ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ( Kuvempu University ) ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.

BIG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ: ತಪ್ಪಿತಸ್ಥರು ಯಾರೇ ಆಗಿದ್ದರು ಕಠಿಣ ಕ್ರಮ – ಸಿಎಂ ಬೊಮ್ಮಾಯಿ

ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

BIG BREAKING NEWS: ಶಿವಮೊಗ್ಗದಲ್ಲಿ ಭುಗಿಲೆದ್ದ ಸಾವರ್ಕರ್ ಪೋಸ್ಟರ್ ಗಲಾಟೆ: ಇಬ್ಬರಿಗೆ ಚಾಕು ಇರಿತ

ಅಂದಹಾಗೇ 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Share.
Exit mobile version