ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಲಖನೌಗೆ ತೆರಳುತ್ತಿದ್ದ ಟ್ರಕ್ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಖಮರಿಯಾ ಪೊಲೀಸ್ ಠಾಣೆ ಬಳಿಯ ಶಾರದಾ ನದಿಯ ಸೇತುವೆಯ ಮೇಲೆ ಖಾಸಗಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲಖಿಂಪುರ ಖೇರಿ ಎಡಿಎಂ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಸಿಎಂ ಕಚೇರಿ ಮಾಹಿತಿ ನೀಡಿದೆ.

BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರಿನ ಶಿವಾಜಿನಗರದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌

BIGG NEWS: ಹುಬ್ಬಳ್ಳಿಯಲ್ಲೂ Pay Mayor ಅಭಿಯಾನ ಪ್ರಾರಂಭ; ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟರ್‌ Viral

BIG Alert: UPI ವಂಚನೆ ವಿರುದ್ಧ ಗ್ರಾಹಕರಿಗೆ ಎಚ್ಚರಿಕೆ ನೀಡಿದ ʻSBIʼ; ಈ 6 ಟಿಪ್ಸ್‌ ಫಾಲೋ ಮಾಡುವಂತೆ ಸೂಚನೆ | SBI shares 6 tips

Share.
Exit mobile version