Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾದ್ರೆ ತಕ್ಷಣವೇ ಇಲ್ಲಿ ವರದಿ ಮಾಡಿ.!

10/11/2025 7:21 AM

‘ಆರೆಸ್ಸೆಸ್ ಯಾವಾಗಲೂ ತ್ರಿವರ್ಣ ಧ್ವಜವನ್ನು ಗೌರವಿಸುತ್ತದೆ ಮತ್ತು ರಕ್ಷಿಸುತ್ತದೆ’: ಮೋಹನ್ ಭಾಗವತ್

10/11/2025 7:19 AM

SHOCKING: ವಿಶ್ವದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ 9 ವಿದ್ಯಾರ್ಥಿಗಳಲ್ಲಿ ಭಾರತದಲ್ಲಿ ಒಬ್ಬರು ಸೇರಿದ್ದಾರೆ: ಅಧ್ಯಯನ

10/11/2025 7:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಬಿಡದಿ ಟೌನ್‌ ಶಿಫ್‌’ ಹೆಸರಿನಲ್ಲಿ ಭೂ ದಂಧೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ
KARNATAKA

BIG NEWS: ‘ಬಿಡದಿ ಟೌನ್‌ ಶಿಫ್‌’ ಹೆಸರಿನಲ್ಲಿ ಭೂ ದಂಧೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

By kannadanewsnow0930/09/2025 5:04 PM

ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ನವದೆಹಲಿಯಲ್ಲಿ ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಈಗಾಗಲೇ 2-3 ಸಾವಿರ ಎಕರೆ ಭೂಮಿ ಏನೇನ್ ಆಗಿದೆ ಅಂಥ ಗೊತ್ತು. ಕರ್ನಾಟಕದ ಸಂಪತ್ತು ಲೂಟಿ ಹೊಡೆಯುವುದನ್ನು ತಡೆಯಲು ಐದು ವರ್ಷ ಜನ ಅಧಿಕಾರ ಕೊಡಬೇಕು. ಆಗ ನನ್ನ ಶಕ್ತಿ ಏನೆಂದು ತೋರಿಸುತ್ತೇನೆ. ಇಲ್ಲವಾದರೆ ಈಗಿರುವ ವ್ಯವಸ್ಥೆಯಲ್ಲಿ ನಿಮ್ಮ ಕರ್ಮಗಳನ್ನು ತೊಳೆಯಲು ಸಾಧ್ಯವಿಲ್ಲ ಎಂದು ಹೇಳಿದರು.

2006 ರಲ್ಲಿ ನಾನು ಐದು ಟೌನ್ ಶಿಪ್ ಮಾಡುವ ನಿರ್ಧಾರ ಮಾಡಿದ್ದು ನಿಜ. ಬಿಡದಿಯ ಬಳಿ ಟೌನ್ ಶಿಫ್ ಮಾಡುವುದು ನನ್ನ ಕಾರ್ಯಕ್ರಮವೇ ಆಗಿತ್ತು. ಡಿಕೆಶಿ ಅವರನ್ನೇ ಕೇಳಬಯಿಸುತ್ತೇನೆ. ಆ ಯೋಜನೆ ವಿರುದ್ಧ ಕಾಂಗ್ರೆಸ್ ನಾಯಕರೇ ಆಗಿದ್ದ ಹೆಚ್.ಡಿ. ಪಾಟೀಲ್‌, ಉಗ್ರಪ್ಪ ಅವರ ನೇತೃತ್ವದಲ್ಲಿ ರಚನೆ ಮಾಡಿದ್ದ ಸತ್ಯಶೋಧನಾ ಸಮಿತಿಯ ವರದಿಯನ್ನು ತೆರೆದು ನೋಡಿ ನೀವು. ಆ ವರದಿಯಲ್ಲಿ ಏನೇನು ಇದೆ ಎಂಬದನ್ನು ಜನರ ಮುಂದೆ ಇಡಿ. ನನ್ನ ಮೇಲೆ ಆರೋಪ ಮಾಡಿದ್ರಲ್ಲಾ, ಈಗ ಏನು ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಕನಸಿನ ಯೋಜನೆಯನ್ನು ಜಾರಿಗೆ ತರುತ್ತಿದ್ದಾರಂತೆ! ಯಾರಿಗೋ ಒಬ್ಬರಿಗೆ ಐನೂರು ಎಕರೆ, ಇನ್ನೊಬ್ಬನಿಗೆ ಇನ್ನೂರು ಎಕರೆ, ಮತ್ತೊಬ್ಬನಿಗೆ ಮುನ್ನೂರು ಎಕರೆ.. ಹೀಗೆ ತಮಗೆ ಬೇಕಿದ್ದವರಿಗೆ ಹಂಚಿಕೊಂಡು ಹೋಗುತ್ತಿದ್ದಾರೆ. ಇದು ಜನರ ಜಮೀನು, ನಿಮ್ಮ ಸಂಪಾದನೆಯದ್ದಲ್ಲ ಎಂಬುದನ್ನು ಮರೆಯಬೇಡಿ. ನಿಮ್ಮ ಸರಕಾರ ಇನ್ನು ಎರಡು ವರ್ಷ ಇರುತ್ತೆ. ಆ ಎರಡು ವರ್ಷದಲ್ಲಿ ಈ ಯೋಜನೆಯನ್ನು ಮಾಡುತ್ತೀರಾ? ಎಂದು ಕೇಂದ್ರ ಸಚಿವರು ಡಿಕೆಶಿಯನ್ನು ಕೇಳಿದರು.

ಯೋಜನೆ ಮಾಡುವ ಮುನ್ನ ನಾನು ರೈತರ ಜತೆ ನಾಲ್ಕು ಸಭೆಗಳನ್ನು ಮಾಡಿದೆ. ಕೃಷ್ಣಾ ಕಚೇರಿಗೆ ಕರೆಸಿ ಸಭೆ ಮಾಡಿದೆ. ಮಹಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಸಭೆಗಳಿಗೆ ಬಂದಿದ್ದರು. ನಾನು ಒಂದು ಇಂಚು ಭೂಮಿಯನ್ನು ಸ್ವಾಧೀನ ಮಾಡಿರಲಿಲ್ಲ. ದಾಖಲೆಗಳು ಇವೆ, ತೆಗೆದು ನೋಡಲಿ ಎಂದು ತಿರುಗೇಟು ಕೊಟ್ಟರು.

ನಾನು 60,000 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿ ಮಾಡಲು ಹೊರಟಿದ್ದೆ. ಕೇಂದ್ರದ ಆರ್ಥಿಕ ವ್ಯವಹಾರಗಳ ಸಮಿತಿಯಿಂದಲೂ ಅನುಮೋದನೆ ಪಡೆದಿದ್ದೆ. ನನ್ನ ಸರಕಾರ ಹೋದ ಮೇಲೆ ಅದು ಅಲ್ಲಿಗೇ ನಿಂತು ಹೋಯಿತು. ಒಂದು ಇಂಚು ಭೂಮಿಯನ್ನು ನಾನು ಸ್ವಾಧೀನ ಮಾಡಿಕೊಳ್ಳಲಿಲ್ಲ ಎಂದು ಅವರು ಹೇಳಿದರು.

ಈ ವ್ಯಕ್ತಿ ಎದೆ ಮುಟ್ಟಿಕೊಂಡು ಹೇಳಲಿ, ಎಷ್ಡು ಜನರ ಮನೆ ಹಾಳು ಮಾಡಿದ್ದಾರೆ ಎಂದು. ಶಾಂತಿ ನಗರ ಹೌಸಿಂಗ್ ಸೊಸೈಟಿ ಪ್ರಕರಣವನ್ನೇ ನೋಡಿ, ದಲಿತರಿಗೆ ಮನೆ ಮಾಡಿಕೊಡಲು ಮಾಡಿದ್ದ ಸೊಸೈಟಿ ಅದು. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲು 70-80 ಎಕರೆ ಜಮೀನು ಕೊಟ್ಟು ದಲಿತರಿಗೆ ಸೈಟು ಕೊಡಿ ಎಂದು ಹೇಳಿದ್ದರು. ಕೊನೆಗೆ ಅದನ್ನು ಏನು ಮಾಡಿದರು ಎನ್ನುವುದು ಗೊತ್ತಿದೆ. ನೈಜ ಸೊಸೈಟಿಗೆ ಘೋರಿ ತೋಡಿ ವಿಜಯಪುರದಿಂದ ಯಾವುದೋ ತರಕಾರಿ ಸೊಸೈಟಿ ತಂದು ನಕಲಿಯನ್ನು ಅಸಲಿ ಮಾಡಿಕೊಂಡಿದ್ದು ಗೊತ್ತಿದೆ. ಹಾಗೆಯೇ ಇನ್ನೊಂದು ಸೊಸೈಟಿಗೆ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಭೂಮಿ ಹೊಡೆದರು. ಎಲ್ಲದರ ಬಗ್ಗೆ ನನ್ನ ಬಳಿ ಎಲ್ಲಾ ದಾಖಲೆಗಳೂ ಇವೆ ಎಂದು ನೇರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ 59 ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದು ನಾನು. ನಾನು ಪ್ರಚಾರ ತೆಗೆದುಕೊಳ್ಳಲಿಲ್ಲ. ಈಗ ಕುಣಿಗಲ್ ಅನ್ನು ಬೆಂಗಳೂರಿಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇವರಿಗೆ ಬಿಟ್ಟರೇ ಮಂಗಳೂರನ್ನು ಬೆಂಗಳೂರಿಗೆ ಸೇರಿಸುತ್ತಾರೆ! ಕುಣಿಗಲ್‌ ನಲ್ಲಿ ಈತನ ಭಾವಮೈದನಿಗೆ ಅನುಕೂಲ ಮಾಡಲು ಅದನ್ನೂ ಮಾಡುತ್ತಿದ್ದಾರೆ ಎಂದು ಸಚಿವರು ಕುಟುಕಿದರು.

ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ಈಗ ಸಮಾಜಘಾತುಕ ಶಕ್ತಿಗಳು, ಕಳ್ಳಕಾಕರು, ಭೂಗಳ್ಳರ ಕೈಗೆ ಸಿಕ್ಕಿ ನರಳುತ್ತಿದೆ. ಸಂಪದ್ಭರಿತ ನಗರವನ್ನು ಬರ್ಬಾದ್‌ ಮಾಡುವ ಕೆಲಸ ಆಗುತ್ತಿದೆ ಎಂದು ಅವರು ದೂರಿದರು.

BREAKING: ಬೆಂಗಳೂರಿನ 5 ಹೊಸ ನಗರ ಪಾಲಿಕೆ ವಾರ್ಡ್ ಗಳ ಮರು ವಿಂಗಡಣೆ ಕರಡು ಅಧಿಸೂಚನೆ ಪ್ರಕಟ

BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾದ್ರೆ ತಕ್ಷಣವೇ ಇಲ್ಲಿ ವರದಿ ಮಾಡಿ.!

10/11/2025 7:21 AM1 Min Read

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

10/11/2025 7:04 AM1 Min Read

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

10/11/2025 6:48 AM1 Min Read
Recent News

ALERT : ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾದ್ರೆ ತಕ್ಷಣವೇ ಇಲ್ಲಿ ವರದಿ ಮಾಡಿ.!

10/11/2025 7:21 AM

‘ಆರೆಸ್ಸೆಸ್ ಯಾವಾಗಲೂ ತ್ರಿವರ್ಣ ಧ್ವಜವನ್ನು ಗೌರವಿಸುತ್ತದೆ ಮತ್ತು ರಕ್ಷಿಸುತ್ತದೆ’: ಮೋಹನ್ ಭಾಗವತ್

10/11/2025 7:19 AM

SHOCKING: ವಿಶ್ವದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ 9 ವಿದ್ಯಾರ್ಥಿಗಳಲ್ಲಿ ಭಾರತದಲ್ಲಿ ಒಬ್ಬರು ಸೇರಿದ್ದಾರೆ: ಅಧ್ಯಯನ

10/11/2025 7:12 AM

ಗರ್ಭಧಾರಣೆಯ ಅಧಿಕ ರಕ್ತದೊತ್ತಡವು ಮಹಿಳೆಯರ ಹೃದಯರಕ್ತನಾಳದ ಅಪಾಯವನ್ನು ಹೆಚ್ಚಿಸುತ್ತದೆ : ಅಧ್ಯಯನ

10/11/2025 7:12 AM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾದ್ರೆ ತಕ್ಷಣವೇ ಇಲ್ಲಿ ವರದಿ ಮಾಡಿ.!

By kannadanewsnow5710/11/2025 7:21 AM KARNATAKA 1 Min Read

ಬೆಂಗಳೂರು : ಡಿಜಿಟಲ್ ಅರೆಸ್ಟ್ ಎಂದರೆ ವಂಚಕರು ಸರ್ಕಾರಿ ಅಧಿಕಾರಿ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ…

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

10/11/2025 7:04 AM

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

10/11/2025 6:48 AM

SHOCKING : ಪೋಷಕರೇ ಎಚ್ಚರ : ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವು.!

10/11/2025 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.