ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ 10 ರಾಜ್ಯಗಳ 96 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕೇಂದ್ರ ಸಚಿವ ಗಿರಿರಾಜ್ ಸಿಂಗ್, ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಮತ್ತು ಎಐಎಂಐಎಂನ ಅಸಾದುದ್ದೀನ್ ಒವೈಸಿ ಸೇರಿದಂತೆ ಹಲವಾರು ಪ್ರಮುಖ ಅಭ್ಯರ್ಥಿಗಳ ಭವಿಷ್ಯ ಈ ಹಂತದಲ್ಲಿ ನಿರ್ಧಾರವಾಗಲಿದೆ.
ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಸ್ಥಾನಗಳು ಮತ್ತು ಎಲ್ಲಾ 175 ವಿಧಾನಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ವೈಎಸ್ಆರ್ಸಿ, ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ನಡುವೆ ತ್ರಿಕೋನ ಸ್ಪರ್ಧೆಗೆ ರಾಜ್ಯ ಸಾಕ್ಷಿಯಾಗಿದೆ. ಬಿಜೆಪಿ, ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವನ್ನು ಎನ್ಡಿಎ ಒಳಗೊಂಡಿದೆ. ಈ ಹಂತದಲ್ಲಿ ಒಡಿಶಾದ 28 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಲೋಕಸಭಾ ಸ್ಥಾನಗಳಿಗೆ ಒಟ್ಟು 1,717 ಅಭ್ಯರ್ಥಿಗಳು ಕಣದಲ್ಲಿದ್ದು, 8.73 ಕೋಟಿ ಮಹಿಳೆಯರು ಸೇರಿದಂತೆ 17.70 ಕೋಟಿ ಅರ್ಹ ಮತದಾರರಿಗೆ 1.92 ಲಕ್ಷ ಮತಗಟ್ಟೆಗಳಲ್ಲಿ 19 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (ಕನೌಜ್, ಉತ್ತರ ಪ್ರದೇಶ), ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್ (ಬೇಗುಸರಾಯ್, ಬಿಹಾರ), ನಿತ್ಯಾನಂದ ರೈ (ಉಜಿಯಾರ್ಪುರ, ಬಿಹಾರ) ಮತ್ತು ರಾವ್ ಸಾಹೇಬ್ ದಾನ್ವೆ (ಜಲ್ನಾ, ಮಹಾರಾಷ್ಟ್ರ) ಈ ಹಂತದ ಕೆಲವು ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಟಿಎಂಸಿ ಅಭ್ಯರ್ಥಿ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ (ಇಬ್ಬರೂ ಪಶ್ಚಿಮ ಬಂಗಾಳದ ಬಹರಾಂಪುರ), ಬಿಜೆಪಿಯ ಪಂಕಜಾ ಮುಂಡೆ (ಬೀಡ್, ಮಹಾರಾಷ್ಟ್ರ), ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ (ಹೈದರಾಬಾದ್-ತೆಲಂಗಾಣ) ಮತ್ತು ಆಂಧ್ರಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ವೈಎಸ್ ಶರ್ಮಿಳಾ (ಕಡಪ) ಕಣದಲ್ಲಿದ್ದಾರೆ. ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಉತ್ತರ ಪ್ರದೇಶದ ಖೇರಿ ಕ್ಷೇತ್ರದಿಂದ ಹ್ಯಾಟ್ರಿಕ್ ಗೋಲು ಗಳಿಸುವ ರೇಸ್ ನಲ್ಲಿದ್ದಾರೆ. ಅವರ ಮಗ 2021 ರ ಲಖಿಂಪುರಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (ಕನೌಜ್, ಉತ್ತರ ಪ್ರದೇಶ), ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್ (ಬೇಗುಸರಾಯ್, ಬಿಹಾರ), ನಿತ್ಯಾನಂದ ರೈ (ಉಜಿಯಾರ್ಪುರ, ಬಿಹಾರ) ಮತ್ತು ರಾವ್ ಸಾಹೇಬ್ ದಾನ್ವೆ (ಜಲ್ನಾ, ಮಹಾರಾಷ್ಟ್ರ) ಈ ಹಂತದ ಕೆಲವು ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.