Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM

ಮಹಿಳೆಯರ ದೀರ್ಘಾಯುಷ್ಯಕ್ಕೆ ಕಾರಣ ಕಂಡುಹಿಡಿದ ವಿಜ್ಞಾನಿಗಳು.! ಗುಟ್ಟೇನು ಗೊತ್ತಾ?

05/06/2025 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2 ದಿನದಲ್ಲೇ ಅಂತ್ಯಗೊಂಡ ‘ಲಾರಿ ಮುಷ್ಕರ’: ಸಚಿವ ‘ರಾಮಲಿಂಗಾರೆಡ್ಡಿ’ ಈ ಚಾಣಾಕ್ಯತೆಯೇ ಕಾರಣ?
KARNATAKA

2 ದಿನದಲ್ಲೇ ಅಂತ್ಯಗೊಂಡ ‘ಲಾರಿ ಮುಷ್ಕರ’: ಸಚಿವ ‘ರಾಮಲಿಂಗಾರೆಡ್ಡಿ’ ಈ ಚಾಣಾಕ್ಯತೆಯೇ ಕಾರಣ?

By kannadanewsnow0919/04/2025 2:33 PM

ಬೆಂಗಳೂರು: ರಾಜ್ಯಾಧ್ಯಂತ ನಡೆಯುತ್ತಿದ್ದಂತ ಲಾರಿ ಮುಷ್ಕರ ಅಂತ್ಯಗೊಂಡಿದೆ. ಕೇವಲ ಎರಡು ದಿನಗಳೊಳಗೆ ಮುಷ್ಕರಕ್ಕೆ ತೆರೆಬಿದ್ದಿದೆ. ಹೀಗೆ ತೆರೆ ಬೀಳೋದರ ಹಿಂದಿನ ಗುಟ್ಟೇನು ಎಂಬುದೇ ಈಗ ಹಾಟ್ ಟಾಪಿಕ್. ಅಲ್ಲದೇ ಸಚಿವ ರಾಮಲಿಂಗಾರೆಡ್ಡಿ ಚಾಣಾಕ್ಯತೆಯೇ ಇದಕ್ಕೆ ಕಾರಣವೆಂದೇ ಹೇಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ.

ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್‌ ಪಡೆಯಲಾಗಿದೆ.

ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರ, ಆದರೆ ಚೆನ್ನಾರೆಡ್ಡಿ ಲಾರಿ ಮಾಲೀಕರ ಮತ್ತೊಂದು ಬಣ ಬಹಿರಂಗವಾಗಿ ಸದರಿ ಮುಷ್ಕರಕ್ಕೆ ಬೆಂಬಲ ನೀಡದೇ ಇದ್ದ ಕಾರಣದಿಂದಾಗಿ ಎರಡನೇ ದಿನಕ್ಕೆ ಮುಷ್ಕರವು ತನ್ನ ವೇಗವನ್ನು ಕಳೆದುಕೊಂಡು ಸಹಜ ಸ್ಥಿತಿಗೆ ಬರಲು ಪ್ರಾರಂಭವಾದ ಕಾರಣ. .ಜಿ.ಆರ್ ಷಣ್ಮುಖಪ್ಪರವರು ಸಾರಿಗೆ ಸಚಿವರನ್ನು ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಲು ಭೇಟಿ ಮಾಡಿದರು. ಹೇಗಿದ್ದರೂ ಮಾರನೆ ದಿನ ಮತ್ತಷ್ಟು ಸಹಜ ಸ್ಥಿತಿಗೆ ಬರುತ್ತಿದ್ದ ಮುಷ್ಕರವು ತಮ್ಮ ಕೈತಪ್ಪಲಿದೆ ಎಂಬುದನ್ನು ಅರಿತ ಸಂಘಟಕರು ಮಾತುಕತೆಗೆ ಮುಂದಾದರು ಎಂಬುದು ಇದರ ಹಿಂದಿನ ರಹಸ್ಯವಾಗಿದೆಯೆಂದು ಬಲ್ಲ ಮೂಲಗಳು ತಿಳಿಸಿವೆ.

ಸಂಘದ ಪದಾಧಿಕಾರಿಗಳೊಂದಿಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು, ಎರಡು ಬಾರಿ ಈ ಮೊದಲೇ ಸಂಧಾನ ಸಭೆ ನಡೆಸಿದ್ದರು. ಮುಖ್ಯಮಂತ್ರಿಗಳು ಸಹ ಒಂದು ಬಾರಿ ಸಂಧಾನ ಸಭೆ ನಡೆಸಿದ್ದರು.

ಮೊದಲೆರಡು ಸಂಧಾನದಲ್ಲಿಯೇ ಅವರ ಪ್ರಮುಖ ಬೇಡಿಕೆಗಳಾದ ಡೀಸೆಲ್ ಬೆಲೆ ಇಳಿಸುವ, ಟೋಲ್ ರದ್ದು ಮಾಡುವ ಬೇಡಿಕೆಗಳನ್ನು ಹೊರತುಪಡಿಸಿ, ಉಳಿದ ಬೇಡಿಕೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಈಡೇರಿಸುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿದ್ದರು.

ವಾಹನಗಳ ಸಾಮರ್ಥ್ಯ ಅರ್ಹತಾ ಪತ್ರ (ಫಿಟ್‌ನೆಸ್ ಸರ್ಟಿಫಿಕೆಟ್) ನವೀಕರಣ ಶುಲ್ಕ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ನಿರಾಕರಿಸುವುದು ಮತ್ತು ನವೀಕರಣಕ್ಕೆ ₹13 ಸಾವಿರ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ಒಪ್ಪಿಕೊಳ್ಳದೇ ಕಡಿಮೆ ಮಾಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಹಾಗೂ ಡೀಸೆಲ್ ದರವನ್ನು ಹಿಂದಿನ ಬಿ.ಜೆ.ಪಿ ಸರ್ಕಾರ 2023ಕ್ಕಿಂತ ಮೊದಲು ಯದ್ವಾತದ್ವಾ ಏರಿಕೆ ಮಾಡಿರುವ ಲಾರಿ ಮಾಲೀಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಾರಿಗೆ ಸಚಿವರು ಮಾತನಾಡಿ ಈ ಬಗ್ಗೆ ತಾವುಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ ,ನಾವು ಕೂಡ ಪತ್ರ ಬರೆಯುತ್ತೇವೆ ಎಂದು ತಿಳಿಸಿದರು.

ಮುಂದುವರೆದು, ಆನ್‌ಲೈನ್‌ನಲ್ಲಿ ದಂಡ ಪಾವತಿ ವ್ಯವಸ್ಥೆ ಜಾರಿ, ಹಲವು ವರ್ಷಗಳಿಂದ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ಒಂದು ಬಾರಿಯ ತೀರುವಳಿಗೆ (ಒನ್ ಟೈಮ್ ಸೆಟ್ಸ್‌ಮೆಂಟ್) ಅವಕಾಶ ಈ ಬಗ್ಗೆ ಸಕಾರಾತ್ಮಕವಾಗಿ ಸಾರಿಗೆ ಸಚಿವರು ಸ್ಪಂದಿಸಿರುತ್ತಾರೆ.

ನಗರಗಳಿಗೆ ಸರಕು ವಾಹನಗಳ ಪ್ರವೇಶಕ್ಕೆ ಕೇವಲ 5 ಗಂಟೆ ಅವಕಾಶ ನೀಡಿರುವ ಬಗ್ಗೆ,ನಗರಗಳಿಗೆ ಸರಕು ಸಾಗಾಣಿಕೆ ವಾಹನಗಳ ಪ್ರವೇಶ ನಿರ್ಬಂಧ ಸಡಿಲಿಕೆ, ಗಡಿ ತನಿಖಾ ಠಾಣೆ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಹಾಗೂ ಪೊಲೀಸರ ಕಿರುಕುಳ ತಪ್ಪಿಸಲು ಗೃಹ ಸಚಿವರೊಡನೆ ಮಾತುಕತೆ ನಡೆಸುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ.

ಈ ಮೇಲಿನ ಎಲ್ಲಾ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘದ ಅಧ್ಯಕ್ಷ ಜಿ.ಆ‌ರ್. ಷಣ್ಮುಖಪ್ಪರವರು ಮುಷ್ಕರ ವಾಪಸ್ಸು ತೆಗೆದುಕೊಂಡಿದ್ದಾರೆ. ಈ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಚಾಣಾಕ್ಯತೆಯ ಮಾತುಕತೆಯ ಮೂಲಕ ಎರಡೇ ದಿನದಲ್ಲಿ ಲಾರಿ ಮುಷ್ಕರ ಕರ್ನಾಟಕದಲ್ಲಿ ಅಂತ್ಯಗೊಳ್ಳುವಂತೆ ಆಯ್ತು ಎಂಬುದು ಬಲ್ಲವರ ಮಾತು.

ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಗೃಹ ಸಚಿವ ಪರಮೇಶ್ವರ್

SHOCKING : ಪತ್ನಿಯ ಪ್ರಿಯಕರನ ‘ಜನನಾಂಗ’ ಕತ್ತರಿಸಿ ಠಾಣೆಗೆ ತಂದ ಪತಿ : ಬೆಚ್ಚಿಬಿದ್ದ ಪೊಲೀಸ್ ಅಧಿಕಾರಿಗಳು!

Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM1 Min Read

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM2 Mins Read
Recent News

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM

ಮಹಿಳೆಯರ ದೀರ್ಘಾಯುಷ್ಯಕ್ಕೆ ಕಾರಣ ಕಂಡುಹಿಡಿದ ವಿಜ್ಞಾನಿಗಳು.! ಗುಟ್ಟೇನು ಗೊತ್ತಾ?

05/06/2025 4:18 PM

ಸಲಿಂಗ ವಿವಾಹ ಕಾನೂನು ಬದ್ಧವಲ್ಲ, ಆದ್ರೆ ದಂಪತಿಗಳು ಕುಟುಂಬ ರಚಿಸಬಹುದು : ಹೈಕೋರ್ಟ್

05/06/2025 4:04 PM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

By KannadaNewsNow05/06/2025 4:34 PM KARNATAKA 1 Min Read

ಬೆಂಗಳೂರು : ಬುಧವಾರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಪ್ರಾಣ ಕಳೆದುಕೊಂಡ 11 ಮಂದಿಗೆ ರಾಯಲ್…

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.