Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

08/05/2025 7:32 PM

BREAKING: ಲಾಲು ಪ್ರಸಾದ್ ಯಾದವ್ ಗೆ ಬಿಗ್ ಶಾಕ್: ರೈಲ್ವೆ ಭೂಮಿ ಹಗರಣದಲ್ಲಿ ಕಾನೂನು ಕ್ರಮಕ್ಕೆ ರಾಷ್ಟ್ರಪತಿ ಅನುಮತಿ

08/05/2025 7:29 PM

BREAKING : ಪಾಕಿಸ್ತಾನದ ಕ್ಷಿಪಣಿಯನ್ನು ಹೊಡೆದುರುಳಿಸಿದ ಭಾರತೀಯ ಸೇನೆ : ವಿಡಿಯೋ ವೈರಲ್ | WATCH VIDEO

08/05/2025 7:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ರಿಲೀಸ್: ಡಿ.ಕೆ.ಶಿವಕುಮಾರ್
KARNATAKA

ಶೀಘ್ರವೇ ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ರಿಲೀಸ್: ಡಿ.ಕೆ.ಶಿವಕುಮಾರ್

By kannadanewsnow0925/07/2024 4:39 PM

ಬೆಂಗಳೂರು : “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ ಬರುವ ಭಯದಿಂದ ಈಗ ಮಾತನಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

“ನಿಗಮ ಮಂಡಳಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ನಾವು ಅವಕಾಶ ಕಲ್ಪಿಸಿದ್ದೆವು. ಅವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ಬಿಚ್ಚಿಟ್ಟರು. ಬಿಜೆಪಿಯವರು ತಮ್ಮ ಕಾಲದಲ್ಲಿ ಆಗಿದ್ದ ಹಗರಣಗಳನ್ನು ಬಚ್ಚಿಟ್ಟಿದ್ದರು. ಅವುಗಳು ಬಹಿರಂಗವಾಗಬಾರದು ಎಂದು ಮುಖ್ಯಮಂತ್ರಿಗಳ ಉತ್ತರಕ್ಕೆ ಅವಕಾಶ ನೀಡಲಿಲ್ಲ. ಈ ಅಕ್ರಮಗಳ ಬಗ್ಗೆ ನಮ್ಮ ಸರ್ಕಾರ ತನಿಖೆಗೆ ಆದೇಶ ನೀಡಿದೆ” ಎಂದು ತಿಳಿಸಿದರು.

“ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ಉಪ್ಪು ತಿಂದವನು ನೀರು ಕುಡಿಯುತ್ತಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಬಿಜೆಪಿಯವರು ಈಗ ಮೂಡಾ ನಿವೇಶನದ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ. ನಾವು ಅವರ ಕಾಲದಲ್ಲಿ ಹೇಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ನಾವು ಹೊರಗೆ ತರುತ್ತಿದ್ದೇವೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದು, ವಿರೋಧ ಪಕ್ಷಗಳ ಬಳಿ ದಾಖಲೆ ಇದ್ದರೆ ಅದನ್ನು ತನಿಖಾಧಿಕಾರಿಗಳಿಗೆ ನೀಡಲಿ. ಆ ಜಮೀನು ಖರೀದಿ ಮಾಡಿದ್ದು, ಅದನ್ನು ದಾನಪತ್ರವಾಗಿ ನೀಡಿದ್ದು ನಿಜವಲ್ಲವೇ? ಅದನ್ನು ಅಕ್ರಮವಾಗಿ ಮೂಡಾದವರು ಬಳಸಿಕೊಂಡಿದ್ದಾರೆ. ಅದಕ್ಕೆ ಪರಿಹಾರ ನೀಡಿದ್ದಾರೆ. ಇದರಲ್ಲಿ ಅವ್ಯವಹಾರ ಏನಿದೆ? ಇಲ್ಲಿ ಅವ್ಯವಹಾರ ನಡೆದಿದ್ದರೆ ಅದು ಬಿಜೆಪಿಯವರ ಕಾಲದಲ್ಲಿ ಆಗಿದೆ” ಎಂದು ತಿರುಗೇಟು ನೀಡಿದರು.

“ಬಿಜೆಪಿ ಶಾಸಕರ, ಸಚಿವರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬೊಮ್ಮಾಯಿ ಅವರ ಹಗರಣಗಳು ಹೊರಗೆ ಬರಲಿವೆ. ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಿಜೆಪಿ ಎಲ್ಲಾ ಹಗರಣಗಳ ಪಿತಾಮಹ. ಅವರ ಹಗರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಿವರವಾಗಿ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಅವರ ಹಗರಣಗಳು ಬಯಲಾಗುತ್ತವೆ ಎನ್ನುವ ಭಯದಿಂದ ಸದನದಲ್ಲಿ ಗದ್ದಲ ಎಬ್ಬಿಸಿ ನಮ್ಮನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕಾಲದ ಎಲ್ಲಾ ಅಕ್ರಮಗಳನ್ನು ತೆಗೆಯುತ್ತಿದ್ದೇವೆ” ಎಂದರು.

“ವಾಲ್ಮೀಕಿ ಹಗರಣದಲ್ಲಿ ಅಕ್ರಮವಾಗಿ ವರ್ಗಾವಣೆಯಾಗಿರುವ 89 ಕೋಟಿ ಹಣದಲ್ಲಿ ನಮ್ಮ ತನಿಖಾಧಿಕಾರಿಗಳು ಸುಮಾರು 40 ಕೋಟಿಗೂ ಹೆಚ್ಚಿನ ಹಣವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆ ಇಡಿ, ಸಿಬಿಐ ಕೂಡ ತನಿಖೆ ನಡೆಸಲು ಬಂದಿದ್ದು ಅವರನ್ನು ನಾವು ತಡೆದಿಲ್ಲ. ಅವರಿಗೂ ತನಿಖೆ ನಡೆಸುವ ಹಕ್ಕಿದೆ. ನಾವು ಯಾವುದೇ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಹೇಳಿದರು.

ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಲು ಬಿಜೆಪಿ ಮುಂದಾಗಿದೆ ಎಂದು ಕೇಳಿದಾಗ “ದೆಹಲಿಯ ವರೆಗೂ ಮಾಡಲಿ, ಆಮೇಲೆ ನಾವು ಪಟ್ಟಿ ಬಿಡುಗಡೆ ಮಾಡುತ್ತೇವೆ” ಎಂದು ಉತ್ತರಿಸಿದರು.

ಭೋವಿ ನಿಗಮ ಹಗರಣದ ಹಣ ಹಿಂಪಡೆಯಲಾಗಿಲ್ಲ ಎನ್ನುವ ಪ್ರಶ್ನೆಗೆ “ನನಗೆ ತನಿಖೆಯ ಸಂಪೂರ್ಣ ಮಾಹಿತಿ ತಿಳಿದಿಲ್ಲ. ಮಾಧ್ಯಮಗಳ ಮೂಲಕ ಮಾತ್ರ ವಿಚಾರ ತಿಳಿದುಕೊಂಡಿದ್ದೇನೆ. ಬಿಜೆಪಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಎಲ್ಲಾ ಸಮುದಾಯಕ್ಕೆ ಮೋಸ ಮಾಡಿದೆ. ಬಿಜೆಪಿಯ ಭ್ರಷ್ಟಾಚಾರ ಕಂಡು ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ” ಎಂದು ಹೇಳಿದರು.

BIG NEWS: ವಿಧಾನಸಭೆ, ಪರಿಷತ್ತಿನಲ್ಲಿ ‘NEET ವಿರುದ್ಧ’ದ ನಿರ್ಣಯ ಅಂಗೀಕಾರ: ಇನ್ಮುಂದೆ ಕರ್ನಾಟಕದಲ್ಲಿ ‘CET ಫೈನಲ್’

BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ

Share. Facebook Twitter LinkedIn WhatsApp Email

Related Posts

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

08/05/2025 7:32 PM2 Mins Read

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM4 Mins Read

BIG NEWS : ಜನರ ಜೀವನಮಟ್ಟ ಸುಧಾರಣೆಗೆ `ಗ್ಯಾರಂಟಿ ಯೋಜನೆ’ಗಳು ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

08/05/2025 6:55 PM1 Min Read
Recent News

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

08/05/2025 7:32 PM

BREAKING: ಲಾಲು ಪ್ರಸಾದ್ ಯಾದವ್ ಗೆ ಬಿಗ್ ಶಾಕ್: ರೈಲ್ವೆ ಭೂಮಿ ಹಗರಣದಲ್ಲಿ ಕಾನೂನು ಕ್ರಮಕ್ಕೆ ರಾಷ್ಟ್ರಪತಿ ಅನುಮತಿ

08/05/2025 7:29 PM

BREAKING : ಪಾಕಿಸ್ತಾನದ ಕ್ಷಿಪಣಿಯನ್ನು ಹೊಡೆದುರುಳಿಸಿದ ಭಾರತೀಯ ಸೇನೆ : ವಿಡಿಯೋ ವೈರಲ್ | WATCH VIDEO

08/05/2025 7:14 PM

BIG NEWS : ಮುಂದುವರಿದ ಸ್ತನ ಕ್ಯಾನ್ಸರ್ ಪ್ರಕರಣಗಳಿಗೆ ಅಸ್ಟ್ರಾಜೆನೆಕಾ ಔಷಧದ ಬಳಕೆ ವಿಸ್ತರಿಸಿದ ಭಾರತ.!

08/05/2025 7:08 PM
State News
KARNATAKA

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

By kannadanewsnow0908/05/2025 7:32 PM KARNATAKA 2 Mins Read

ಶಿವಮೊಗ್ಗ: ಅನಾರೋಗ್ಯದ ಕಾರಣದಿಂದಾಗಿ ಆ ಮಹಿಳೆಗೆ ಪೂಜೆ ಮಾಡಿದ್ರೆ ಸರಿ ಹೋಗುತ್ತೆ ಅಂತ ನಂಬಿಸಿದಂತ ಆಸಾಮಿ ಒಬ್ಬ, ಆಕೆಯ ಕೈಯಲ್ಲಿದ್ದಂತ…

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM

BIG NEWS : ಜನರ ಜೀವನಮಟ್ಟ ಸುಧಾರಣೆಗೆ `ಗ್ಯಾರಂಟಿ ಯೋಜನೆ’ಗಳು ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

08/05/2025 6:55 PM

BREAKING : ‘ಆಪರೇಷನ್ ಸಿಂಧೂರ್’ : ಭಾರತೀಯ ಸೈನಿಕರ ಯೋಗಕ್ಷೇಮಕ್ಕಾಗಿ ನಾಳೆ ರಾಜ್ಯಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ.!

08/05/2025 5:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.