Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ವರ ಶ್ರಮದಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ
KARNATAKA

ಸರ್ವರ ಶ್ರಮದಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ

By kannadanewsnow0902/09/2024 6:38 PM

ಮಂಡ್ಯ: ‘ಆತಿಥ್ಯ’ದ ನೆಲವೆಂಬ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಒಗ್ಗಟ್ಟು ಹಾಗೂ ಶ್ರಮ ಅಗತ್ಯವೆಂದು ಶಾಸಕರು ಹಾಗೂ ಸಮ್ಮೇಳನ ಮಾಧ್ಯಮ ಸಮನ್ವಯ ಸಮಿತಿ ಅಧ್ಯಕ್ಷ ದಿನೇಶ್ ಗೂಳಿಗೌಡ ಅಭಿಪ್ರಾಯಿಸಿದರು.

ಡಿಸೆಂಬರ್ 20, 21 ಹಾಗೂ 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ನಗರದ ಹೊರ ವಲಯದಲ್ಲಿರುವ ಅಮರಾವತಿ ಹೋಟೇಲ್ ನಲ್ಲಿ ಆಯೋಜನೆಗೊಂಡಿದ್ದ ಮಾಧ್ಯಮ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಡ ಭಾಷೆ ಕನ್ನಡದ ಹಬ್ಬ ಜಿಲ್ಲೆಯಲ್ಲಿ ಮೂರನೇ ಬಾರಿಗೆ ಆಯೋಜನೆಗೊಳ್ಳುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಚಾರ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ಹರಡಬೇಕು. ಆ  ಮೂಲಕ ಮಂಡ್ಯ ಜಿಲ್ಲೆಯ ಸೊಗಡು ವಿಶ್ವವ್ಯಾಪಿ ಪಸರಿಸಲು ಶ್ರಮಿಸಬೇಕೆಂದು ಕರೆ ನೀಡಿದರು.

ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ ಬರುವಂತೆ ಜಿಲ್ಲೆಯ ಎಲ್ಲ ಸ್ಥರದ ಜನತೆ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಸಾಹಿತಿಗಳು, ರೈತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಆ ಸಂಬಂಧ ಲೇಖನಗಳು ಪ್ರಕಟವಾಗಲಿ ಎಂದು ಸಲಹೆ ನೀಡಿದರು.

ಸಮ್ಮೇಳನದ ಸಾರ್ಥಕತೆಯನ್ನು ಎತ್ತಿ ಹಿಡಿಯುವ ಸಾಹಿತ್ಯ ಲೇಖನಗಳು ಪ್ರಕಟಗೊಳ್ಳಬೇಕು. ಹೊರ ಜಿಲ್ಲೆ ರಾಜ್ಯದಿಂದ ಆಗಮಿಸುವ ಪತ್ರಕರ್ತರಿಗೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಸಮ್ಮೇಳನ ಯಶಸ್ಸಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ನಾಡಿನ ಲೇಖಕರ ಸಂದೇಶಗಳನ್ನು ಓದುಗರಿಗೆ ತಲುಪಿಸಬೇಕು. ಸಮ್ಮೇಳನದ ಯಶಸ್ವಿಗೆ ಮಾಧ್ಯಮಗಳ ಸಹಕಾರವೂ ಬಹಳ ಮುಖ್ಯ ಎಂದರು.

ಸಮ್ಮೇಳನದ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ, ಸಮ್ಮೇಳನದ ಯಶಸ್ಸಿಗೆ ಮಾಧ್ಯಮದ ಪಾತ್ರ ಅಪಾರ, ಸಮ್ಮೇಳನದ ಪ್ರತಿ ಚಟುವಟಿಕೆಗಳ ಸಮಗ್ರ ಪ್ರಚಾರ ಹಾಗೂ ಲೋಪದೋಷಗಳ ಪರಿಹಾರಕ್ಕೆ ಜಾಗೃತಿ, ಶುಚಿತ್ವಕ್ಕೆ ಆದ್ಯತೆ ಸೇರಿದಂತೆ ಎಲ್ಲರ ಸಹಕಾರದಿಂದ ಸಮ್ಮೇಳನ ಯಶಸ್ಸಿಗೆ ಮುಂದಾಗೋಣ ಎಂದು ಕರೆ ನೀಡಿದರು.

ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ನಿರ್ಮಲ ಮಾತನಾಡಿ, ಮುಖ್ಯ ವೇದಿಕೆಯ ಸನಿಹದಲ್ಲೇ ಪತ್ರಕರ್ತರ ಗ್ಯಾಲರಿ ಹಾಗೂ ವಿದ್ಯುನ್ಮಾನ ಸುದ್ದಿಗಾರರ ವಾಹನಗಳ ತಂಗುದಾಣ, ಕಂಪ್ಯೂಟರ್ ವ್ಯವಸ್ಥೆ, ಇಂಟರ್ನೆಟ್ ಹಾಗೂ ಜನರೇಟರ್ ಸೌಲಭ್ಯ ಹಾಗೂ ಅತಿ ಗಣ್ಯರ ಪತ್ರಿಕಾಗೋಷ್ಠಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.

ಸಮನ್ವಯ ಸಮಿತಿಯ ಸಂಚಾಲಕ ಅಶೋಕ್ ಜಯರಾಂ ಮಾತನಾಡಿ, ಸಮ್ಮೇಳನ ಯಶಸ್ವಿಗೊಳಿಸುವುದು ನಮ್ಮೆಲ್ಲರ ಭಾಗ್ಯ, ಆ ನಿಟ್ಟಿನಲ್ಲಿ ಒಂದಾಗಿ ಶ್ರಮಿಸೋಣ, ಹಬ್ಬದ ವಾತಾವರಣ ನಿರ್ಮಿಸಿ ಮಂಡ್ಯ ಜಿಲ್ಲೆಯ ಕಂಪು ರಾಜ್ಯ ಹಾಗೂ ರಾಷ್ಟ್ರ ವ್ಯಾಪಿ ಪಸರಿಸಲು ಶ್ರಮಿಸೋಣವೆಂದರು.

ಪತ್ರಕರ್ತ ಸಿದ್ದು ಆರ್.ಜಿ.ಹಳ್ಳಿ ಮಾತನಾಡಿ, ನೆಟ್ವರ್ಕ್ ಕಿರಿಕಿರಿ ಹಾಗೂ ಪತ್ರಕರ್ತರ ಗ್ಯಾಲರಿಗೆ ಅನ್ಯರ ಪ್ರವೇಶಕ್ಕೆ ಕಡಿವಾಣ ಹಾಕಲು ಮಾರ್ಗೋಪಾಯ ಕಂಡುಕೊಳ್ಳಬೇಕು. ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರ ಸಂಖ್ಯೆಯನ್ನು ಅಖೈರುಗೊಳಿಸಿಕೊಳ್ಳಲು, ಅಧಿಕೃತ ಮಾಧ್ಯಮ ಸಂಸ್ಥೆಯ ಜೊತೆ ಪತ್ರ ವ್ಯವಹಾರ ನಡೆಸಬೇಕು. ವಿದ್ಯುತ್ ಸಂಪರ್ಕ ಸುಲಲಿತವಾಗಿರುವಂತೆ, ಟೆಕ್ನಿಸಿಯನ್ ನೇಮಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಆನಂದ್ ಮಾತನಾಡಿ, ಅನಧಿಕೃತ ಪತ್ರಕರ್ತರ ಕಡಿವಾಣಕ್ಕೆ ಯೋಜನೆ ರೂಪಿಸಬೇಕು. ಉತ್ತಮ ಗುಣಮಟ್ಟದ ಸೋಷಿಯಲ್ ಮೀಡಿಯಾ ಬಳಕೆಗೂ ಒತ್ತು ನೀಡಬೇಕೆಂದರು.

ಭೂ ದಾಖಲೆಗಳ ಉಪ ನಿರ್ದೇಶಕಿ ಮಮತಾ ಮಾತನಾಡಿ, ವಿವಿಧ ಕಂಪನಿಗಳ ಇಂಟರ್ ನೆಟ್ ವ್ಯವಸ್ಥೆ ಸುಲಲಿತ ವಿದ್ಯುತ್ ಸರಬರಾಜಿನ ಸರ್ಕ್ಯೂಟ್ ವ್ಯವಸ್ಥೆ ಜೊತೆಗೆ ಜಾಗೃತಿ ಫಲಕ ಅಳವಡಿಸಲು ಸಲಹೆ ನೀಡಿದರು.

ಪತ್ರಕರ್ತ ರಾಘವೇಂದ್ರ ಮಾತನಾಡಿ, ಕೆಲವು ಸ್ವಾರ್ಥಿಗಳು ಸಮ್ಮೇಳನ ಯಶಸ್ವಿಗೆ ಭಂಗ ತರಲು ಊಹಪೋಹಗಳನ್ನು ಹರಿದು ಬಿಡುತ್ತಾರೆ. ಅವುಗಳ ಪ್ರಚಾರ ಆದ್ಯತೆ ನೀಡದೇ ಸೂಕ್ತ ಸಮಜಾಯಿಸಿ ಪಡೆದು ಸುದ್ದಿಗಳನ್ನು ಪ್ರಕಟಿಸಲು ಒತ್ತು ನೀಡೋಣ ಎಂದು ಕರೆ ನೀಡಿದರು.

ಪತ್ರಕರ್ತ ಕೆ.ಸಿ.ಮಂಜುನಾಥ್ ಮಾತನಾಡಿ, ಸಕ್ಕರೆ ನಗರಿ ಮಂಡ್ಯದಲ್ಲಿ ಆಯೋಜನೆಗೊಳ್ಳುವ ಮೂರನೇ ಸಮ್ಮೇಳನ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಅಪಾರವಾಗಿದ್ದು, ಮೌಲ್ಯವಿಲ್ಲದ ಹಾಗೂ ಆವೇಶದ ಸುದ್ದಿಗಳಿಗೆ ಒತ್ತು ನೀಡದೇ, ಸಮ್ಮೇಳನದ ಗಾಂಭೀರ್ಯತೆಯನ್ನು ಎತ್ತಿ ಹಿಡಿಯುವ ಸುದ್ದಿಗಳ ಪತ್ರಕರ್ತರು ಪ್ರತಿ ವಿಭಾಗದ ಪತ್ರಕರ್ತರು ಸ್ಪಂದಿಸಬೇಕೆಂದರು.

ಸಭೆಯಲ್ಲಿ ಆಶಾಲತಾ ಪುಟ್ಟೇಗೌಡ, ಅನುಪಮಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ಪತ್ರಕರ್ತ ಬಸವೇಗೌಡ, ಸಮ್ಮೇಳನದ ವಿಶೇ‍‍ಷಾಧಿಕಾರಿ ಚಂದ್ರಶೇಖರ್, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗಾಧಿಕಾರಿ ಸುಧಾಮ ಸೇರಿದಂತೆ ಹಲವು ಅಧಿಕಾರಿಗಳು ಸಲಹೆ ನೀಡಿದರು.

ಮುಂದಿನ ಸಾಹಿತ್ಯ ಸಮ್ಮೇಳನಗಳಿಗೆ ಮಂಡ್ಯ ರೋಲ್‌ ಮಾಡೆಲ್ ಆಗಬೇಕು: ದಿನೇಶ್ ಗೂಳಿಗೌಡ

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM1 Min Read

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM1 Min Read
Recent News

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING : ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ಸ್ಪಿನ್ನರ್ ‘ಪಿಯೂಷ್ ಚಾವ್ಲಾ’ ನಿವೃತ್ತಿ ಘೋಷಣೆ |Piyush Chawla

06/06/2025 2:43 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

By kannadanewsnow0906/06/2025 3:04 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೂಕು ನುಗ್ಗಲಾಗಿ 11 ಮಂದಿ ಸಾವನ್ನಪ್ಪಿದ್ದರು. ಈ…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.