Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದಲ್ಲಿ 18,000 ಅಂಗನವಾಡಿಯಲ್ಲಿ ‘LKG, UKG ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

Good News: ರಾಜ್ಯದಲ್ಲಿ 18,000 ಅಂಗನವಾಡಿಯಲ್ಲಿ ‘LKG, UKG ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0927/07/2024 4:59 PM

ಬೆಂಗಳೂರು: ಆಧುನಿಕ ಯುಗದಲ್ಲಿ ಮಾರ್ಡನ್ ಶಿಕ್ಷಣ ನೀಡುವುದು ನಮ್ಮ ಇಲಾಖೆ ಹಾಗೂ ಸರ್ಕಾರದ ಗುರಿಯಾಗಿದೆ. ಮುಂದಿನ ಹಂತದಲ್ಲಿ ರಾಜ್ಯದಲ್ಲಿ 18 ಸಾವಿರ ಅಂಗನವಾಡಿಯಲ್ಲಿ LKG ಮತ್ತು UKG ಆರಂಭ ಮಾಡಲಾಗುತ್ತದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ವಿಧಾನ ಮಂಡಳದ ಇಡೀ ಸದನ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಳುಗಿದ ಸಂದರ್ಭದಲ್ಲಿ ಈ ರಾಜ್ಯದ ಬಡ ಮಕ್ಕಳಿಗೆ ಶೈಕ್ಷಣಿಕ ಶಕ್ತಿ ತುಂಬುವ, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಮಹತ್ಕಾರ್ಯವನ್ನು ತಮ್ಮ ಇಲಾಖೆಯ ಮೂಲಕ ಮಾಡಿದ್ದಾರೆ ಎಂದರು.

ರಾಜಕೀಯ ಏನೇ ಇರಲಿ, ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಸಮಾಜಕ್ಕೆ ಸಿಕ್ಕಿದ ಅತ್ಯಂತ ಉಪಯುಕ್ತವಾದ ಉಲ್ಲೇಖನೀಯ ಯೋಜನೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ನಿರ್ಣಯ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಉಸಿರಿಲ್ಲದ, ಹಸಿದ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣವೆಂಬುದು ಮರೀಚಿಕೆ ಎನ್ನುತ್ತಿರುವ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಾವು ಅಂದುಕೊಂಡಿದ್ದನ್ನು ಸಾಧಿಸಿದ್ದಾರೆ.

1975ರಲ್ಲಿ, ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಕನಸಿನ ಯೋಜನೆ ಅಂಗನವಾಡಿಯನ್ನು ಆರಂಭಿಸಿದರು. ಕರ್ನಾಟಕದ, ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಮೊದಲ ಅಂಗನವಾಡಿ ಆರಂಭವಾಯಿತು. ಆರಂಭಿಕವಾಗಿ 100 ಇದ್ದ ಅಂಗನವಾಡಿಗಳ ಸಂಖ್ಯೆ ಈಗ 60 ಸಾವಿರಕ್ಕೂ ಅಧಿಕ. ಈಗ ಇಂದಿರಾ ಗಾಂಧಿಯವರಿಂದ ಆರಂಭವಾದ ಅದೇ ಯೋಜನೆಗೆ ಬಲ ತುಂಬುವ ಐತಿಹಾಸಿಕ ಕಾರ್ಯವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ್ದಾರೆ. ಅಗನವಾಡಿ ಮೊದಲು ಆರಂಭವಾದ ಕರ್ನಾಟಕದಲ್ಲೇ ಅಂಗನವಾಡಿಗೆ ಸರಕಾರಿ ಮಾಂಟೆಸ್ಸರಿ ಎಂದು ನಾಮಕರಣ ಮಾಡಿ ಉನ್ನತೀಕರಿಸುವ ಐತಿಹಾಸಿಕ ಕೆಲಸವನ್ನು ಮಾಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಪೂರ್ವ ಪ್ರಾಥಮಿಕ ಶಿಕ್ಷಣ ಇಂದು ಎಷ್ಟು ಮಹತ್ವ ಪಡೆದುಕೊಂಡಿದೆ, ಸಮಾಜದಲ್ಲಿ ಅದೆಷ್ಟು ಪ್ರತಿಷ್ಠೆಯ ವಿಷಯವಾಗಿದೆ ಎನ್ನುವುದು ಯಾರಿಗೂ ತಿಳಿಯದ ವಿಷಯವಲ್ಲ.
ಆರ್ಥಿಕವಾಗಿ ಸಬಲರಾಗಿರುವವರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಪಾಲಕರು ಪೈಪೋಟಿಗಿಳಿದು, ಸೋತು ಇನ್ನಷ್ಟು ಕುಗ್ಗಿ ಹೋಗುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ನೀಡಲು ತೆಗೆದುಕೊಂಡಿರುವ ಕ್ರಾಂತಿಕಾರಿ ಹೆಜ್ಜೆ ಸರಕಾರಿ ಮಾಂಟೆಸ್ಸರಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ, ಸಮಾಜಕ್ಕಾಗಿ ಏನಾದರೊಂದು ಸಾಧನೆ ಮಾಡಲೇಬೇಕು ಎಂದು ಅಧಿಕಾರ ಸ್ವೀಕರಿಸಿದ ದಿನವೇ ತೆಗೆದುಕೊಂಡ ನಿರ್ಧಾರವನ್ನು ಲಕ್ಷ್ಮೀ ಹೆಬ್ಬಾಳಕರ್ ಸಾಧಿಸಿದ್ದಾರೆ. ಇನ್ನೊಂದು ವಿಶೇಷವೆಂದರೆ, ಯಾವುದೆ ಅಬ್ಬರ, ಆಡಂಬರಗಳಿಲ್ಲದೆ ಅತ್ಯಂತ ಸರಳವಾಗಿ ಇಂತಹ ಜನೋಪಯೋಗಿ ಯೋಜನೆಯೊಂದನ್ನು ಜಾರಿಗೊಳಿಸಿದರು. ಲಕ್ಷ್ಮೀ ಹೆಬ್ಬಾಳಕರ್ ಮೊದಲಿನಿಂದಲೂ ಛಲಗಾತಿ ಮಹಿಳೆ. ಅಂದುಕೊಂಡಿದ್ದನ್ನು ಸಾಧಿಸುವ ಹಠ ಅವರದ್ದು.

ಇಂದಿನ ವ್ಯವಸ್ಥೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ಇಂತಹ ಯೋಜನೆ ಜಾರಿಗೊಳಿಸುವುದು ಸುಲಭದ ಕೆಲಸವಲ್ಲ. ಆಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದರಿಂದ ಸಮಯಾವಕಾಶವೂ ಸಾಕಷ್ಟಿರಲಿಲ್ಲ. ಶುಭಸ್ಯ ಶೀಘ್ರಂ ಎನ್ನುವಂತೆ ಅತ್ಯಂತ ಕಡಿಮೆ ಅವಧಿಯಲ್ಲಿ ಜಾರಿಗೊಳಿಸಬೇಕಾದ ಸಂದರ್ಭದಲ್ಲಿ ಒಂದಿಷ್ಟು ಸಣ್ಣಪುಟ್ಟ ಲೋಪಗಳು ಉಳಿದುಕೊಂಡಿರಬಹುದು. ಮೊದಲ ವರ್ಷವೇ ಎಲ್ಲವೂ ಅಚ್ಚುಕಟ್ಟಾಗಿ ಆಗುತ್ತದೆ ಎನ್ನಲಾಗದು. ಆದರೆ ಒಳ್ಳೆಯ ಕೆಲಕ್ಕೆ ನಾಂದಿ ಹಾಡಿದ್ದಾರೆ. ಅಂತಹ ಇಚ್ಚಾಸಕ್ತಿಯನ್ನು ಸಚಿವರು ತೋರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಸ್ತಾವನೆ ಇಟ್ಟಾಗ, ಒಳ್ಳೆಯ ಕೆಲಸ, ಮೊದಲು ಮಾಡಮ್ಮ ಎಂದು ಹಾರೈಸಿ, ಶಕ್ತಿ ತುಂಬಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ದಿನೇಶ ಗುಂಡೂರಾವ್ ತಮ್ಮಿಂದ ಎಲ್ಲ ರೀತಿಯ ಸಹಕಾರದ ಭರವಸೆ ನೀಡಿದರು. ಎಲ್ಲದರ ಪರಿಣಾಮವಾಗಿ ಕರ್ನಾಟಕದ ಶಿಕ್ಷಣ ಕ್ಷೇತ್ರದಲ್ಲಿ ಹೊಸದೊಂದು ಕ್ರಾಂತಿಯಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ಇನ್ನಷ್ಟು ಸುಧಾರಿಸುವ ಜೊತೆಗೆ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಇನ್ನಷ್ಟು ಹೊಸ ಕನಸಿನ ಯೋಜನೆಗಳು ಜಾರಿಯಾಗಲಿ ಎಂದು ಹಾರೈಸೋಣ.

ದೇಶದಲ್ಲಿಯೇ ಮೊದಲ ಬಾರಿಗೆ ಅಂಗನವಾಡಿಯಲ್ಲಿ LKG ಮತ್ತು UKG ತರಗತಿಗೆ ಚಾಲನೆ ನೀಡಿದ್ದು ನನ್ನ ಭಾಗ್ಯವಾಗಿದೆ. ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅವರ ಎದುರು ನಾನು ಪ್ರಸ್ತಾವನೆ ಇಟ್ಟಾಗ, ಒಳ್ಳೆಯ ಕೆಲಸ, ಮೊದಲು ಮಾಡಮ್ಮ ಎಂದು ಹಾರೈಸಿ, ಶಕ್ತಿ ತುಂಬಿದರು. ಸಾಂಕೇತಿಗವಾಗಿ 250 ಅಂಗನವಾಡಿಗಳಲ್ಲಿ LKG ಮತ್ತು UKG ತರಗತಿಗೆ ಚಾಲನೆ ನೀಡಲಾಗಿದೆ. ಪೌಷ್ಠಿಕ ಆಹಾರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದು ಪ್ರಮುಖವಾಗಿದೆ. ಆಧುನಿಕ ಯುಗದಲ್ಲಿ ಮಾರ್ಡನ್ ಶಿಕ್ಷಣ ನೀಡುವುದು ನಮ್ಮ ಇಲಾಖೆ ಹಾಗೂ ಸರ್ಕಾರದ ಗುರಿಯಾಗಿದೆ. ಮುಂದಿನ ಹಂತದಲ್ಲಿ ರಾಜ್ಯದಲ್ಲಿ 18 ಸಾವಿರ ಅಂಗನವಾಡಿಯಲ್ಲಿ LKG ಮತ್ತು UKG ಆರಂಭ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ‘ರಸ್ತೆ ಗುಂಡಿ ಮುಕ್ತ’ಕ್ಕೆ ಪಣ: ‘ರಸ್ತೆ ಗುಂಡಿ ಗಮನ’ ಮೊಬೈಲ್ ಅಪ್ಲಿಕೇಷನ್ ರಿಲೀಸ್ | BBMP Fix Pothole App

ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ

Share. Facebook Twitter LinkedIn WhatsApp Email

Related Posts

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM1 Min Read

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM2 Mins Read

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM1 Min Read
Recent News

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM

SHOCKING: ಹೈದರಾಬಾದಿನಲ್ಲಿ ಗರ್ಭಿಣಿ ಪತ್ನಿ ಕೊಂದು, ದೇಹ ತುಂಡು ತುಂಡು ಮಾಡಿ ನದಿಗೆ ಎಸೆದ ರಾಪಿಡೋ ಚಾಲಕ

24/08/2025 9:02 PM
State News
KARNATAKA

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0924/08/2025 9:31 PM KARNATAKA 1 Min Read

ಶಿವಮೊಗ್ಗ: ಬಿಜೆಪಿಯವರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರೇ ಮಳೆ-ಬೆಳೆ ಆಗೋದಿಲ್ಲ ಅಂತ ಅಪಪ್ರಚಾರ ಮಾಡುತ್ತಾರೆ. ಆದರೇ ಅವರು ಮುಖ್ಯಮಂತ್ರಿಯಾದ ಮೇಲೆ ಚೆನ್ನಾಗಿ ಮಳೆಯಾಗಿದೆ.…

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ: ಮಧು ಬಂಗಾರಪ್ಪ

24/08/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.