Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಿಗಳೇ ಗಮನಿಸಿ : EPFO ‘ಪಾಸ್‌ಬುಕ್ ಲೈಟ್’ ಬಿಡುಗಡೆ :`PF’ ಬ್ಯಾಲೆನ್ಸ್ ಪರಿಶೀಲನೆ ಇನ್ನೂ ಸುಲಭ.!

19/09/2025 10:51 AM

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

19/09/2025 10:46 AM

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ‘ಜೀವ ವಿಮೆ’ಗೆ ಕಡಿತ
KARNATAKA

‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ‘ಜೀವ ವಿಮೆ’ಗೆ ಕಡಿತ

By kannadanewsnow0925/10/2024 4:45 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನವನ್ನು ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ವಿಮಾ ನಿಯಮಾವಳಿಯಂತೆ ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಿಂದ ಜೀವ ವಿಮೆಗೆ ಕಡ್ಡಾಯವಾಗಿ ವೇತನವನ್ನು ಕಡಿತಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಖಜಾನೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆ, ಇವರು ಉಲ್ಲೇಖಿತ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರ/ಅಧಿಕಾರಿಯು, ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯವಾಗಿ ಜೀವವಿಮೆ ಪಡೆಯಬೇಕಿರುತ್ತದೆ. ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 6 (ii) ರನ್ವಯ 50 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಜೀವ ವಿಮಾ ಪಾಲಿಸಿಯನ್ನು ನೀಡಲಾಗುವುದಿಲ್ಲ ಎಂದು ತಿಳಿಸಿರುತ್ತಾರೆ.

ಈ ಪ್ರಕಾರ ಪರಿಶೀಲಿಸಲಾಗಿ ದಿನಾಂಕ 31-03-2024 ರ ಅಂತ್ಯಕ್ಕೆ 50 ವರ್ಷ ವಯಸ್ಸು ಪೂರ್ಣಗೊಂಡಿರುವ ನೌಕರರನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಸುಮಾರು 72,754 ಅಧಿಕಾರಿ/ನೌಕರರು ಕಡ್ಡಾಯ ಜೀವ ವಿಮಾ ನಿಯಮಾವಳಿಯಲ್ಲಿ ನಿರ್ದಿಷ್ಟಪಡಿಸಿರುವಂತೆ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಲ್ಲಿ ಜೀವ ವಿಮೆ ಪಡೆಯದೇ ಇರುವುದು ಕಂಡುಬಂದಿರುವುದಾಗಿ ಸಹ ತಿಳಿಸಿರುತ್ತಾರೆ. ಈ ಕುರಿತು ವಿವರಗಳು ಕೆಜಿಐಡಿ ವೆಬ್‌ಸೈಟ್ https://kgidonline.karnataka.gov.in/kgid- note ನಲ್ಲಿ ಲಭ್ಯವಿರುವುದಾಗಿ ತಿಳಿಸಿರುತ್ತಾರೆ.

ಮೇಲ್ಕಂಡ ಅಂಶದ ಹಿನ್ನೆಲೆಯಲ್ಲಿ, ಈಗಾಗಲೇ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವವಿಮಾ ನಿಯಮಾವಳಿಗಳ ನಿಯಮ 8 ನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಕರ್ನಾಟಕ ಆರ್ಥಿಕ ಸಂಹಿತೆ ಅನುಚ್ಛೇದ 26 (1) ಮತ್ತು ಕರ್ನಾಟಕ ಖಜಾನೆ ಸಂಹಿತೆಯ ಅನುಚ್ಛೇದ 87 (1) ರಲ್ಲಿ ಅವಕಾಶವಿರುವಂತೆ, ಕಡ್ಡಾಯ ಜೀವ ವಿಮಾ ನಿಯಮಾವಳಿಯಲ್ಲಿ ನಿರ್ದಿಷ್ಟಪಡಿಸಿರುವಷ್ಟು ಶೇಕಡಾವಾರು ವಿಮಾ ಕಂತನ್ನು ನೌಕರರ ವೇತನದಲ್ಲಿ ಕಟಾವಣೆ ಮಾಡಿರುವ ಬಗ್ಗೆ ವೇತನ ಬಿಲ್ಲುಗಳನ್ನು ತೀರ್ಣಗೊಳಿಸುವಾಗ ಖಜಾನೆ ಅಧಿಕಾರಿಗಳು ಖಚಿತಪಡಿಸಿಕೊಳ್ಳುವಂತೆ ಸೂಚಿಸಲು ಸಹ ಕೋರಿರುತ್ತಾರೆ.

ಈ ಕುರಿತು ಖಜಾನೆಗಳಲ್ಲಿ ವೇತನ ಬಿಲ್ಲುಗಳನ್ನು ಪಾವತಿಗಾಗಿ ತೀರ್ಣಗೊಳಿಸುವಾಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ, ಪ್ರತಿಯೋರ್ವ ಅರ್ಹ ಅಧಿಕಾರಿ/ಸಿಬ್ಬಂದಿಗಳಿಂದ ಕನಿಷ್ಠ ವಿಮಾ ಕಂತನ್ನು ಕಡಿತಗೊಳಿಸಿರುವ ಕುರಿತು ಖಚಿತಪಡಿಸಿಕೊಳ್ಳುವಂತೆ, ಒಂದು ವೇಳೆ ಕಡಿತಗೊಳಿಸದೆ ಅಥವಾ ಕಡಿಮೆ ಕಡಿತಗೊಳಿಸಿದ್ದಲ್ಲಿ ಬಿಲನ್ನು ಆಕ್ಷೇಪಿಸಿ ಹಿಂದುರುಗಿಸುವಂತೆ ಸೂಚಿಸಿದೆ.

 ಮೇಲ್ಕಂಡ ವೆಬ್‌ಸೈಟಿನಲ್ಲಿ ಪರಿಶೀಲಿಸಿದಾಗ, ಖಜಾನೆ ಇಲಾಖೆಯ 200 ಅಧಿಕಾರಿಗಳು/ಸಿಬ್ಬಂದಿಗಳ ಸರಾಸರಿ ವೇತನದ ಶೇ 6.25 ರಷ್ಟು ಕನಿಷ್ಠ ಮಾಸಿಕ ವಿಮಾ ಕಂತಿಗಿಂತ ಕಡಿಮೆ ಕಡಿತಗೊಳಿಸುತ್ತಿರುವುದು ಕಂಡುಬಂದಿರುತ್ತದೆ. ಈ ಕುರಿತು ಪರಿಶೀಲಿಸಿ ಕನಿಷ್ಠ ವಿಮಾ ಕಂತಿಗೆ ಪಾಲಿಸಿಯನ್ನು ಪಡೆದು ಕನಿಷ್ಠ ಕಂತನ್ನು ಕಡಿತಗೊಳಿಸುವ ಕುರಿತು ಕೂಡಲೇ ಕ್ರಮ ಕೈಗೊಳ್ಳುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕವನ್ನು ರಾಜ್ಯ ಸರ್ಕಾರ ‘ಪಾಕಿಸ್ತಾನ’ ಮಾಡಲು ಹೊರಟಿದೆ: ಸಂಸದ ತೇಜಸ್ವಿ ಸೂರ್ಯ ವಾಗ್ಧಾಳಿ

BREAKING : ಶಿವಮೊಗ್ಗದಲ್ಲಿ ಲಾರಿ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು ಓರ್ವನಿಗೆ ಗಾಯ!

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

19/09/2025 10:46 AM1 Min Read

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM2 Mins Read

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM1 Min Read
Recent News

ಉದ್ಯೋಗಿಗಳೇ ಗಮನಿಸಿ : EPFO ‘ಪಾಸ್‌ಬುಕ್ ಲೈಟ್’ ಬಿಡುಗಡೆ :`PF’ ಬ್ಯಾಲೆನ್ಸ್ ಪರಿಶೀಲನೆ ಇನ್ನೂ ಸುಲಭ.!

19/09/2025 10:51 AM

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

19/09/2025 10:46 AM

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM
State News
KARNATAKA

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

By kannadanewsnow0519/09/2025 10:46 AM KARNATAKA 1 Min Read

ಬೆಂಗಳೂರು : ಬೆಂಗಳೂರು ರಸ್ತೆಗಳು ಇದೀಗ ಕೇವಲ ಗುಂಡಿಗಳಿಂದಲೇ ತುಂಬಿ ಹೋಗಿವೆ. ಇದರಿಂದ ಬೆಂಗಳೂರು ಜನತೆ ಸಾಕಷ್ಟು ತೊಂದರೆಗಳು ಅನುಭವಿಸುತ್ತಿದ್ದಾರೆ.…

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬಸ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

19/09/2025 10:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.