ಬೆಂಗಳೂರು: ಬಿಡಿಎ ವ್ಯಾಪ್ತಿಯಲ್ಲಿ ನಡೆದಿರುವ ಭೂ ಒತ್ತುವರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

BIGG NEWS : ಮಂಗಳೂರು ಬ್ಲಾಸ್ಟ್ ಹಿಂದಿರುವ ʼಭಯೋತ್ಪಾದಕರನ್ನು ಕಾನೂನಾತ್ಮಕʼವಾಗಿ ಸಂಹಾರ ಮಾಡುತ್ತೇವೆ : ತೇಜಸ್ವಿ ಸೂರ್ಯ ಕಿಡಿ

 

ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ದಾಳಿ ಮುಂದುವರಿಸಿದ್ದು, ಜೆ.ಪಿ.ನಗರದಲ್ಲಿ ₹ 30 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಜೆ.ಪಿ.ನಗರ 9ನೇ ಹಂತ, 1ನೇ ಬ್ಲಾಕ್​ನ ಆಲಹಳ್ಳಿಯಲ್ಲಿ ಸರ್ವೆ ನಂಬರ್ 4/1ರಲ್ಲಿ 22 ಗುಂಟೆ ಜಾಗವನ್ನು ಬಿಡಿಎ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಜಾಗದಲ್ಲಿ ಕಳೆದ 10 ವರ್ಷಗಳಿಂದ ತಾತ್ಕಾಲಿಕ್ ಶೆಡ್​ಗಳನ್ನು ನಿರ್ಮಿಸಿಕೊಂಡು ಹಲವರು ವ್ಯಾಪಾರ ಮಾಡುತ್ತಿದ್ದರು. ಪೊಲೀಸ್ ಬಂದೋಬಸ್ತ್​ನಲ್ಲಿ 6 ತಾತ್ಕಾಲಿಕ ಶೆಡ್​​ಗಳನ್ನು ತೆರವುಗೊಳಿಸಲಾಯಿತು. ಇಂಥ ಶೆಡ್​ಗಳಲ್ಲಿ ಇರುವವರು ನಿರಾಪೇಕ್ಷಣಾ ಪತ್ರ ನೀಡಬೇಕು. ನಕಲಿ ಎನ್​ಒಸಿ ಕೊಟ್ಟರೆ, ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬಿಡಿಎ ಎಚ್ಚರಿಸಿದೆ.

Share.
Exit mobile version