ಮಹಾರಾಷ್ಟ್ರ : ಮತಗಟ್ಟೆಗೆ ಈವಿಎಂ ಮಷೀನ್ ಗಳು ತಡವಾಗಿ ಆಗಮಿಸಿದ್ದಕ್ಕೆ ಕಿಡಿಗೇಡಿ ಒಬ್ಬ ಮಷೀನ್ ಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲಾವಡಿ ಗ್ರಾಮದಲ್ಲಿ ನಡೆದಿದೆ.

ಹೌದು ತಡವಾಗಿ ಬಂದಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿ ಈವಿಎಂ ಗೆ ಬೆಂಕಿ ಹಚ್ಚಿದ್ದಾನೆ. ಸೋಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲವಾಡಿಯಲ್ಲಿ ಇವಿಎಂ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈವಿಎಂ ತಡವಾಗಿ ಬಂದಿದ್ದಕ್ಕೆ ಕಿಡಿಗೇಡಿ ಬೆಂಕಿ ಹಚ್ಚಿದ್ದಾನೆ.ಇದೀಗ ಕಿಡಿಗೇಡಿಯನ್ನು ಚುನಾವಣಾ ಸಿಬ್ಬಂದಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಸೊಲ್ಲಾಪುರ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Exit mobile version