ಶಿವಮೊಗ್ಗ : ಮಧು ಟಿ. ಎಂಬುವವರು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಸ್. ಎಂ. ಮುತ್ತಯ್ಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ “ಸಮಕಾಲೀನ ಮಹಿಳಾ ಕಥನ ಸಾಹಿತ್ಯ; ವಿಭಿನ್ನ ನೆಲೆಗಳು” (ಹೆಚ್.ನಾಗವೇಣಿ, ಸುಮಂಗಲಾ, ಸುನಂದಾ ಪ್ರಕಾಶ ಕಡಮೆ, ವಿನಯಾ ಒಕ್ಕುಂದರವರ ಕಥನ ಸಾಹಿತ್ಯವನ್ನು ಅನುಲಕ್ಷಿಸಿ) ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.
ಮಧು ಟಿ. ಶಿವಮೊಗ್ಗ ತಾಲ್ಲೂಕಿನ ಗಾಜನೂರು ಅಗ್ರಹಾರದ ಅರಸಮ್ಮ ಮತ್ತು ತಿಮ್ಮಯ್ಯ ದಂಪತಿಗಳ ಪುತ್ರರಾಗಿದ್ದು, ಪ್ರಸ್ತುತ ಕಟೀಲ್ ಅಶೋಕ ಪೈ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
BREAKING: ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ
BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ