ಬೆಳಗಾವಿ : ಕೇಂದ್ರ ಸರ್ಕಾರದ ಅನುಮತಿ ಪಡೆದು ಶೀಘ್ರವೇ ಮಹದಾಯಿ ಯೋಜನೆಗೆ ಜಾರಿಗೆ ತಯಾರಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅನುಮತಿ ಪಡೆದು ಶೀಘ್ರವೇ ಮಹದಾಯಿ ಯೋಜನೆಗೆ ಜಾರಿಗೆ ತರಲಾಗುವುದು. ಕೆಲವು ದಿನಗಳಲ್ಲಿ ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳು ಸಹ ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ. ಹೀಗಾಗಿ ಎಲ್ಲಾ ನೀರಾವರಿ ಯೋಜನೆ ಜಾರಿಗೆ ತರಲು ನಮ್ಮ ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ.
ನಮಗೆ ಹಂಚಿಕೆಯ ನೀರು ಬಳಕೆಗೆ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್ ಗೆ ಮನವಿ ಮಾಡಲಾಗಿದೆ. ಸುಪ್ರೀಂಕೋರ್ಟ್ ಲೀಗಲ್ ತಂಡ ಹೋರಾಟ ಮಾಡುತ್ತಿದೆ. ಮಹದಾಯಿ ಯೋಜನೆಗೆ ಯಾವುದೇ ಅಡೆತಡೆ ಆಗಲ್ಲ ಎಂದು ಹೇಳಿದ್ದಾರೆ.