ಬೆಂಗಳೂರು : ಇಂದು ದೇಶಾದ್ಯಂತ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಭಗವಾನ್ ರಾಮನ ಭಕ್ತರು ಈ ದಿನ ರಾಮನಿಗೆ ವಿಶೇಷ ಪೂಜೆಯನ್ನು ಮಾಡುತ್ತಾರೆ.
ರಾಮನವಮಿ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಶ್ರೀರಾಮಚಂದ್ರನ ವಚನ ಪಾಲನೆ, ಪ್ರಜಾಸೇವೆಯ ಬದ್ಧತೆ, ನ್ಯಾಯ ನಿಷ್ಠುರತೆ, ಪ್ರೀತಿ – ಮಮತೆಯ ಮಾನವೀಯ ಮೌಲ್ಯಗಳು ನಮ್ಮೆಲ್ಲರ ಆದರ್ಶವಾಗಲಿ. ಪಾನಕ – ಕೋಸಂಬರಿಯ ಜೊತೆ ಸ್ನೇಹ – ಸೌಹಾರ್ದತೆಯು ಮಿಳಿತಗೊಳ್ಳಲಿ, ದ್ವೇಷ ಅಳಿದು ಪ್ರೀತಿಯ ಬೆಳಕು ಎಲ್ಲೆಡೆ ಬೆಳಗಲಿ ಎಂದು ಹಾರೈಸುತ್ತೇನೆ. ಸರ್ವರಿಗೂ ರಾಮನವಮಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.