ಮಹಾರಾಷ್ಟ್ರ: ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ 35 ವರ್ಷದ ಪತ್ರಕರ್ತನನ್ನು ಬಂಧಿಸಲಾಗಿದೆ. ಈತ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯನ್ನು ಕೊಂದು ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.
ಏನಿದು ಘಟನೆ?
ಮೃತಳನ್ನು ಶಿಯುರ್ ನಿವಾಸಿ 24 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಮೂರು ವರ್ಷದ ಮಗುವನ್ನು ಹೊಂದಿದ್ದಳು. ಈಕೆ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಸೌರಭ್ ಲಾಖೆ (35) ಎಂಬಾತನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇತ್ತೀಚೆಗೆ ಆಕೆ ತನ್ನ ಕುಟುಂಬವನ್ನು ತೊರೆದು ಇಲ್ಲಿನ ಹುಡ್ಕೋ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಅಲ್ಲಿ ಲಾಖೆ ಅವಳನ್ನು ಭೇಟಿಯಾಗುತ್ತಿದ್ದನು. ಈ ನಡುವೆ ಮಹಿಳೆ ತನ್ನನ್ನು ಮದುವೆಯಾಗುವಂತೆ ಬೇಡಿಕೆ ಇಟ್ಟಿದ್ದಾಳೆ. ಇದರಿಂದ ಬೇಸತ್ತ ಲಾಖೆ ಆಗಸ್ಟ್ 15 ರಂದು ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ನಂತ್ರ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ.
ಮರುದಿನ ಮೃತ ಮಹಿಳೆಯ ತಲೆ ಮತ್ತು ಕೈಗಳನ್ನು ತೆಗೆದುಕೊಂಡು ಶಿಯುರ್ನಲ್ಲಿರುವ ಗೋಡೌನ್ನಲ್ಲಿ ಇರಿಸಿದನು. ಬುಧವಾರ ಲಾಖೆ ದೇಹದ ಉಳಿದ ಭಾಗಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಮನೆಯ ಮಾಲೀಕರು ಅವನನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಇದೀಗ ಲಾಖೆಯನ್ನು ಪೊಲೀಸರು ಬಂಧಿಸಿದ್ದಾರೆ.
Watch: ರಿಪೇರಿ ವೇಳೆ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟ; ವೈರಲ್ ಆದ ವಿಡಿಯೋ