ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್‌ ಬ್ಯಾಕ್‌ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಇದಕ್ಕೆ ಬಿ.ಎಸ್‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣ ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು ಹೇಳಿದ್ದಾರೆ.

 

BIGG NEWS: ಯೂಟ್ಯೂಬ್‍ನಲ್ಲಿ ವೀಡಿಯೋ ನೋಡಿ ATM ಕಳ್ಳತನಕ್ಕೆ ಯತ್ನಿಸಿದ್ದ ಖತರ್ನಾಕ್ ಗ್ಯಾಂಗ್‌ ಅರೆಸ್ಟ್‌

 

ನಗರದಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಬರುವುದು ಸಹಜ. ಆದರೆ, ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.
ಬಿಜೆಪಿಯವರು ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್​ವೈ, ನಮ್ಮ ಪ್ರಧಾನಿಯೇ ಹಿಂದುಳಿದ ವರ್ಗದವರು. ಹಿಂದುಳಿದ ವರ್ಗದ ಅನೇಕ ಮಂದಿ ವಿವಿಧ ರಾಜ್ಯಗಳಲ್ಲಿ ಸಿಎಂ ಆಗಿದ್ದಾರೆ. ದೇಶದ ಎರಡು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ.‌ ಸಿದ್ದರಾಮಯ್ಯನವರು ಹೀಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.

Share.
Exit mobile version