Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರಿ ಪ್ರಮಾಣದ ಹೋಗೆ : ತಪ್ಪಿದ ಭಾರಿ ಅನಾಹುತ!

16/05/2025 7:49 PM

ಸಚಿವ ಕೃಷ್ಣಬೈರೇಗೌಡರ ಸಾಕಷ್ಟು ಶ್ರಮದಿಂದ, ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ

16/05/2025 7:43 PM

BREAKING : 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ ಕೋರ್ಟ್!

16/05/2025 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಮ್ಮ ಶಾಸಕರಿಗೆ ‘HD ಕುಮಾರಸ್ವಾಮಿ’ ಆಫರ್: ‘ಡಿಸಿಎಂ ಡಿ.ಕೆ ಶಿವಕುಮಾರ್’ ಸ್ಪೋಟಕ ಹೇಳಿಕೆ
KARNATAKA

BIG NEWS: ನಮ್ಮ ಶಾಸಕರಿಗೆ ‘HD ಕುಮಾರಸ್ವಾಮಿ’ ಆಫರ್: ‘ಡಿಸಿಎಂ ಡಿ.ಕೆ ಶಿವಕುಮಾರ್’ ಸ್ಪೋಟಕ ಹೇಳಿಕೆ

By kannadanewsnow0919/02/2024 2:24 PM

ಬೆಂಗಳೂರು : “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಸೋಮಶೇಖರ್, ಗೋಪಾಲಯ್ಯ ಜತೆ ವೈಯಕ್ತಿಕ ಬಾಂಧವ್ಯವಿದೆ

ಸೋಮಶೇಖರ್ ಅವರ ಜತೆ ವಿಮಾನ ಪ್ರಯಾಣ ಹಾಗೂ ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ” ಎಂದು ತಿಳಿಸಿದರು.

ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ತಿಳಿಸಿದರು.

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ

ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಜಾತಿ ಕೆಡಿಸಿ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.

ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಅವರು ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ.

ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?

“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದರು.

ಯುವಜನರೇ ಗಮನಿಸಿ : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿ ನೋಂದಣಿ ಮಾಡಿಕೊಳ್ಳಿ!

ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು

Share. Facebook Twitter LinkedIn WhatsApp Email

Related Posts

BREAKING : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರಿ ಪ್ರಮಾಣದ ಹೋಗೆ : ತಪ್ಪಿದ ಭಾರಿ ಅನಾಹುತ!

16/05/2025 7:49 PM1 Min Read

ಸಚಿವ ಕೃಷ್ಣಬೈರೇಗೌಡರ ಸಾಕಷ್ಟು ಶ್ರಮದಿಂದ, ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ

16/05/2025 7:43 PM2 Mins Read

ಕಲಬುರ್ಗಿ : ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಇಬ್ಬರು ಸಾವು!

16/05/2025 7:25 PM1 Min Read
Recent News

BREAKING : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರಿ ಪ್ರಮಾಣದ ಹೋಗೆ : ತಪ್ಪಿದ ಭಾರಿ ಅನಾಹುತ!

16/05/2025 7:49 PM

ಸಚಿವ ಕೃಷ್ಣಬೈರೇಗೌಡರ ಸಾಕಷ್ಟು ಶ್ರಮದಿಂದ, ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ

16/05/2025 7:43 PM

BREAKING : 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ ಕೋರ್ಟ್!

16/05/2025 7:36 PM

BIG NEWS: ಶೀಘ್ರದಲ್ಲೇ DRDO ಹೈಪರ್‌ಸಾನಿಕ್ ಕ್ಷಿಪಣಿಯನ್ನು ಹೊರತರಲಿದೆ: ವಿಜ್ಞಾನಿ ಸುಧೀರ್ ಮಿಶ್ರಾ | Hypersonic Missile

16/05/2025 7:28 PM
State News
KARNATAKA

BREAKING : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರಿ ಪ್ರಮಾಣದ ಹೋಗೆ : ತಪ್ಪಿದ ಭಾರಿ ಅನಾಹುತ!

By kannadanewsnow0516/05/2025 7:49 PM KARNATAKA 1 Min Read

ಹಾಸನ : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಭಾರಿ ಪ್ರಮಾಣದ ಹೊಗೆ ಕಾಣಿಸಿಕೊಂಡಿದ್ದು, ಎಸಿ ಟರ್ಬೋ ಗ್ಯಾಸ್ ಸೋರಿಕೆಯಾಗಿ ಬಸ್…

ಸಚಿವ ಕೃಷ್ಣಬೈರೇಗೌಡರ ಸಾಕಷ್ಟು ಶ್ರಮದಿಂದ, ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ

16/05/2025 7:43 PM

ಕಲಬುರ್ಗಿ : ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಇಬ್ಬರು ಸಾವು!

16/05/2025 7:25 PM

ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

16/05/2025 7:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.