Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM

ಯುಪಿಐ ಬಳಕೆದಾರರೇ ಗಮನಿಸಿ: ಎರಡು ಬ್ಯಾಂಕ್ ಖಾತೆ ಹೊಂದುವುದು ಲಾಭವೇ ಅಥವಾ ನಷ್ಟವೇ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

07/05/2026 6:09 AM

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ರಾಜಕಾರಣ ನಡೆಯಲ್ಲ: ಡಿ.ಕೆ. ಸುರೇಶ್
KARNATAKA

ನಮ್ಮನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ರಾಜಕಾರಣ ನಡೆಯಲ್ಲ: ಡಿ.ಕೆ. ಸುರೇಶ್

By kannadanewsnow0924/06/2024 6:58 PM

ಬೆಂಗಳೂರು : “ಡಿ.ಕೆ. ಶಿವಕುಮಾರ್ ಹಾಗು ನನ್ನನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ಅವರ ರಾಜಕಾರಣ ಹಾಗು ದಿನಚರಿ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ಸದಾಶಿವನಗರ ನಿವಾಸದ ಬಳಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಡಿ.ಕೆ. ಸಹೋದರರ ಗುಲಾಮರಾಗಬೇಡಿ ಎಂದು ಕುಮಾರಸ್ವಾಮಿ ಅವರು ಚನ್ನಪಟ್ಟಣದ ಅಧಿಕಾರಿಗಳಿಗೆ ತಿಳಿಸಿರುವ ಬಗ್ಗೆ ಕೇಳಿದಾಗ ಅವರು “ಕುಮಾರಸ್ವಾಮಿ ಅವರು ಪ್ರತಿ ವಿಚಾರದಲ್ಲೂ ನಮ್ಮ ಹೆಸರನ್ನು ಎಳೆದುತರುತ್ತಾರೆ. ಚನ್ನಪಟ್ಟಣ ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ, ಸಭೆಗಳ ಬಗ್ಗೆ ಮಾಧ್ಯಮಗಳಲ್ಲಿ ದಾಖಲೆಗಳಿವೆ. ಅವರು ಚನ್ನಪಟ್ಟಣ ಎಷ್ಟು ಬಾರಿ ಬಂದಿದ್ದಾರೆ ಎಂಬ ದಾಖಲೆ ನಿಮ್ಮ ಬಳಿ ಇದೆ. ನೀವೇ ಪರಿಶೀಲನೆ ಮಾಡಿ ಜನರ ಮುಂದೆ ಇಡಿ” ಎಂದು ಮನವಿ ಮಾಡಿದರು.

ಸುಳ್ಳು ಹೇಳಿ ದಾರಿತಪ್ಪಿಸುವುದನ್ನು ಕಡಿಮೆ ಮಾಡಲಿ:

ಮುಂದೆ ನಮ್ಮ ಸರ್ಕಾರ ಬರುತ್ತದೆ ಎಂದು ಅಧಿಕಾರಿಗಳಿಗೆ ಬೆದರಿಸಿರುವ ಬಗ್ಗೆ ಕೇಳಿದಾಗ, “ಜನ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದು ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿದ್ದಾರೆ. ಅವರು ಜನರನ್ನು ಹಾಗು ಅಧಿಕಾರಿಗಳನ್ನು ಮೊದಲಿನಿಂದಲೂ ಬೆದರಿಸಿಕೊಂಡು ಬಂದಿದ್ದು, ಈಗಲೂ ಅದನ್ನೇ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಅವರು ಸುಳ್ಳು ಹೇಳಿ ಜನರ ದಾರಿತಪ್ಪಿಸುವುದನ್ನು ಕಡಿಮೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದು ತಿಳಿಸಿದರು.

ಎಲ್ಲಾ ಸಮುದಾಯಕ್ಕೂ ಡಿಸಿಎಂ ಹುದ್ದೆ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು:

ಪಕ್ಷದಲ್ಲಿ ಮೂವರು ಡಿಸಿಎಂ ಹುದ್ದೆ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, “ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಪಕ್ಷ ತೀರ್ಮಾನ ಮಾಡಿ ಇನ್ನು ಐವರನ್ನು ಡಿಸಿಎಂ ಮಾಡಿದರೆ ಒಳ್ಳೆಯದು. ಎಂಟು ಬಾರಿ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ, ಎಂಟು ವರ್ಷಗಳ ಕಾಲ ಪಕ್ಷದ ಅಧ್ಯಕ್ಷರಾಗಿದ್ದ ಪರಮೇಶ್ವರ್, ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿರುವ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಎಂ.ಬಿ ಪಾಟೀಲ್, ಒಕ್ಕಲಿಗ ಸಮುದಾಯದಲ್ಲಿ ಕೃಷ್ಣ ಭೈರೇಗೌಡ, ಮಂಡ್ಯದಿಂದ ಚೆಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಆರ್.ವಿ ದೇಶಪಾಂಡೆ, ಕೆ.ಹೆಚ್ ಮುನಿಯಪ್ಪ ಇದ್ದಾರೆ. ಹೀಗೆ ಎಲ್ಲಾ ಸಮುದಾಯಕ್ಕೂ ಡಿಸಿಎಂ ಹುದ್ದೆ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು. ಆಮೂಲಕ ಪಕ್ಷ ಬಲವರ್ಧನೆ ಮಾಡಬೇಕು. ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.

ಜನರ ತೀರ್ಮಾನದಂತೆ ಉಪಚುನಾವಣೆ ಅಭ್ಯರ್ಥಿ:

ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂದು ಕೇಳಿದಾಗ, “ಜನ ಯಾರನ್ನು ಬಯಸುತ್ತಾರೋ ಅವರು ಸ್ಪರ್ಧಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ. ಅವರ ಸೂಚನೆಯಂತೆ ಪಕ್ಷ ನಡೆಯುತ್ತದೆ. ರಾಮನಗರ ಜಿಲ್ಲೆ ನಮ್ಮ ಸ್ವಂತ ಜಿಲ್ಲೆ. ಪಕ್ಷದ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿಯಾಗಿ ಶಿವಕುಮಾರ್ ಅವರ ಮೇಲೆ ಜವಾಬ್ದಾರಿ ಇದೆ. ಕ್ಷೇತ್ರದಲ್ಲಿ ಶಾಸಕರು ಇಲ್ಲದ ಕಾರಣ ಶಿವಕುಮಾರ್ ಅವರು ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಜನ ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ನಿಮ್ಮ ಮುಂದಿನ ನಡೆ ಏನು ಎಂದು ಕೇಳಿದಾಗ, “ಸಾಮಾನ್ಯ ಕಾರ್ಯಕರ್ತನಾಗಿ, ಕ್ಷೇತ್ರದ ಜನರ ಕಷ್ಟಸುಖ ಕೇಳುತ್ತಾ, ರಾಜ್ಯದ ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಸೋತು ಒಂದು ತಿಂಗಳೂ ಆಗಿಲ್ಲ, ಮತ್ತೆ ಸ್ಪರ್ಧೆ ಮಾಡಿದರೆ ಜನ ನಗುತ್ತಾರೆ:

ಚನ್ನಪಟ್ಟಣದಲ್ಲಿ ಸುರೇಶ್ ಅವರು ಸ್ಪರ್ಧೆ ಮಾಡುವುದಿಲ್ಲವೇ ಎಂದು ಕೇಳಿದಾಗ, “ಜನ ನನ್ನನ್ನು ತಿರಸ್ಕಾರ ಮಾಡಿದ್ದಾರೆ. ನಾನು ಸೋತು ಇನ್ನು ಒಂದು ತಿಂಗಳೂ ಕಳೆದಿಲ್ಲ. ಮತ್ತೆ ಚುನಾವಣೆ ಸ್ಪರ್ಧೆ ಮಾಡಿದರೆ ಜನ ನಗುತ್ತಾರೆ. ಜನ ಹೇಳಬಹುದು. ಆದರೆ ಸ್ಪರ್ಧಿಸುವ ಮನಸ್ಥಿತಿ ನಮಗೂ ಇರಬೇಕು. ಜನ ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದು, ಬೇರೆಯವರಿಗೆ ಕೆಲಸ ಮಾಡಲು ಹೇಳಿದ್ದಾರೆ. ಬೇರೆಯವರು ಕೆಲಸ ಮಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ. ಚನ್ನಪಟ್ಟಣದ ಜನ ನಮ್ಮ ಸ್ವಂತ ಜನ. ಮೊದಲಿಂದಲೂ ಅವರ ಜತೆ ಒಡನಾಟವಿದೆ. ವಿಶೇಷವಾಗಿ ಲೋಕಸಭೆಯಲ್ಲಿ ಈ ಜನ ಉತ್ತಮ ಬೆಂಬಲ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಪಕ್ಷಕ್ಕೆ ನೆಲೆ ಇದೆ. ಆದರೆ ಅಧಿಕಾರದ ಆಸೆಗೆ ಪಕ್ಷಾಂತರ ಮಾಡಿದ ಪರಿಣಾಮ ನಮಗೆ ಹಿನ್ನಡೆ ಆಗುತ್ತಿತ್ತು” ಎಂದು ತಿಳಿಸಿದರು.

ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಿದರೆ ತಪ್ಪಾಗುತ್ತದೆ:

ಸೂರಜ್ ರೇವಣ್ಣ ಅವರ ಪ್ರಕರಣದ ಬಗ್ಗೆ ಕೇಳಿದಾಗ, “ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿಚಾರ. ಅವರ ಬಗ್ಗೆ ನಾವು ಮಾತನಾಡಿದರೆ ತಪ್ಪಾಗುತ್ತದೆ. ಹೀಗಾಗಿ ನೀವು ಮಾತನಾಡಬೇಡಿ. ರಾಜ್ಯದ ಜನ ಗಮನಿಸುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.

ಷಡ್ಯಂತ್ರಕ್ಕೆ ಹೆದರಲ್ಲ, ಓಡಿಹೋಗಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಯಾವ ಕಾರಣಕ್ಕೆ, ಯಾರನ್ನು ಉದ್ದೇಶಿಸಿ ಹೇಳಿದ್ದಾರೆ ಗೊತ್ತಿಲ್ಲ. ಅವರ ರಕ್ಷಣೆಗಾಗಿ ಬೇರೆಯವರ ಮೇಲೆ ಹೇಳುವುದು ಅಭ್ಯಾಸವಾಗಿದೆ. ಬೇರೆಯವರ ಹೆಸರು ಹೇಳಿ ತಾವು ರಕ್ಷಣೆ ಪಡೆಯುವ ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಗಮನಿಸಿ: ಕೆಇಎಯಿಂದ ಡಿಸಿಇಟಿ-2024ರ ಪರೀಕ್ಷೆಯ ‘ತಾತ್ಕಾಲಿಕ ಕೀ ಉತ್ತರ’ ಪ್ರಕಟ

ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM2 Mins Read

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM1 Min Read

BIG NEWS :ರಾಜ್ಯದಲ್ಲಿ ಮರ್ಯಾದೆ ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಕಾಯ್ದೆ’ ಜಾರಿ

07/05/2026 5:54 AM2 Mins Read
Recent News

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM

ಯುಪಿಐ ಬಳಕೆದಾರರೇ ಗಮನಿಸಿ: ಎರಡು ಬ್ಯಾಂಕ್ ಖಾತೆ ಹೊಂದುವುದು ಲಾಭವೇ ಅಥವಾ ನಷ್ಟವೇ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

07/05/2026 6:09 AM

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ : 365 ರೂ. ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಗ್ರೀನ್ ಸಿಗ್ನಲ್!

07/05/2026 6:03 AM
State News
KARNATAKA

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

By kannadanewsnow0907/05/2026 6:10 AM KARNATAKA 2 Mins Read

ಬೆಂಗಳೂರು: ಶೈಕ್ಷಣಿಕ ದಾಖಲೆಗಳ ನೈಜತೆಯನ್ನು ಕಾಪಾಡಲು ಮತ್ತು ನಕಲಿ ಅಂಕಪಟ್ಟಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ…

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM

BIG NEWS :ರಾಜ್ಯದಲ್ಲಿ ಮರ್ಯಾದೆ ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಕಾಯ್ದೆ’ ಜಾರಿ

07/05/2026 5:54 AM

BIG NEWS: ರಾಜ್ಯದಲ್ಲೊಂದು ‘ಅರಣ್ಯ ಇಲಾಖೆಯ ನಡುತೋಪು’ ಅಕ್ರಮ ಕಡಿತಲೆ: ಕಣ್ಮುಚ್ಚಿ ಕುಳಿತ ‘ಅರಣ್ಯಾಧಿಕಾರಿ’ಗಳು!

06/05/2026 9:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.