Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM

BREAKING : ತವರು ಸೀಸನ್ಗೆ ಬಿಸಿಸಿಐ ವೇಳಾಪಟ್ಟಿ ಬದಲಾವಣೆ, ಕೋಲ್ಕತಾ ಟೆಸ್ಟ್ ದೆಹಲಿಗೆ ಸ್ಥಳಾಂತರ

09/06/2025 1:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ: ಯಾರಿಗೆಲ್ಲ ‘ಅಂಚೆ ಮತದಾನ’ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್
KARNATAKA

ಲೋಕಸಭಾ ಚುನಾವಣೆ: ಯಾರಿಗೆಲ್ಲ ‘ಅಂಚೆ ಮತದಾನ’ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್

By kannadanewsnow0920/03/2024 4:45 PM

ಬಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿವಿಧ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಖಾಸಗಿ ವಲಯಗಳ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಅಂಚೆ ಮತಪತ್ರ ವಿತರಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣೆಯು ಪ್ರಜಾಪ್ರಭುತ್ವ ಹಬ್ಬವಿದ್ದಂತೆ. ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯವರೆಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಎಂದು ಸೂಚಿಸಿದರು.

ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆಗಳಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆ ಮತ್ತು ಆಕಾಶವಾಣಿ, ಬಿ.ಎಸ್.ಎನ್.ಎಲ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಅಂಚೆ ಮತಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದರು.

ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಮತಗಟ್ಟೆಗೆ ತೆರಳಿ ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಫಾರಂ-12 ಅರ್ಜಿ ನೀಡಲಾಗುತ್ತದೆ. ಅದರಲ್ಲಿ ತಮ್ಮ ಹೆಸರು, ಮತದಾರ ಗುರುತಿನ ಸಂಖ್ಯೆ, ಆಯಾ ವ್ಯಾಪ್ತಿಗೆ ಒಳಪಡುವ ವಿಧಾನಸಭಾ ಕ್ಷೇತ್ರ ಹೆಸರು, ಮತ ಚಲಾಯಿಸುವ ಮತಗಟ್ಟೆ ಸಂಖ್ಯೆ ಹಾಗೂ ಇತರೆ ಮಾಹಿತಿ ಭರ್ತಿ ಮಾಡಿ ನೀಡಬೇಕು ಎಂದು ತಿಳಿಸಿದರು.

ನಮೂನೆ-12 ಭರ್ತಿ ಮಾಡಿ ನೀಡುವವರಿಗೆ ಡಿಕ್ಲರೇಷನ್ ಪಡೆಯಲಾಗುತ್ತದೆ. ನಂತರ ಅಂಚೆ ಮತಚೀಟಿಯನ್ನು ವಿತರಣೆ ಮಾಡಿ ಮತದಾನಕ್ಕೆ ಅಂಚೆ ಮತದಾನ ಸೇವಾ ಕೇಂದ್ರವನ್ನು ಸ್ಥಾಪನೆ ಮಾಡುವ ಮೂಲಕ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದರು.

ಇತರೆ ಜಿಲ್ಲೆಯ ಮತದಾರರಾಗಿದ್ದಲ್ಲಿ ನಮೂನೆ-12 ಭರ್ತಿ ಮಾಡಿ ಆಯಾ ಜಿಲ್ಲೆಯ ಚುನಾವಣಾಧಿಕಾರಿಗಳಿಗೆ ಕಳುಹಿಸಲಾಗುತ್ತದೆ. ಅವರು ನೀಡಿದ ವಿಳಾಸಕ್ಕೆ ಅಂಚೆ ಮೂಲಕ ಮತಪತ್ರವನ್ನು ಕಳುಹಿಸಲಿದ್ದು, ಮತದಾನ ಮಾಡಿ ಅಂಚೆ ಮೂಲಕ ಮತ್ತೆ ಕಳುಹಿಸಿಕೊಡಬೇಕಾಗುತ್ತದೆ ಎಂದರು.

ಇಲಾಖಾವಾರು ಅಂಚೆ ಮತದಾನಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು ಎಂದು ಸೂಚಿಸಿದ ಅವರು ಯಾವುದೇ ಕಾರಣಕ್ಕೂ ಮತದಾನದಿಂದ ಹೊರಗುಳಿಯಬಾರದು ಎಂದು ತಿಳಿಸಿದರು.

`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ನಾನು ಗೆಲ್ಲೋದು ಖಚಿತ, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟದಿಂದ ಕೆಳಗೆ ಇಳಿಯೋದು ನಿಶ್ಚಿತ- ಕೆ.ಎಸ್ ಈಶ್ವರಪ್ಪ

ಲೋಕಸಭಾ ಚುನಾವಣೆ: ಯಾರಿಗೆಲ್ಲ 'ಅಂಚೆ ಮತದಾನ'ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್ Lok Sabha Elections 2024: Who will be allowed to cast postal ballot? Here are the details
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM2 Mins Read

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM1 Min Read

BIG NEWS : ಮೋದಿ ಸರ್ಕಾರಕ್ಕೆ 11 ವರ್ಷ : 10ಕ್ಕೆ ಸೊನ್ನೆ ಅಂಕ ಎಂದ ಸಿಎಂ ಸಿದ್ದರಾಮಯ್ಯ | WATCH VIDEO

09/06/2025 12:55 PM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM

BREAKING : ತವರು ಸೀಸನ್ಗೆ ಬಿಸಿಸಿಐ ವೇಳಾಪಟ್ಟಿ ಬದಲಾವಣೆ, ಕೋಲ್ಕತಾ ಟೆಸ್ಟ್ ದೆಹಲಿಗೆ ಸ್ಥಳಾಂತರ

09/06/2025 1:33 PM

1 ರೂಪಾಯಿ ನಾಣ್ಯ ತಯಾರಿಕೆ ಖರ್ಚಾಗುವ ಹಣ ಎಷ್ಟು ಗೊತ್ತಾ? RBI ವರದಿಯಲ್ಲಿ ಅಚ್ಚರಿ ಅಂಶ ಬಹಿರಂಗ.!

09/06/2025 1:31 PM
State News
vidhana soudha KARNATAKA

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5709/06/2025 1:48 PM KARNATAKA 2 Mins Read

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ಸೇವಾ…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM

BIG NEWS : ಮೋದಿ ಸರ್ಕಾರಕ್ಕೆ 11 ವರ್ಷ : 10ಕ್ಕೆ ಸೊನ್ನೆ ಅಂಕ ಎಂದ ಸಿಎಂ ಸಿದ್ದರಾಮಯ್ಯ | WATCH VIDEO

09/06/2025 12:55 PM

BREAKING : ಕರ್ನಾಟಕದಲ್ಲಿ `ಥಗ್ ಲೈಫ್’ ಸಿನಿಮಾ ಬಿಡುಗಡೆಯ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್.!

09/06/2025 12:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.