Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 12 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್
KARNATAKA

ರಾಜ್ಯದ 12 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಬೆಂಗಳೂರು ಗ್ರಾಮಾಂತರ-1, ಚಿತ್ರದುರ್ಗ-1, ದಾವಣಗೆರೆ-2, ಹಾವೇರಿ-2, ಬೀದರ್-1, ಉಡುಪಿ-1, ಬಾಗಲಕೋಟೆ-1 ಮತ್ತು ಹಾಸನ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.

ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 14.10.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 48 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ.

1) ಮಂಜುನಾಥ. ಜಿ, ವೈದ್ಯಾಧಿಕಾರಿಗಳು, ಹೆರಿಗೆ ಆಸ್ಪತ್ರೆ, ಮಲ್ಲಸಂದ್ರ, ಬೆಂಗಳೂರು.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ನಿವೇಶನ, 1 ವಾಸದ ಮನೆ, 1 ಪ್ಲಾಟ್, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,85,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 10,53,240/- ನಗದು, ರೂ. 31,75,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 29,50,000/- ಬೆಲೆ ಬಾಳುವ ವಾಹನಗಳು, ರೂ. 67,35,000/- ಇತರೆ ಮತ್ತು ಗೃಹೋಪಯೋಗಿ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,39,13,240/-
(ಇ) ಒಟು ಆಸ್ತಿ ಮೌಲ್ಯ- ರೂ. 3,24,13,240/-

2) ವಿ. ಸುಮಂಗಳ, ನಿರ್ದೇಶಕರು, ರಾಜ್ಯ ಶಾಲಾ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ, ಹೊಸಕೆರೆಹಳ್ಳಿ, ಬೆಂಗಳೂರು.(ಹಾಲಿ ಅಮಾನತ್ತು)

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು, 5 ವಾಸದ ಮನೆಗಳು, 19 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 5,08,42,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,00,50,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 22,00,000/- ಬೆಲೆ ಬಾಳುವ ವಾಹನಗಳು, ರೂ 96,73,000/- ಬೆಲೆಬಾಳುವ ಷೇರು ಮತ್ತು ಮ್ಯೂಚುವಲ್ ಫಂಡ್, ರೂ. 4,85,200/- ಬೆಲೆ ಬಾಳುವ ಗೋಲ್ಡ್ ಬಾಂಡ್-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 2,24,08,200/-
(ಇ) ಒಟು ಆಸ್ತಿ ಮೌಲ್ಯ- ರೂ. 7,32,50,200/-

3) ಎನ್. ಕೆ. ಗಂಗಮರಿಗೌಡ, ಸರ್ವೆಯರ್, ಕೆ.ಐ.ಎ.ಡಿ.ಬಿ, ಬೆಂಗಳೂರು.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 2 ವಾಸದ ಮನೆಗಳು, 2 ಎಕರೆ ಕೃಷಿ ಜಮೀನು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,58,15,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 7,73,200/- ನಗದು, ರೂ 51,61,960/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 24,21,752/- ಬೆಲೆಬಾಳುವ ವಾಹನಗಳು ಮತ್ತು ರೂ. 24,83,600/- ಇತರೆ ಮತ್ತು ಗೃಹೋಪಯೋಗಿ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,08,40,332/-
(ಇ) ಒಟು ಆಸ್ತಿ ಮೌಲ್ಯ- ರೂ 4,66,55,512/-

4)ಎನ್. ಚಂದ್ರಶೇಖರ್, ಕೃಷಿ ಸಹಾಯಕ ನಿರ್ದೇಶಕರು, ಹೊಳಲಕೆರೆ, ಚಿತ್ರದುರ್ಗ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು, 3 ವಾಸದ ಮನೆಗಳು, 15 ಎಕರೆ 08 ಗುಂಟೆ ಕೃಷಿ ಜಮೀನು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 4,02,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 26,100/- ನಗದು, ರೂ 60,39,233/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 18,50,000/- ಬೆಲೆಬಾಳುವ ವಾಹನಗಳು, ರೂ. 33,00,409/- ಬೆಲೆಬಾಳುವ ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,12,15,742/-
(ಇ) ಒಟು ಆಸ್ತಿ ಮೌಲ್ಯ- ರೂ 5,14,15,742/-

5) ಜಗದೀಶ ನಾಯ್ಕ. ಕೆ. ಹೆಚ್, ಸಹಾಯಕ ಅಭಿಯಂತರರು, ಕೆ.ಆರ್.ಐ.ಡಿ.ಎಲ್, ದಾವಣಗೆರೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 5 ನಿವೇಶನಗಳು, 3 ವಾಸದ ಮನೆ, 17 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,55,71,500/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,82,625/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 27,00,000/- ಬೆಲೆಬಾಳುವ ವಾಹನಗಳು, ರೂ. 20,00,000/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 48,82,625/-
(ಇ) ಒಟು ಆಸ್ತಿ ಮೌಲ್ಯ- ರೂ 2,04,54,125/-

6) ಬಿ. ಎಸ್. ನಡುವಿನ ಮನೆ, ಕಿರಿಯ ಸಹಾಯಕ (ಪ್ರಸ್ತುತ ಹಿರಿಯ ಸಹಾಯಕ), ಕರ್ನಾಟಕ ಆಹಾನ ಮತ್ತು ನಾಗರೀಕ ಸರಬರಾಜು ನಿಗಮ, ದಾವಣಗೆರೆ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ನಿವೇಶನ, 4 ವಾಸದ ಮನೆಗಳು, 20 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,70,79,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 60,554/- ನಗದು, ರೂ. 16,25,130/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 42,90,000/- ಬೆಲೆಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 59,75,684/-
(ಇ) ಒಟು ಆಸ್ತಿ ಮೌಲ್ಯ- ರೂ 2,30,54,684/-

7)ಬಸವೇಶ ಶಿವಪ್ಪ ಶಿಡೆನೂರ, ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ಸವಣೂರು ತಾಲ್ಲೂಕು ಪಂಚಾಯಿತಿ, ಹಾವೇರಿ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 2 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 1 ವಾಸದ ಮನೆ, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 65,07,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 4,450/- ನಗದು, ರೂ. 48,97,279/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,00,000/- ಬೆಲೆಬಾಳುವ ವಾಹನಗಳು, ರೂ. 40,10,000/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 10211729/-
(ಇ) ಒಟು ಆಸ್ತಿ ಮೌಲ್ಯ- ರೂ 1,67,18,729/-

8)ಅಶೋಕ್ ಶಂಕರಪ್ಪ ಅರಳೇಶ್ವರ್, ರಾಜಸ್ವ ನಿರೀಕ್ಷಕರು, ತಾಲ್ಲೂಕು ಕಛೇರಿ, ರಾಣೆಬೆನ್ನೂರು ತಾಲ್ಲೂಕು, ಹಾವೇರಿ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 2 ವಾಸದ ಮನೆಗಳು, 11 ಎಕರೆ 20 ಗುಂಟೆ ಕೃಷೀ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,26,06,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,45,650/- ನಗದು, ರೂ. 26,02,812/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 15,00,000/- ಬೆಲೆಬಾಳುವ ವಾಹನಗಳು, ರೂ. 57,42,000/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 99,90,462/-
(ಇ) ಒಟು ಆಸ್ತಿ ಮೌಲ್ಯ- ರೂ 2,25,96,462/-

9) ಧೂಳಪ್ಪ, ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಔರದ್, ಬೀದರ್ ಜಿಲ್ಲೆ

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 1 ವಾಸದ ಮನೆ, 33 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,82,87,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 83,09,000/- ನಗದು, ರೂ 5,02,500/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 43,77,000/- ಬೆಲೆಬಾಳುವ ವಾಹನಗಳು, ರೂ. 24,60,000/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,56,48,500/-
(ಇ) ಒಟು ಆಸ್ತಿ ಮೌಲ್ಯ- ರೂ 3,39,35,500/-

10) ಲಕ್ಷ್ಮೀ ನಾರಾಯಣ ಪಿ ನಾಯಕ್, ಆರ್.ಟಿ.ಓ, ಉಡುಪಿ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 2 ವಾಸದ ಮನೆಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 47,50,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,15,000/- ನಗದು, ರೂ. 5,10,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 1,67,39,234/- ಇತರೆ (ಫೋನ್, ಎನ್.ಆರ್.ಐ ಬ್ಯಾಂಕ್ ಬ್ಯಾಲೆನ್ಸ್, ಎಫ್‌ಡಿ ಹಾಗೂ ಬ್ರೋಕರ್ ಆಫೀಸ್), ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,73,64,234/-
(ಇ) ಒಟು ಆಸ್ತಿ ಮೌಲ್ಯ- ರೂ 2,21,14,234/-

11) ಚೇತನ್, ಕಿರಿಯ ಅಭಿಯಂತರರಿ, ಕೆ.ಬಿ.ಜೆ.ಎನ್.ಎಲ್, ಎ.ಆರ್.ಬಿ.ಸಿ, ವಿಭಾಗ-2, ಕಮಟಗಿ, ಬಾಗಲಕೋಟೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 2 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು, 1 ವಾಸದ ಮನೆ-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,20,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 36,200/- ನಗದು, ರೂ. 24,81,360/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 20,00,000/- ಬೆಲೆಬಾಳುವ ವಾಹನಗಳು, ರೂ. 2,11,214/- ಬ್ಯಾಂಕ್ ಬ್ಯಾಲೆನ್ಸ್-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 47,28,774/-
(ಇ) ಒಟು ಆಸ್ತಿ ಮೌಲ್ಯ- ರೂ 1,67,28,774/-

12)ಜ್ಯೋತಿ ಮೇರಿ, ಪ್ರಥಮ ದರ್ಜೆ ಸಹಾಯಕರು, ಅಕೌಂಟ್ ಶಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 1 ವಾಸದ ಮನೆ, 5 ಎಕರೆ 20 ಗುಂಟೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,12,53,425/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 15,09,490/- ನಗದು, ರೂ. 15,31,848/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 64,53,000/- ಬೆಲೆಬಾಳುವ ವಾಹನಗಳು, ರೂ. 10,00,000/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,04,94,338/-
(ಇ) ಒಟು ಆಸ್ತಿ ಮೌಲ್ಯ- ರೂ 2,17,47,763/-

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಶಿವಮೊಗ್ಗ: ಇಂದು ಸೊರಬದ ಉಳವಿಯಲ್ಲಿ ಎರಡು ದುರ್ಘಟನೆ, ಇಬ್ಬರಿಗೆ ಗಂಭೀರ ಗಾಯ

Good News ; ‘RBI’ನಿಂದ ‘e₹’ ಅನಾವರಣ ; ಈಗ ಇಂಟರ್ನೆಟ್ ಅಗತ್ಯವಿಲ್ಲ, ಒಂದೇ ಕ್ಲಿಕ್’ನಲ್ಲಿ ‘ಪಾವತಿ’

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.