Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ
KARNATAKA

KUWJ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ

By kannadanewsnow0910/11/2025 7:42 PM

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳು ಸೋಮವಾರ ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಿತು.

ಚುನಾವಣಾ ಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋದನೆ ಮಾಡಿದರು.


ಅಧ್ಯಕ್ಷರಾಗಿ ಶಿವಾನಂದ ತಗಡೂರು, ಉಪಾಧ್ಯಕ್ಷರಾಗಿ ಹೆಚ್.ಬಿ.ಮದನಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿಗಳಾಗಿ ನಿಂಗಪ್ಪ ಚಾವಡಿ, ಪುಂಡಲೀಕ ಭೀ ಬಾಳೋಜಿ, ಸೋಮಶೇಖರ ಕೆರೆಗೋಡು, ಖಜಾಂಚಿಯಾಗಿ ವಾಸುದೇವ ಹೊಳ್ಳ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಚುನಾವಣಾ ಪ್ರಮಾಣ ಧೃಢೀಕರಣ ಪತ್ರ ಮತ್ತು ಹೂ ಬೊಕ್ಕೆ ಮತ್ತು ಪುಸ್ತಕ ನೀಡುವ ಮೂಲಕ ಅಭಿನಂದಿಸಲಾಯಿತು.

ಸಂಘದ ಜವಬ್ದಾರಿ ನಿಭಾಯಿಸಿರುವೆ:

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರು, ಸಂಘವು ತನಗೆ ವಹಿಸಿದ್ದ ಜವಬ್ದಾರಿಯನ್ನು ಬೈಲಾ ಮತ್ತು ಸಂಘದ ನಿಯಮಾವಳಿಗಳ ಅಡಿಯಲ್ಲಿ ಅತ್ಯಂತ ಪಾರದರ್ಶಕವಾಗಿ ನಿಭಾಯಿಸಿದ ತೃಪ್ತಿ ನನಗಿದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಎಲ್ಲರಿಗೂ ಮತ್ತು ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸಾಲಿನ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ನೂತನ ಪದಾಧಿಕಾರಿಗಳಿಗೆ ಅಭಿನಂದನೆ:

ಸಂಘದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಶಿವಾನಂದ ತಗಡೂರು ಮಾತನಾಡಿ, ಸಂಘದ ಚುನಾವಣೆ ನಡೆಸುವುದು ಹಲವು ಸವಾಲಿನ ಕೆಲಸ. ಅದಕ್ಕಾಗಿ ಕಳೆದ ಮೂರು ತಿಂಗಳಿಂದಲೂ ಸಿದ್ಧತೆಯನ್ನು ನಡೆಸಲಾಗಿತ್ತು. ರಾಜ್ಯ ಘಟಕ, 31 ಜಿಲ್ಲಾ ಘಟಕ ಮತ್ತು 2 ಹೊರನಾಡಿನ ಘಟಕಗಳಿಗೆ ಏಕಕಾಲದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆದಿದೆ. ಅದಕ್ಕಾಗಿ ಚುನಾವಣಾಧಿಕಾರಿ ರವಿಕುಮಾರ್ ನೇತೃತ್ವದಲ್ಲಿ ಎಲ್ಲಾ ಚುನಾವಣಾ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲಾ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಅಭಿನಂದಿಸಿದರು.

ಚುನಾವಣಾಧಿಕಾರಿಗೆ ಸನ್ಮಾನ:

ಯಶಸ್ವಿಯಾಗಿ ಕಾರ್ಯ ನಿರ್ವಹಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರನ್ನು ಭೂ ಕಬಳಿಕೆ ನಿಷೇಧ ನ್ಯಾಯಾಲಯದ ನ್ಯಾಯಾಧೀಶ ಕೆ.ಎಚ್.ಅಶ್ವತ್ಥನಾರಾಯಣಗೌಡ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಅವರು ನೂತನ ಸಾಲಿಗೆ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು. ಇತ್ತೀಚಿನ ಕಾಲಘಟ್ಟದಲ್ಲಿ ಕೆಯುಡಬ್ಲೂೃಜೆ ಕ್ರೀಯಾಶೀಲವಾಗಿ ಕೆಲಸ ಮಾಡುವ ಮೂಲಕ ಮಹತ್ವದ ಹೆಜ್ಜೆ ಗುರುತು ಮೂಡಿಸುತ್ತಿರುವುದು ಅಭಿನಂದನೀಯ ಎಂದು ಅಶ್ವತ್ಥನಾರಾಯಣಗೌಡ ಅವರು ಶ್ಲಾಘಿಸಿದರು.

BREAKING: ರಾಜ್ಯದ ‘ಗೃಹ ಲಕ್ಷ್ಮೀ ಫಲಾನುಭವಿ’ಗಳಿಗೆ ಮತ್ತೊಂದು ಸಿಹಿಸುದ್ದಿ: ಸರ್ಕಾರದಿಂದ ‘ಗೃಹಲಕ್ಷ್ಮೀ ಸಹಕಾರ ಸಂಘ’ ನೋಂದಣಿ

BIG NEWS: ದೀರ್ಘಾವಧಿಯ ‘ಬಾಡಿಗೆದಾರ’ನು ಮನೆಯ ‘ಮಾಲೀಕ’ನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.