ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದ ಆಯ್ದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸುತ್ತಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರ ಆರಂಭವಾಗಿದೆ. ಆಯ್ದ ಸರ್ಕಾರಿ ಶಾಲೆಗಳಲ್ಲಿ ಈಗ ಎಲ್ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಲು ನಮ್ಮ ಸರ್ಕಾರ ಮುಂದಾಗಿದೆ ಎಂದಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ. ವಿದ್ಯಾರ್ಥಿಗಳಿಗೆ ಉಚಿತ ಅಭ್ಯಾಸ ಪುಸ್ತಕಗಳ ವಿತರಣೆ. ಸುಸಜ್ಜಿತ ಮೂಲಸೌಕರ್ಯ ಹಾಗೂ ಆಕರ್ಷಕ ಕಲಿಕಾ ಪರಿಸರ ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.
ಶೈಕ್ಷಣಿಕ ಕ್ರಾಂತಿಯ ಮೂಲಕವೇ ಸುದೃಢ ನಾಡಿನ ನಿರ್ಮಾಣ ಸಾಧ್ಯ. ನಮ್ಮ ಮಕ್ಕಳ ಭವಿಷ್ಯ ಇಂದಿನಿಂದಲೇ ಉಜ್ವಲವಾಗಲಿ ಎಂಬುದಾಗಿ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳ ಸಬಲೀಕರಣವೇ ನಮ್ಮ ಗುರಿ! 📚✨
ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರ ಆರಂಭವಾಗಿದೆ. ಆಯ್ದ ಸರ್ಕಾರಿ ಶಾಲೆಗಳಲ್ಲಿ ಈಗ ಎಲ್ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಲು ನಮ್ಮ ಸರ್ಕಾರ… pic.twitter.com/IadJA0lJf3
— Madhu Bangarappa (@Madhu_Bangarapp) February 20, 2026
CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್
ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ







