Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

23/06/2025 4:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ
KARNATAKA

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

By kannadanewsnow0923/06/2025 4:01 PM

ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರು ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ , ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ

ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಿಕ್ಷಕರ ನೇಮಕಾತಿಗೆ ಆದೇಶ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಹೊರಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.

ಸಚಿವ ಎಚ್.ಕೆ.ಪಾಟೀಲ್ ಪತ್ರ: ಅಕ್ರಮ ಗಣಿಗಾರಿಕೆ ತನಿಖೆಗೆ ವಿಶೇಷ ಕೋರ್ಟ್ ರಚನೆಗೆ ಮನವಿ

ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು, ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ, ಗಣಿಗಾರಿಕೆಯಲ್ಲಿರುವ ಬಾಕಿಯ ವಸೂಲಾತಿಗೆ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು.

ಕಾಂಗ್ರೆಸ್ ಶಾಸಕ ರಾಜು ಕಾಗೇ ಯವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್.ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದರು.

KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM1 Min Read

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM1 Min Read

KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ

23/06/2025 3:58 PM1 Min Read
Recent News

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

23/06/2025 4:01 PM

KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ

23/06/2025 3:58 PM
State News
KARNATAKA

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

By kannadanewsnow0923/06/2025 4:10 PM KARNATAKA 1 Min Read

ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ…

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

23/06/2025 4:01 PM

KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ

23/06/2025 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.