Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಐಸಿಸಿ ನೂತನ CEO ಆಗಿ ಸಂಜೋಗ್ ಗುಪ್ತಾ ನೇಮಕ

07/07/2025 1:41 PM

BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ

07/07/2025 1:37 PM

Big News: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ, ಪೊಲೀಸ್, ಬಾಂಬ್ ಸ್ಕ್ವಾಡ್ ಮತ್ತು ಕೋಸ್ಟ್ ಗಾರ್ಡ್ ನಿಯೋಜನೆ

07/07/2025 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಂಭಮೇಳ ಕಾಲ್ತುಳಿತ ದುರಂತ: ಇಂದು ಸಂಜೆ ಬೆಳಗಾವಿಗೆ ಮೃತದೇಹಗಳು ತಲುಪಲಿವೆ- ಸಚಿವ ಕೃಷ್ಣಭೈರೇಗೌಡ
KARNATAKA

ಕುಂಭಮೇಳ ಕಾಲ್ತುಳಿತ ದುರಂತ: ಇಂದು ಸಂಜೆ ಬೆಳಗಾವಿಗೆ ಮೃತದೇಹಗಳು ತಲುಪಲಿವೆ- ಸಚಿವ ಕೃಷ್ಣಭೈರೇಗೌಡ

By kannadanewsnow0930/01/2025 5:16 PM

ಬೆಂಗಳೂರು: ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಬಲಿಯಾದ ಕರ್ನಾಟಕದ ನಾಲ್ಕು ಜನರ ಮೃತದೇಹವನ್ನು ವಿಮಾನದ ಮೂಲಕ ಇಂದು ಸಂಜೆ ಬೆಳಗಾವಿಗೆ ರವಾನಿಸಲಾಗುವುದು. ನಂತರ ಕುಟುಂಬಸ್ಥರಿಗೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, “ಕುಂಭಮೇಳ ದುರಂತದಲ್ಲಿ ಬೆಳಗಾವಿ ತಾಲೂಕು ಯಲ್ಲೂರು ರಸ್ತೆ ವಡಗಾಂವ್ ಭಾಗದ ಮೇಘಾ ದೀಪಕ್ ಹತ್ತರವರ್ (24), ಜ್ಯೋತಿ ದೀಪಕ್ ಹತ್ತರವರ್ (44) ಹಾಗೂ ಬೆಳಗಾವಿ ತಾಲೂಕಿನ ಶೆಟ್ಟಿಗಲ್ಲಿ ಭಾಗದ ಅರುಣಾ ಖೋರ್ಪಡೆ (61), ಮಹಾದೇವಿ ಹಣಮಂತ ಬಾವಣೂರ (48) ಮೃತಪಟ್ಟಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯವರಾಗಿದ್ದು, ದೆಹಲಿಯಿಂದ ಬೆಳಗಾವಿಗೆ ವಿಮಾನದ ಮೂಲಕ ಮೃತದೇಹಗಳನ್ನು ಇಂದು ಸಂಜೆ ರವಾನಿಸಲಾಗುವುದು” ಎಂದು ಮಾಹಿತಿ ನೀಡಿದರು.

ಮುಂದುವರೆದು, “ಮೃತರ ಶರೀರಗಳನ್ನು ನಮ್ಮ ಅಧಿಕಾರಿಗಳು ಆಂಬ್ಯುಲೆನ್ಸ್‌ ಮೂಲಕ ಉತ್ತರಪ್ರದೇಶದಿಂದ ದೆಹಲಿಗೆ ತಂದಿದ್ದಾರೆ. ಮೃತರ ದೇಹಗಳನ್ನು ಏರ್‌ ಟ್ರಾನ್ಸ್‌ಪೋರ್ಟ್‌ ಮಾಡುವ ಮೊದಲು ದೆಹಲಿಯಲ್ಲಿ ಎಂಬಾಲ್ಮಿಂಗ್‌ ಮಾಡಬೇಕು. ಪ್ರಸ್ತುತ ಆ ಕೆಲಸ ನಡೆಯುತ್ತಿದ್ದು, ಸಂಜೆ 3.20ಕ್ಕೆ ವಿಮಾನದಲ್ಲಿ ಮೃತದೇಹಗಳನ್ನ ದೆಹಲಿಯಿಂದ ಬೆಳಗಾವಿಗೆ ತರಲಾಗುವುದು. ಮೃತದೇಹದ ಜೊತೆಗೆ ಕುಟುಂಬಸ್ಥರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪ್ರಯಾಣಿಸಲಿದ್ದಾರೆ” ಎಂದು ತಿಳಿಸಿದರು.

“ಮೃತರ ಕುಟುಂಬದವರಿಗೆ ಸರ್ಕಾರದ ವತಿಯಿಂತ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಅಲ್ಲದೆ, ಮೃತರ ದೇಹವನ್ನು ದೆಹಲಿಯಿಂದ ಬೆಳಗಾವಿಗೆ ರವಾನಿಸಲು ಉಂಟಾಗುವ ಎಲ್ಲಾ ಖರ್ಚನ್ನು ಈಗಾಗಲೇ ಸರ್ಕಾರವೇ ಭರಿಸಿದೆ. ಸೂಕ್ತ ಹರಿಹಾರವನ್ನೂ ನೀಡಲಿದೆ. ಆದರೆ, ಪ್ರಾಣನಷ್ಟಕ್ಕೆ ಯಾವ ಪರಿಹಾರವೂ ಸಮಾನವಲ್ಲ. ಕುಟುಂಬಸ್ಥರ ಜೊತೆ ಸರ್ಕಾರ ಸಹಾನುಭೂತಿ ಇದೆ” ಎಂದರು.

“ಈಗಾಗಲೇ ನಮ್ಮ ಅಧಿಕಾರಿಗಳು ದೆಹಲಿಯಲ್ಲಿದ್ದು ದುರಂತದಲ್ಲಿ ಸಿಲುಕಿದ ಕರ್ನಾಟಕದ ಪ್ರವಾಸಿಗರಿಗೆ ಅಗತ್ಯ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಏತನ್ಮಧ್ಯೆ ಇಲಾಖೆಯ ಸಹಾಯವಾಣಿಗೂ ಕರೆಗಳು ಬಂದಿವೆ. ಆ ದೂರವಾಣಿ ಕರೆ ಆಧಾರದಲ್ಲಿ ಕುಂಭಮೇಳಕ್ಕೆ ಹೋದವರನ್ನು ನಾವು ಸಂಪರ್ಕಿಸಿದ್ದು, ಬಹುತೇಕರು ಸಂಪರ್ಕಕ್ಕೆ ಸಿಕ್ಕಿದ್ದಾರೆ. ಇಶಾ ಫೌಂಡೇಶನ್‌ ಕಡೆಯಿಂದ ಕುಂಭಮೇಳಕ್ಕೆ ತೆರಳಿದವರ ಪೈಕಿ ಓರ್ವ ವ್ಯಕ್ತಿ ಫೋನ್‌ ರಿಂಗ್‌ ಆಗುತ್ತಿದೆ, ಆದರೆ, ಆತ ಕರೆಯನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ ಆತನನ್ನು ಹುಡುಕುವ ಕೆಲಸವೂ ಮುಂದುವರೆದಿದೆ” ಎಂದರು.

“ಕರ್ನಾಟಕದ ಎಷ್ಟು ಮಂತಿ ಕುಂಭಮೇಳಕ್ಕೆ ತೆರಳಿದ್ದಾರೆ.? ಈ ಪೈಕಿ ದುರಂತದಲ್ಲಿ ಸಿಲುಕಿದವರೆಷ್ಟು..? ಗಾಯಾಳುಗಳೆಷ್ಟು..? ಮೃತರ ಸಂಖ್ಯೆ ಎಷ್ಟು..? ಎಂಬ ಕುರಿತು ಉತ್ತರಪ್ರದೇಶ ಸರ್ಕಾರದಿಂದ ನಮಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ. ಹೀಗಾಗಿ ಕರ್ನಾಟಕದ ಐಎಎಸ್‌ ಅಧಿಕಾರಿ ಹರ್ಷಲ್‌ ಬೋಯಲ್‌ ಅವರೇ ಸ್ವತಃ ಕುಂಭಮೇಳದ ಸ್ಥಳಕ್ಕೆ ತೆರಳಿದ್ದು, ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ನಮ್ಮ ರಾಜ್ಯದ ಜನ ಅಲ್ಲಿ ಗಾಯಾಳುಗಳಾಗಿ ಇದ್ದಾರ..? ಎಂದು ಪರಿಶೀಲಿಸುತ್ತಿದ್ದಾರೆ” ಎಂದು ಅವರು ವಿವರಿಸಿದರು.

ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಈಗ ‘ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿಸಲ್ಲಿಕೆ ಮತ್ತಷ್ಟು ಸರಳ: ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ಸಲ್ಲಿಸಿ | Karnataka Chief Minister Relief Fund

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಾಯಚೂರಲ್ಲಿ ಕತ್ತು ಸೀಳಿ MSC ವಿದ್ಯಾರ್ಥಿನಿಯ ಬರ್ಬರ ಹತ್ಯೆ!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM1 Min Read

BREAKING : ಆರ್ಥಿಕ ಸುಧಾರಣೆಯಾದರೆ, ಗಂಡುಮಕ್ಕಳಿಗೂ ಬಸ್ ನಲ್ಲಿ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಘೋಷಣೆ

07/07/2025 12:51 PM1 Min Read

BREAKING : ಮಂಡ್ಯದಲ್ಲಿ ಘೋರ ಘಟನೆ : ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ!

07/07/2025 12:32 PM1 Min Read
Recent News

BREAKING: ಐಸಿಸಿ ನೂತನ CEO ಆಗಿ ಸಂಜೋಗ್ ಗುಪ್ತಾ ನೇಮಕ

07/07/2025 1:41 PM

BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ

07/07/2025 1:37 PM

Big News: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ, ಪೊಲೀಸ್, ಬಾಂಬ್ ಸ್ಕ್ವಾಡ್ ಮತ್ತು ಕೋಸ್ಟ್ ಗಾರ್ಡ್ ನಿಯೋಜನೆ

07/07/2025 1:13 PM

Big News: ಪಾಕಿಸ್ತಾನದಲ್ಲಿ ಕಟ್ಟಡ ಕುಸಿತ: 27 ಮಂದಿ ಸಾವು

07/07/2025 1:03 PM
State News
KARNATAKA

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

By kannadanewsnow0507/07/2025 1:01 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಬೆಂಗಳೂರು ಗ್ತಾಮಂತರ ಜಿಲ್ಲೆಯ ನೆಲಮಂಗಲದಲ್ಲಿ 45 ದಿನದ ಮಗುವನ್ನು ತಾಯಿ ಒಬ್ಬಳು…

BREAKING : ಆರ್ಥಿಕ ಸುಧಾರಣೆಯಾದರೆ, ಗಂಡುಮಕ್ಕಳಿಗೂ ಬಸ್ ನಲ್ಲಿ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಘೋಷಣೆ

07/07/2025 12:51 PM

BREAKING : ಮಂಡ್ಯದಲ್ಲಿ ಘೋರ ಘಟನೆ : ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ!

07/07/2025 12:32 PM

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯಾದ್ಯಂತ ‘ಅನ್ನಭಾಗ್ಯ’ ಆಹಾರ ಧಾನ್ಯ ಸಾಗಾಣಿಕೆ ಬಂದ್!

07/07/2025 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.