Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಾಟ್ಸಾಪ್ ಗೌಪ್ಯತಾ ನೀತಿ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ!

09/02/2026 12:31 PM

ಸಂಸತ್ ಬಜೆಟ್ ಅಧಿವೇಶನ 2026: ವಿಪಕ್ಷಗಳ ಭಾರಿ ಗದ್ದಲ, ಮಧ್ಯಾಹ್ನದವರೆಗೆ ಲೋಕಸಭೆ ಕಲಾಪ ಮುಂದೂಡಿಕೆ!

09/02/2026 12:27 PM

BREAKING : ಮಂಡ್ಯದಲ್ಲಿ ಘೋರ ಘಟನೆ : ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆ.!

09/02/2026 12:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕುವೆಂಪು ವಿವಿ’ಯಿಂದ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ
KARNATAKA

‘ಕುವೆಂಪು ವಿವಿ’ಯಿಂದ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow0909/10/2024 6:35 PM

ಶಿವಮೊಗ್ಗ : ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ಅ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಪ್ರವೇಶಾತಿಗೆ ಸಂಬಂಧಿಸಿದ ಸೂಚನೆಗಳು:

ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ನಾತಕೋತ್ತರ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಯು.ಯು.ಸಿ.ಎಂ.ಎಸ್. (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುವುದು. ಯು.ಯು.ಸಿ.ಎಂ.ಎಸ್.ಗೆ ಸಂಬAಧಿಸಿದ ಎಲ್ಲಾ ಮಾಹಿತಿಯು https://uucms.karnataka.gov.in/Login/Index ನಲ್ಲಿ ಲಭ್ಯವಿರುತ್ತದೆ.

ವಿಶ್ವವಿದ್ಯಾಲಯದ ಆವರಣ, ಶಂಕರಘಟ್ಟ., ಸ್ನಾತಕೋತ್ತರ ಕೇಂದ್ರ ಕಡೂರು ಹಾಗೂ ಚಿಕ್ಕಮಗಳೂರು, ಸಹ್ಯಾದ್ರಿ ಕಾಲೇಜು ಆವರಣ, ಶಿವಮೊಗ್ಗ ಮತ್ತು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಲಭ್ಯವಿರುವಂತೆ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ ಯುಯುಸಿಎಂಎಸ್ ಪೋರ್ಟಲ್ ಮೂಲಕ ಅರ್ಜಿಸಲ್ಲಿಸುವುದು. ಹಾಗೂ ಅರ್ಜಿ ಮತ್ತು ಸಂಬAಧಪಟ್ಟ ದಾಖಲೆಗಳನ್ನು (ಹಾರ್ಡ್ ಕಾಪಿ) ಸಂಬAಧಿಸಿದ ಸ್ನಾತಕೋತ್ತರ ವಿಭಾಗಗಳಿಗೆ ಕಡ್ಡಾಯವಾಗಿ ಸಲ್ಲಿಸುವುದು.

ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ (ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ) ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಸೇರಲು ಇಚ್ಛಿಸುವ ವಿದ್ಯಾರ್ಥಿಗಳು ಯುಯುಸಿಎಂಎಸ್ ಪೋರ್ಟಲ್ https://uucms.karnataka.gov.in/Login/Index ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸುವುದು.

ಅರ್ಜಿ ಶುಲ್ಕ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ರೂ.350/-, ಎಸ್ಸಿ/ಎಸ್‌ಟಿ/ಪ್ರವರ್ಗ-1 ವಿದ್ಯಾರ್ಥಿಗಳಿಗೆ ರೂ.175/- ಆಗಿರುತ್ತದೆ. ವಿದ್ಯಾರ್ಥಿಗಳು ಯುಯುಸಿಎಂಎಸ್ ಪೋರ್ಟಲ್ ಮೂಲಕ ಒಂದಕ್ಕಿAತ ಹೆಚ್ಚು ಸ್ನಾತಕೋತ್ತರ ವಿಭಾಗಗಳಿಗೆ ಮೇಲೆ ನಿಗದಿಪಡಿಸಲಾದಂತೆ ಅರ್ಜಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ.

ಇ- ವಿವರಣಾ ಪುಸ್ತಕವನ್ನು ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್ www.kuvempu.ac.in ನಿಂದ ಪಡೆದುಕೊಳ್ಳುವುದು. ಹಾಗೂ ಪ್ರವೇಶಾತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಕಛೇರಿ ವೇಳೆಯಲ್ಲಿ ಇ-ವಿವರಣಾ ಪುಸ್ತಕದಲ್ಲಿರುವ ಸಂಬAಧಪಟ್ಟ ವಿಭಾಗಗಳಿಂದ ದೂರವಾಣಿ ಮೂಲಕ ಪಡೆಯಬಹುದಾಗಿದೆ.

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ, ಅವರು ಇಂಟರ್‌ನೆಟ್ ಮೂಲಕ ಡೌನ್ಲೋಡ್ ಮಾಡಿದ ಅಂಕಪಟಿಯನ್ನು ಪ್ರಾಂಶುಪಾಲರಿAದ ‘ದೃಢೀಕರಿಸಿ ಸಲ್ಲಿಸತಕ್ಕದ್ದು.

ವಿಶ್ವವಿದ್ಯಾಲಯದ ಆವರಣ, ಶಂಕರಘಟ್ಟಿ, ಸ್ನಾತಕೋತ್ತರ ಕೇಂದ್ರ ಕಡೂರು ಹಾಗೂ ಚಿಕ್ಕಮಗಳೂರು, ಸಹ್ಯಾದ್ರಿ ಕಾಲೇಜು ಆವರಣ, ಶಿವಮೊಗ್ಗ ಮತ್ತು ವಿಶ್ವವಿದ್ಯಾಲಯದ ಘಟಕ / ಸಂಯೋಜಿತ ಕಾಲೇಜುಗಳಲ್ಲಿರುವ ಸ್ನಾತಕೋತ್ತರ ವಿಭಾಗಗಳಲ್ಲಿ ಪ್ರವೇಶಾತಿಗೆ ಲಭ್ಯವಿರುವ ಸೀಟುಗಳ ವಿವರ ಹಾಗೂ ನಿಗದಿಪಡಿಸಲಾಗಿರುವ ಪ್ರವೇಶಾತಿ ಶುಲ್ಕದ ವಿವರಗಳನ್ನು ಇ-ವಿವರಣಾ ಪುಸ್ತಕದಲ್ಲಿ ಪಡೆಯಬಹುದಾಗಿದೆ.

ಕುವೆಂಪು ವಿಶ್ವವಿದ್ಯಾಲಯದ ನಿಯಮದ ಪ್ರಕಾರ ಹೊರರಾಜ್ಯ/ ಹೊರದೇಶದ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಮ್ಮೆ ಪಾವತಿಸಲಾದ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂಪಾವತಿಸಲು ಅವಕಾಶವಿರುವುದಿಲ್ಲ.

2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿಯ ಪ್ರವೇಶಾತಿಗೆ ಅಕ್ಟೋಬರ್ 10 ಅರ್ಜಿ ಸಲ್ಲಿಕೆ ಆರಂಭ ದಿನ. ಮೆರಿಟ್ ಆಧಾರಿತ ಪಟ್ಟಿಯನ್ನು ನ.12 ರಂದು ಬಿಡುಗಡೆಗೊಳಿಸಲಾಗುವುದು. ಮೆರಿಟ್ ಹಾಗೂ ಸ್ಪೆಷಲ್ ಕೆಟಗರಿಗೆ ನ.14 ಹಾಗೂ ಮೆರಿಟ್ ಕಂ ಪೇಮೆಂಟ್‌ಗೆ ನ.15 ರಂದು ಪ್ರವೇಶಾತಿ ಕೌನ್ಸಿಲಿಂಗ್ ಮಾಡಲಾಗುವುದು ಎಂದು ಕುವೆಂಪು ವಿವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಫೆಬ್ರವರಿಯಲ್ಲಿ 10,000 ಮನೆ ವಿತರಣೆ- ಸಚಿವ ಜಮೀರ್ ಅಹ್ಮದ್

ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ

Share. Facebook Twitter LinkedIn WhatsApp Email

Related Posts

BREAKING : ಮಂಡ್ಯದಲ್ಲಿ ಘೋರ ಘಟನೆ : ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆ.!

09/02/2026 12:24 PM1 Min Read

BIG NEWS : ಟ್ರಾವೆಲ್ಸ್ ನಷ್ಟ ಆಗಿದ್ದಕ್ಕೆ ಕಳ್ಳತನಕ್ಕೆ ಇಳಿದಿದ್ದ ಖದೀಮ ಅರೆಸ್ಟ್ : 1.84 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ!

09/02/2026 12:13 PM1 Min Read

ಗಮನಿಸಿ : `ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

09/02/2026 11:59 AM1 Min Read
Recent News

BREAKING: ವಾಟ್ಸಾಪ್ ಗೌಪ್ಯತಾ ನೀತಿ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ!

09/02/2026 12:31 PM

ಸಂಸತ್ ಬಜೆಟ್ ಅಧಿವೇಶನ 2026: ವಿಪಕ್ಷಗಳ ಭಾರಿ ಗದ್ದಲ, ಮಧ್ಯಾಹ್ನದವರೆಗೆ ಲೋಕಸಭೆ ಕಲಾಪ ಮುಂದೂಡಿಕೆ!

09/02/2026 12:27 PM

BREAKING : ಮಂಡ್ಯದಲ್ಲಿ ಘೋರ ಘಟನೆ : ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆ.!

09/02/2026 12:24 PM

BIG NEWS : ಟ್ರಾವೆಲ್ಸ್ ನಷ್ಟ ಆಗಿದ್ದಕ್ಕೆ ಕಳ್ಳತನಕ್ಕೆ ಇಳಿದಿದ್ದ ಖದೀಮ ಅರೆಸ್ಟ್ : 1.84 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ!

09/02/2026 12:13 PM
State News
KARNATAKA

BREAKING : ಮಂಡ್ಯದಲ್ಲಿ ಘೋರ ಘಟನೆ : ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆ.!

By kannadanewsnow5709/02/2026 12:24 PM KARNATAKA 1 Min Read

ಮಂಡ್ಯ: ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಜಿಲ್ಲೆಯ ದಳವಾಯಿ ಕೋಡಿಹಳ್ಳಿ…

BIG NEWS : ಟ್ರಾವೆಲ್ಸ್ ನಷ್ಟ ಆಗಿದ್ದಕ್ಕೆ ಕಳ್ಳತನಕ್ಕೆ ಇಳಿದಿದ್ದ ಖದೀಮ ಅರೆಸ್ಟ್ : 1.84 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ!

09/02/2026 12:13 PM

ಗಮನಿಸಿ : `ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

09/02/2026 11:59 AM

SHOCKING : ಬೆಳಗಾವಿಯಲ್ಲಿ ವೈದ್ಯ ಲೋಕಕ್ಕೂ ಸವಾಲಾದ ಯುವಕ : ಈತನಿಗೆ ಗುಡ್ಡಗಾಡಿನ ಎಲೆ, ಹಸಿ ಸೊಪ್ಪೆ ಆಹಾರ!

09/02/2026 11:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.