Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಿಮ್ಮ ನಿಲುವು ಸರಿಯಾಗಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೆವೆ : ನಟಿ ರಮ್ಯಾ ಪರವಾಗಿ ನಿಂತ ದೊಡ್ಮನೆ

29/07/2025 2:32 PM

ವ್ಯಾಯಾಮದ ಜೊತೆಗೆ MIND ಆಹಾರಕ್ರಮವು ಬುದ್ಧಿಮಾಂದ್ಯತೆಯ ಅಪಾಯ ಕಡಿಮೆ ಮಾಡುತ್ತದೆ: ಯುಎಸ್ ಅಧ್ಯಯನ

29/07/2025 2:29 PM

ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

29/07/2025 2:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ
KARNATAKA

ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

By kannadanewsnow0929/07/2025 2:22 PM

ಬೆಂಗಳೂರು: ಹೊಸತಲೆಮಾರಿನ ವಿದ್ಯಾರ್ಥಿಗಳು ಬದುಕಿನ ಸವಾಲುಗಳಿಗೆ ಧೃತಿಗೆಡದೆ ಸಮರ್ಥವಾಗಿ ಎದುರಿಸಲು ಸಾಹಿತ್ಯವೇ ಪ್ರಮುಖ ಸಾಧನ. ಹಾಗಾಗಿ ಇಂದಿನ ತಲೆಮಾರಿನ ಯುವಜನರು ಸಾಹಿತ್ಯಾಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು, ವ್ಯಾಸರಾಯ ಬಲ್ಲಾಳರ ‘ಬಂಡಾಯ’ ಕೃತಿಯ ಅಂತರಂಗದ ಆಶಯವೂ ಸಹ ಬದುಕಿನ ನಾನಾ ಸ್ತರಗಳ ವ್ಯವಸ್ಥೆಯೊಂದಿಗೆ ಮನುಷ್ಯರು ಮುಖಾಮುಖಿಯಾಗುವುದೇ ಆಗಿದೆ ಎಂದು ಖ್ಯಾತ ಸಾಹಿತಿ ಜಯಂತಕಾಯ್ಕಿಣಿ ಹೇಳಿದ್ದಾರೆ.

ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ, ಶೇಷಾದ್ರಿಪುರಂ ಕಾಲೇಜು, ಕನ್ನಡ ಸಂಘ, ಕನ್ನಡ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಕಾರ್ಯಕ್ರಮದಡಿ ವ್ಯಾಸರಾಯ ಬಲ್ಲಾಳರ ‘ಬಂಡಾಯ’ ಕೃತಿ  ಕುರಿತು ಮಾತನಾಡುತ್ತಿದ್ದರು. ವ್ಯಾಸರಾಯ ಬಲ್ಲಾಳರು ಕನ್ನಡ ಸಾಹಿತ್ಯ ಕಂಡ ಅಪರೂಪದ ಬರಹಗಾರ. ಮೃದುದೋರಣೆಯ, ಭಾವ ಪರವಶತೆಯ ಶೈಲಿಯ ಕಾದಂಬರಿಗಳಿಂದ ಗುರುತಿಸಿಕೊಂಡಿದ್ದ ಬಲ್ಲಾಳರು ಕ್ರಾಂತಿಕಾರಕ ಮನಸ್ಥಿತಿಯ ಕಡೆಗೆ ಹೊರಳಿದ್ದು ಅವರ ಬಂಡಾಯ ಕಾದಂಬರಿಯ ವಿಶೇಷವಾಗಿದೆ.

ಈ ಕಾದಂಬರಿ ಮೇಲ್ನೋಟಕ್ಕೆ ಕಾರ್ಮಿಕರು ಮತ್ತು ಬಂಡವಾಳ ಶಾಹಿಗಳ ನಡುವಿನ ಸಂಘರ್ಷದ ಕಥಾ ವಸ್ತು ಹೊಂದಿದ್ದರೂ ಅಲ್ಲಿನ ಪಾತ್ರಗಳು ಬದುಕಿನ ವಿವಿಧ ಹಂತಗಳಲ್ಲಿ ಪರಸ್ಪರ ಬಂಡಾಯ ಏಳುವುದನ್ನು ಕಾಣಬಹುದಾಗಿದೆ.  ಮನುಷ್ಯನೇ ಮನುಷ್ಯನನ್ನು ಬೇಟೆಯಾಡುವುದು ಬದುಕಿನ ವಿಪರ್ಯಾಸಗಳಲ್ಲಿ ಒಂದು. ಮನುಷ್ಯನಷ್ಟು ಕ್ರೂರಿ ಬೇರೆ ಇಲ್ಲ ಎನ್ನುವುದೇ ಸಾರ್ವಕಾಲಿಕ ಸತ್ಯ. ಇಲ್ಲಿ ಈ ಬಂಡಾಯ, ಮಾಲಿಕ-ಕಾರ್ಮಿಕರ ನಡುವಿನದಾದರೂ ವ್ಯಕ್ತಿಗತವಾದ ಬಂಡಾಯವನ್ನೂ ಸಹ ಇಲ್ಲಿನ ಪಾತ್ರಗಳು ಪ್ರತಿನಿಧಿಸುತ್ತವೆ. ತಲೆಮಾರಿನಿಂದ ತಲೆಮಾರಿಗೆ, ವ್ಯಕ್ತಿಯಿಂದ ವ್ಯಕ್ತಿಗೆ, ಕುಟುಂಬದ ಒಳಗೆ ಮತ್ತು ಹೊರಗೆ ಹೀಗೆ ಬಂಡಾಯ ಎಲ್ಲ ಸ್ಥರಗಳಲ್ಲಿಯೂ ಒಂದಲ್ಲಾ ಒಂದು ಹಂತದಲ್ಲಿ ಸ್ಫೋಟಗೊಳ್ಳುತ್ತದೆ. ಇದು ಪ್ರತಿಯೊಂದು ಸಮಾಜದಲ್ಲೂ ಅನಿವಾರ್ಯ ಮತ್ತು ಸತ್ಯ ಎಂದು ಜಯಂತ ಕಾಯ್ಕಿಣಿ ವಿಶ್ಲೇಷಿಸಿದರು. ಇಲ್ಲಿ, ಹೆಣ್ಣು ಹಣೆಯ ಮೇಲಿಡುವ ಕುಂಕುಮದ ಬೊಟ್ಟನ್ನು ಸಹ ಕ್ರಾಂತಿಕಾರಕ ಕೆಂಪು ಚಿಹ್ನೆ ಎಂದು ಚಿತ್ರಿಸಿದ ವ್ಯಾಸರಾಯ ಬಲ್ಲಾಳರ ಚಿಂತನಾಶೈಲಿ ಅಚ್ಚರಿಹುಟ್ಟಿಸುವಷ್ಟು ಶಕ್ತವಾಗಿದೆ ಎಂದ ಅವರು ಯಾವುದೇ ಸಮಾಜ ನಮ್ಮ ಅಂತರಂಗದ ಭಾವನಾತ್ಮಕತೆಯ ಭಾಗವಾಗಿರಬೇಕು, ಸಾಹಿತ್ಯ ಅದಕ್ಕೆ ಪೂರಕವಾಗಿರಬೇಕು ಎಂದು ತಿಳಿಸಿದರು. ಸಾಹಿತ್ಯದ ಈ ಶಕ್ತಿ ಮತ್ತು ಅದರ ಸೌಂದರ್ಯವನ್ನ ವಿದ್ಯಾರ್ಥಿಗಳು ಅನುಭವಿಸಬೇಕೆಂದರೆ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಓದನ್ನು ರೂಢಿಸಿಕೊಳ್ಳಬೇಕು ಎಂದು ಅವರು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು ಡಾ. ಮಾನಸ ಅವರು ಪ್ರತಿ ವಿದ್ಯಾರ್ಥಿಯ ಹಸ್ತಕ್ಕೆ ಪುಸ್ತಕವಿರಬೇಕು. ಪುಸ್ತಕ ಮಕ್ಕಳ ಮಸ್ತಕದಲ್ಲಿ ತುಂಬುವಂತಾಗಬೇಕು. ಆಗ ಮಾತ್ರ ಕನ್ನಡ ಸಾಹಿತ್ಯ ಮತ್ತು ಕನ್ನಡ ಪುಸ್ತಕೋದ್ಯಮವು ಬೆಳೆಯುತ್ತದೆ ಎಂದರು. ಇಂದು ಮುದ್ರಣ ಮಾಧ್ಯಮ ಅತ್ಯಂತ ದೊಡ್ಡರೀತಿಯಲ್ಲಿ ಬೆಳೆದಿದೆ. ಜಗತ್ತಿನಾದ್ಯಂತ ಪ್ರಕಾಶನ ಸಂಸ್ಥೆಗಳು ಆಧುನಿಕ ಸಾಧ್ಯತೆಗಳನ್ನೆಲ್ಲಾ ಬಳಸಿಕೊಂಡು ಪುಸ್ತಕೋದ್ಯಮಕ್ಕೆ ಹೊಸ ಆಯಾಮವನ್ನ ತಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ತನ್ನ ಯೋಜನೆಗಳ ಮೂಲಕ ಪುಸ್ತಕಾಭಿರುಚಿಯನ್ನು ಬೆಳೆಸಲು ಹೊರಟಿದೆ. ಆ ದಿಸೆಯಲ್ಲಿ ಮನೆಗೊಂದು ಗ್ರಂಥಾಲಯ ಮತ್ತು ಅಂಗಳದಲ್ಲಿ ತಿಂಗಳ ಪುಸ್ತಕ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಕಾಲೇಜಿನ ಗೌರವ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ ಅವರು ಉಪಸ್ಥಿತರಿದ್ದು, ತಮ್ಮ ಕಾಲೇಜು ಇಂತಹ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸದಾ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ಜಯಂತಕಾಯ್ಕಿಣಿ ಹಾಗೂ ವೂಡೇ ಪಿ. ಕೃಷ್ಣ ಅವರನ್ನು ಸನ್ಮಾನಿಸಲಾಯಿತು. ವ್ಯಾಸರಾಯ ಬಲ್ಲಾಳರ ಪುತ್ರಿ ಅಂಜಲಿ ಬಲ್ಲಾಳ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದದ್ದು ವಿಶೇಷವಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್, ಶೇಷಾದ್ರಿಪುರಂ ಕಾಲೇಜು ಪ್ರಾಂಶುಪಾಲರಾದ ಮೇಜರ್ ಡಾ. ಆನಂದಪ್ಪ ಐ., ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಹೆಚ್.ಎಂ. ಗೀತಾ, ಕನ್ನಡ ಸಂಘದ ಸಂಚಾಲಕರಾದ  ಎಂ.ಎನ್. ಅರ್ಚನಾ ತೇಜಸ್ವಿ  ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

BREAKING : ನಿಮ್ಮ ನಿಲುವು ಸರಿಯಾಗಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೆವೆ : ನಟಿ ರಮ್ಯಾ ಪರವಾಗಿ ನಿಂತ ದೊಡ್ಮನೆ

29/07/2025 2:32 PM1 Min Read

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ ಶಿವಕುಮಾರ್

29/07/2025 1:51 PM3 Mins Read

ಆಗಸ್ಟ್.2ರಂದು ಸಾಗರದಲ್ಲಿ 16ನೇ ‘ಅವ್ವ ಸಂತೆ’: ಆಹಾರ ಹಾಗೂ ಕರಕುಶಲ ಮೇಳ

29/07/2025 1:46 PM3 Mins Read
Recent News

BREAKING : ನಿಮ್ಮ ನಿಲುವು ಸರಿಯಾಗಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೆವೆ : ನಟಿ ರಮ್ಯಾ ಪರವಾಗಿ ನಿಂತ ದೊಡ್ಮನೆ

29/07/2025 2:32 PM

ವ್ಯಾಯಾಮದ ಜೊತೆಗೆ MIND ಆಹಾರಕ್ರಮವು ಬುದ್ಧಿಮಾಂದ್ಯತೆಯ ಅಪಾಯ ಕಡಿಮೆ ಮಾಡುತ್ತದೆ: ಯುಎಸ್ ಅಧ್ಯಯನ

29/07/2025 2:29 PM

ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

29/07/2025 2:22 PM

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ ಶಿವಕುಮಾರ್

29/07/2025 1:51 PM
State News
KARNATAKA

BREAKING : ನಿಮ್ಮ ನಿಲುವು ಸರಿಯಾಗಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೆವೆ : ನಟಿ ರಮ್ಯಾ ಪರವಾಗಿ ನಿಂತ ದೊಡ್ಮನೆ

By kannadanewsnow0529/07/2025 2:32 PM KARNATAKA 1 Min Read

ಬೆಂಗಳೂರು : ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ,…

ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

29/07/2025 2:22 PM

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ ಶಿವಕುಮಾರ್

29/07/2025 1:51 PM

ಆಗಸ್ಟ್.2ರಂದು ಸಾಗರದಲ್ಲಿ 16ನೇ ‘ಅವ್ವ ಸಂತೆ’: ಆಹಾರ ಹಾಗೂ ಕರಕುಶಲ ಮೇಳ

29/07/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.