ಮಡಿಕೇರಿ : ಮಡಿಕೇರಿ ಹೋಬಳಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ ಅವರ ಕಚೇರಿ ಸಭಾಂಗಣದಲ್ಲಿ ‘ಪಿಂಚಣಿ ದಿನ’ವು ಜೂನ್, 26 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಜೂನ್, 26 ರಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದುಕೊರತೆಗಳನ್ನು ನೋಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಕೋರಿದ್ದಾರೆ.