Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Share market today : ಆರಂಭಿಕ ವಹಿವಾಟಿನಲ್ಲಿ 123 ಅಂಕ ಕುಸಿದ ಸೆನ್ಸೆಕ್ಸ್

19/05/2025 10:21 AM

BREAKING : ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಜನರ ಪರದಾಟ : ಕಂಠೀರವ ಸ್ಟೇಡಿಯಂ ಸೇರಿ ಹಲವೆಡೆ ರಸ್ತೆಗಳು ಜಲಾವೃತ | WATCH VIDEO

19/05/2025 10:14 AM

BREAKING : ಜಾಗತಿಕ ಉಲ್ಬಣದ ನಡುವೆಯೂ ಮುಂಬೈನಲ್ಲಿ ಹೊಸ `ಕೊರೊನಾ ಸೋಂಕಿನ’ ಪ್ರಕರಣಗಳು ಪತ್ತೆ | COVID-19

19/05/2025 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0921/12/2024 3:12 PM

ಬೆಂಗಳೂರು : “ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ” ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

“ಸಿ.ಟಿ. ರವಿ ಕೇವಲ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾತ್ರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನ ಮಾತು ಆಡಿದ್ದಾರೆ. ಸದನದಲ್ಲಿ ನಿತ್ಯ ಸುಮಂಗಲಿ ಎಂದು ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ ತಪ್ಪೋ ಎಂದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ತಿಳಿಸಿದರು.

“ಚಿಕ್ಕಮಗಳೂರು ಜನ ಎಂದರೆ ಸುಸಂಸ್ಕೃತ ಜನ. ಅಂತಹವರ ನಡುವಿನಿಂದ ಇಂತಹ ವ್ಯಕ್ತಿ ಬಂದಿರುವುದು ದುರಂತ” ಎಂದರು.

ಅವರ ಮುತ್ತು ರತ್ನಗಳನ್ನು ಅವರೇ ಇಟ್ಟುಕೊಳ್ಳಲಿ

“ನಮ್ಮ ಪಕ್ಷದ ಯಾವುದೇ ನಾಯಕರು ಈ ರೀತಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ. ಆದರೆ ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೆ. ಮುನಿರತ್ನ ಪ್ರಕರಣ ಇದೇ ಆರ್.ಅಶೋಕ್ ಏನು ಹೇಳಿದ್ದರು? ಎಫ್ ಎಸ್ ಎಲ್ ವರದಿಯಲ್ಲಿ ಸತ್ಯಾಂಶ ಬಂದ ನಂತರ ಪಕ್ಷದಿಂದ ಹೊರಹಾಕುವುದಾಗಿ ಹೇಳಿದ್ದರು. ಈ ಪ್ರಕರಣದಲ್ಲಿ ಅವರು ಒಂದು ಭಾಗವಾಗಿದ್ದರೂ ಆತನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೇ ಅವರ ನಾಯಕತ್ವ. ಅವರ ಮುತ್ತು ರತ್ನಗಳನ್ನು ಅವರೇ ಇಟ್ಟುಕೊಳ್ಳಲಿ” ಎಂದು ಕಿಡಿಕಾರಿದರು.

ಅವರ ಮನೆ, ಪಕ್ಷದಲ್ಲಿ ಏನಾದರೂ ನಾನೇ ಕಾರಣ!

ಸಿ. ಟಿ. ರವಿ ಅವರನ್ನು ರಾತ್ರಿಯಿಡೀ ಪೊಲೀಸರು ಸುತ್ತಾಡಿಸಿದರು ಎಂದು ನಿಮ್ಮ ವಿರುದ್ಧ ಬೆಟ್ಟು ಮಾಡಿ ತೋರುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರದಲ್ಲಿ ನೀವುಂಟು, ಪೊಲೀಸ್ ಉಂಟು. ಅವರ ಮನೆಯಲ್ಲಿ ಏನಾದರೂ ನಾನೇ ಕಾರಣ. ಅವರ ಪಕ್ಷದಲ್ಲಿ ಏನಾದರೂ ನಾನೇ ಕಾರಣ. ಹೊರಗಡೆ ಏನಾದರೂ ನಾನೇ ಕಾರಣ. ನನ್ನ ಸ್ಮರಿಸದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ” ಎಂದು ತಿಳಿಸಿದರು.

ಆತ್ಮಸಾಕ್ಷಿ ನ್ಯಾಯ ನೀಡುತ್ತದೆ

ನಿಂದನಾತ್ಮಕ ಮಾತು ಆಡಿಯಾಗಿದೆ ಈಗ ಸರ್ಕಾರ ಹೇಗೆ ನ್ಯಾಯ ಕೊಡಿಸಲಿದೆ ಎಂದು ಕೇಳಿದಾಗ, “ಆತ್ಮಸಾಕ್ಷಿಯೇ ನ್ಯಾಯ ನೀಡುತ್ತದೆ” ಎಂದು ತಿಳಿಸಿದರು.

ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ

ಇದಕ್ಕೆಲ್ಲ ಕೊನೆಯಾಡುತ್ತೇವೆ ಎಂಬ ಸಿ.ಟಿ ರವಿ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ. ಬಹಳ ಸಂತೋಷ. ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರ? ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರೆ” ಎಂದು ತಿರುಗೇಟು ನೀಡಿದರು.

ಮಾನಹಾನಿಕರ ಪದ ಬಳಕೆ ವಿಚಾರ ಚರ್ಚೆಗೆ ಬದಲು ಬೇರೆ ತಿರುವು ಪಡೆಯಿತಾ ಎಂದು ಕೇಳಿದಾಗ, “ಬಿಜೆಪಿಯವರು ತಮ್ಮ ಹೇಳಿಕೆ ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಆಡಳಿತದಲ್ಲಿ ಪೊಲೀಸರನ್ನು ಹೇಗೆ ಬಳಸಿಕೊಂಡಿದ್ದರು?” ಎಂದು ಮಾರ್ಮಿಕವಾಗಿ ಹೇಳಿದರು.

BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ

BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಜನರ ಪರದಾಟ : ಕಂಠೀರವ ಸ್ಟೇಡಿಯಂ ಸೇರಿ ಹಲವೆಡೆ ರಸ್ತೆಗಳು ಜಲಾವೃತ | WATCH VIDEO

19/05/2025 10:14 AM2 Mins Read

BREAKING : CM ಸಿದ್ದರಾಮಯ್ಯಗೆ ಏಕವಚನದಲ್ಲಿ ನಿಂದನೆ ಆರೋಪ : ಮೈಸೂರು ಕೇಂದ್ರ ಕಾರಾಗೃಹ ವಾರ್ಡನ್ ಅರೆಸ್ಟ್.!

19/05/2025 9:53 AM1 Min Read

BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನರ ಪರದಾಟ : ಹಲವಡೆ ರಸ್ತೆಗಳು ಜಲಾವೃತವಾಗಿ ಟ್ರಾಫಿಕ್ ಜಾಮ್.!

19/05/2025 9:52 AM2 Mins Read
Recent News

Share market today : ಆರಂಭಿಕ ವಹಿವಾಟಿನಲ್ಲಿ 123 ಅಂಕ ಕುಸಿದ ಸೆನ್ಸೆಕ್ಸ್

19/05/2025 10:21 AM

BREAKING : ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಜನರ ಪರದಾಟ : ಕಂಠೀರವ ಸ್ಟೇಡಿಯಂ ಸೇರಿ ಹಲವೆಡೆ ರಸ್ತೆಗಳು ಜಲಾವೃತ | WATCH VIDEO

19/05/2025 10:14 AM

BREAKING : ಜಾಗತಿಕ ಉಲ್ಬಣದ ನಡುವೆಯೂ ಮುಂಬೈನಲ್ಲಿ ಹೊಸ `ಕೊರೊನಾ ಸೋಂಕಿನ’ ಪ್ರಕರಣಗಳು ಪತ್ತೆ | COVID-19

19/05/2025 10:07 AM

BREAKING : ನದಿಗೆ ಕಾರು ಉರುಳಿ ಬಿದ್ದು ಐವರು ಸ್ಥಳದಲ್ಲೇ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

19/05/2025 10:02 AM
State News
KARNATAKA

BREAKING : ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಜನರ ಪರದಾಟ : ಕಂಠೀರವ ಸ್ಟೇಡಿಯಂ ಸೇರಿ ಹಲವೆಡೆ ರಸ್ತೆಗಳು ಜಲಾವೃತ | WATCH VIDEO

By kannadanewsnow5719/05/2025 10:14 AM KARNATAKA 2 Mins Read

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಭಾರೀ ವಾಹನಗಳಿಂದ ಟ್ರಾಫಿಕ್ ಜಾಮ್…

BREAKING : CM ಸಿದ್ದರಾಮಯ್ಯಗೆ ಏಕವಚನದಲ್ಲಿ ನಿಂದನೆ ಆರೋಪ : ಮೈಸೂರು ಕೇಂದ್ರ ಕಾರಾಗೃಹ ವಾರ್ಡನ್ ಅರೆಸ್ಟ್.!

19/05/2025 9:53 AM

BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನರ ಪರದಾಟ : ಹಲವಡೆ ರಸ್ತೆಗಳು ಜಲಾವೃತವಾಗಿ ಟ್ರಾಫಿಕ್ ಜಾಮ್.!

19/05/2025 9:52 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

19/05/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.