ಹಾಸನ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ನೆಲೆಸಬೇಕೆಂದು ನಮ್ಮ ಸರ್ಕಾರ ಬಯಸುತ್ತದೆ. ಸರ್ವಜನಾಂಗದ ಶಾಂತಿಯ ತೋಟ ಆಗಬೇಕೆಂದು ನಾವು ಹೇಳಿದ್ದೆವು. ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿದ್ದೆವು. ವಿಪಕ್ಷದವರು ಕಾನೂನು ವ್ಯವಸ್ಥೆ ಕೆಟ್ಟು ಹೋಗಿದೆ ಎಂದು ಹೇಳುತ್ತಾರೆ.ಪೊಲೀಸರು ಇದ್ದರೂ ಕೊಲೆಗಳಾಗಿವೆ ಎಂದು ಆರೋಪ ಮಾಡಿದ್ದಾರೆ ಎಂದರು.
ವಿರೋಧ ಪಕ್ಷಗಳ ಆರೋಪವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಕಳೆದ ಒಂದು ವರ್ಷದಿಂದ ಯಾವುದೇ ಧರ್ಮ ಸಂಘರ್ಷವಾಗಿಲ್ಲ.ಗೌರಿ ಗಣೇಶ ಹಬ್ಬ ಆಚರಣೆಯ ವೇಳೆ ಯಾವುದೇ ಗಲಾಟೆಯಾಗಿಲ್ಲ. ಮಂಗಳೂರು ಹುಬ್ಬಳ್ಳಿ ಶಿವಮೊಗ್ಗ ಕೋಮ ಸಂಘರ್ಷ ನಿಂತಿದೆ. ವಿಪಕ್ಷದವರಿಗೆ ಕಾನೂನು ಸವ್ಯವಸ್ಥೆ ಬಗ್ಗೆ ಅರ್ಥ ಕೇಳಬೇಕಾಗಿದೆ.ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ. ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು.
ಸೂರಜ್ ರೇವಣ್ಣ ಪ್ರಕರಣದಲ್ಲಿ ನನ್ನದೇನು ಅಭಿಪ್ರಾಯವಿಲ್ಲ. ಪೊಲೀಸರು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಮಾಡುತ್ತಾರೆ ಷಡ್ಯಂತ್ರವಿದೆ ಎಂದು ಹೇಳುವುದು ಸತ್ಯಕ್ಕೆ ದೂರವಾದದ್ದು. ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪವನ್ನು ಅಲ್ಲೆಗಳಿದ ಪರಮೇಶ್ವರ್, ಜೆಡಿಎಸ್ ಎಂಎಲ್ಸಿ ಸೂರಜ್ ವಿರುದ್ಧ ಸಂತ್ರಸ್ತ ದೂರು ನೀಡಿದ್ದ ಸಂತ್ರಸ್ತ ದೂರು ನೀಡಿದ ನಂತರವೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.