ಕರೆಯುತ್ತಾರಂತೆ. ಇದರಲ್ಲಿ ರಾಜಕಾರಣ ಬೇಕೇ” ಎಂದು ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಇದರ ಪರಿಣಾಮ ಬೀರುವುದಿಲ್ಲವೇ ಎಂದು ಕೇಳಿದಾಗ, “ಚನ್ನಪಟ್ಟಣ ಹಾಗೂ ಬೇರೆ ಎಲ್ಲೂ ಯಾವ ಪರಿಣಾಮವನ್ನೂ ಬೀರುವುದಿಲ್ಲ. ವಿರೋಧ ಪಕ್ಷದವರು ಸೋಲಿನ ಭಯದಿಂದ ಇದಕ್ಕೆ ಬಣ್ಣ ಹಚ್ಚಿ ಟ್ವೀಟ್ ಮಾಡುತ್ತಿದ್ದಾರೆ, ಮಾಡಿಕೊಳ್ಳಲಿ” ಎಂದು ಹೇಳಿದರು.

ಗುತ್ತಿಗೆಯಲ್ಲಿ ಮೀಸಲಾತಿ ಪ್ರಸ್ತಾವನೆ ಇಲ್ಲ:

ಕಾಮಗಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಪ್ರಸ್ತಾವನೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು. ವಿರೋಧಿಗಳು ಚುನಾವಣೆ ಸಮಯದಲ್ಲಿ ಪ್ರಚಾರ ಪಡೆಯಲು ಈ ರೀತಿ ಸುಳ್ಳು ಹಬ್ಬಿಸುತ್ತಿದ್ದಾರೆ. ಅಧಿಕಾರಿಯುತ ಸ್ಥಾನದಲ್ಲಿದ್ದುಕೊಂಡು ಹೇಳುತ್ತಿದ್ದೇನೆ, ನಮ್ಮ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆಗಳಿಲ್ಲ. ಈ ಹಿಂದೆ ಪರಿಶಿಷ್ಟ ಜಾತಿಯವರಿಗೆ ಈ ಅವಕಾಶ ನೀಡಲು ಮುಂದಾಗಿದ್ದೆವು. ಅದರ ಹೊರತಾಗಿ ಅಲ್ಪಸಂಖ್ಯಾತರು, ಮುಸಲ್ಮಾನರಿಗೆ ಈ ಮೀಸಲಾತಿ ನೀಡುವ ಚರ್ಚೆ ಇಲ್ಲ” ಎಂದು ಸ್ಪಷ್ಟನೆ ನೀಡಿದರು.

ಸೋಲುವ ಭಯದಿಂದ ಬಿಜೆಪಿ ಸುಳ್ಳಿನ ಕಂತೆ:

“ಚುನಾವಣೆ ಸಮಯದಲ್ಲಿ ಬಿಜೆಪಿ ಇಂತಹ ಸುಳ್ಳು ಹಬ್ಬಿಸುತ್ತಿದ್ದಾರೆ. ಚುನಾವಣೆ ಸೋಲುವ ಭಯದಿಂದ ಬೆಳ್ಳಿ ಬಟ್ಟಲು, ದೇವರ ಫೋಟೊ, ಹರಿಷಿನ ಕುಂಕುಮ, ಹಣ ಹಂಚಿ ಚುನಾವಣೆ ಮಾಡುತ್ತಿದ್ದಾರೆ. ಅವರು ಮಾತನಾಡುತ್ತಿರುವುದೆಲ್ಲಾ ಸುಳ್ಳಿನ ಕಂತೆ” ಎಂದು ವಾಗ್ದಾಳಿ ನಡೆಸಿದರು.

ರಾಜ್ಯ, ಜನರ ಹಿತ ಕಾಯುತ್ತೇವೆ:

ಬಂಡೀಪುರ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಮತ್ತೆ ಅವಕಾಶ ನೀಡಲಾಗುವುದೇ ಎಂದು ಕೇಳಿದಾಗ, “ಬಂಡೀಪುರ ಭಾಗದ ಜನಪ್ರತಿನಿಧಿಗಳು ನನ್ನ ಬಳಿ ಚರ್ಚೆ ಮಾಡಿದ್ದು, ಎರಡೂ ರಾಜ್ಯಗಳ ಸರ್ಕಾರಗಳ ಜತೆ ಚರ್ಚೆ ಮಾಡಿ, ಎರಡೂ ರಾಜ್ಯಗಳಿಗೂ ಯಾವರೀತಿ ಅನುಕೂಲ ಮಾಡಿಕೊಡಲಾಗುವುದು ಎಂದು ತೀರ್ಮಾನ ಮಾಡಲಾಗುವುದು. ರಾಜ್ಯದ ಹಿತ, ಜನರ ಹಿತ ಕಾಪಾಡಿಕೊಂಡು ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ತಮ್ಮದು ಹಿಟ್ಲರ್, ಕೊತ್ವಾಲ್ ಸಂಸ್ಕೃತಿ ಎಂದು ಬಿಜೆಪಿ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, “ಅವರು ನನಗೆ ಹಿಟ್ಲರ್ ಹೆಸರು ನೀಡುತ್ತಿದ್ದಾರಲ್ಲಾ ನಾನು ಅದನ್ನು ಸ್ವೀಕರಿಸುತ್ತೇನೆ. ನನ್ನ ಮನೆ ಮುಂದೆ ಬೋರ್ಡ್ ತಂದು ಹಾಕಲಿ” ಎಂದು ತಿಳಿಸಿದರು.

Job Alert: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯದ SC, ST ಸಮುದಾಯದ ರೈತರ ಗಮನಕ್ಕೆ: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

1 Min Read

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

1 Min Read

BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!

2 Mins Read
Recent News

Shocking: ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ

ಟ್ರಂಪ್ ಶಾಂತಿ ಪ್ರಸ್ತಾವನೆ: ಆತುರವಿಲ್ಲ ಎಂದ ಇರಾನ್; ‘ತಮ್ಮದೇ ವೇಗ’ದಲ್ಲಿ ಪರೀಶಿಲನೆ ನಡೆಸುತ್ತಿರುವ ಟೆಹ್ರಾನ್ !

ಹಾರ್ಮುಜ್ ಜಲಸಂಧಿ ಬಳಿಕ ಹಡಗಿನಲ್ಲಿ ಆಕಸ್ಮಿಕ ಅಗ್ನಿ ಅವಘಡ: ಓರ್ವ ಭಾರತೀಯ ಸಾವು, ನಾಲ್ವರಿಗೆ ಗಂಭೀರ ಗಾಯ!

ಮೈದಾನದ ಬಳಿಕ ಈಗ ತೆರೆಯ ಮೇಲೆ ‘ಹಿಟ್‌ಮ್ಯಾನ್’ ಅಬ್ಬರ! ರೋಹಿತ್ ಶರ್ಮಾ ಟಿವಿ ಡೆಬ್ಯೂಗೆ ಕ್ಷಣಗಣನೆ

State News
KARNATAKA

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

By kannadanewsnow09 KARNATAKA 1 Min Read

ಬೇಲೂರು: ಮರಗಳನ್ನೇ ಮಕ್ಕಳಂತೆ ಪ್ರೀತಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಪ್ರಕೃತಿ ಪರಿಸರದ ಮೇಲೆ ಪ್ರೀತಿ ಹೊಂದಿದ್ದರು. ಅವರ ಹೆಸರಲ್ಲಿ 25…

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!

ಈ ತಿಂಗಳ ಕೊನೆಯಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಸಮಸ್ಯೆ ಬಗೆಹರಿಯಲಿದೆ : ಕೆ.ಎಚ್ ಮುನಿಯಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.