ಬೆಂಗಳೂರು : ರಾಜ್ಯದ ಆರ್ ಟಿ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ.

 ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.  ಬೀದರ್ ಜಿಲ್ಲೆಯ ಹುಮ್ನಾಬಾದ್ ಚೆಕ್ ಪೋಸ್ಟ್ ಸೇರಿ ರಾಜ್ಯದ ಹಲವು ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ.   ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ. ವಾಹನ ಸವಾರರಿಂದ ಹಣ ವಸೂಲಿ ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತಅಧಿಕಾರಿಗಳು ಹುಮ್ನಾಬಾದ್, ಅತ್ತಿಬೆಲೆ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್ ಟಿ ಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ.

ಆರ್ ಟಿ ಒ ಅಧಿಕಾರಿ ಮಹೇಶ್ ಕರ್ತವ್ಯದಲ್ಲಿದ್ದ ವೇಳೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಣ ವಸೂಲಿ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.  ಬೀದರ್ ನ ಹುಮನಾಬಾದ್  ನಲ್ಲಿರುವ ಆರ್ ಟಿ ಒ ಚೆಕ್ ಪೋಸ್ಟ್ ಮೇಲೂ ದಾಳಿ ನಡೆಸಿದೆ.

ಬೆಳಗ್ಗೆ ನಾಲ್ಕು ಗಂಟೆಯಿಂದ ರಾಜ್ಯದಾದ್ಯಂತ ಆರ್ ಟಿ ಓ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಸುಮೋಟೋ ಕೇಸ್ ಆಧಾರದಲ್ಲಿ ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ,ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ,ಬಳ್ಳಾರಿಯಲ್ಲಿ ದಾಳಿ ನಡೆದಿದೆ.  ಕೊಪ್ಪಳ,ಹೊಸಪೇಟೆ,ಗುಂಡ್ಲುಪೇಟೆ, ಬೀದರ್ ನ ಹುಮ್ನಾಬಾದ್ ಭಾಗದ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

BREAKING NEWS : ಇಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ‘ಭಾರತ್ ಜೋಡೋ ಯಾತ್ರೆ’ ಎಂಟ್ರಿ : ಬಿಗಿ ಪೊಲೀಸ್ ಬಂದೋಬಸ್ತ್ |Bharath Jodo Yathra

BIGG NEWS : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ : ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೆರಡು ದಿನ ‘Yellow Alert’ ಘೋಷಣೆ : ಹವಾಮಾನ ಇಲಾಖೆ

Share.
Exit mobile version