ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಶುರುವಾಗಿದೆ. ಈ ನಡುವೆ ಡಿಕೆಸು, ಪ್ರಜ್ವಲ್ ಸೇರಿ 25 ಜನರಿಂದ ಸಲ್ಲಿಕೆಯಾಗಿದ್ದು,ಇದರಲ್ಲಿ ಕೈ 2, ಬಿಜೆಪಿ, ಜೆಡಿಎಸ್ ತಲಾ 1 ನಾಮಪತ್ರ ಸಲ್ಲಿಕೆಯಾಗಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಅಂದರೆ ಆರು ಹಾಗೂ ಉಡುಪಿ–ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಏಳು, ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ನ ತಲಾ ಒಬ್ಬರು ಹಾಗೂ ಏಳು ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  ಏ.8ರಂದು ಉಮೇದುವಾರಿಕೆಗಳನ್ನು ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ. ಜೂ.4ರಂದು ಮತ ಎಣಿಕೆ ಜರುಗಲಿದೆ.

Share.
Exit mobile version