ಬೆಳಗಾವಿ : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯದಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ.

ಹೌದು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಿಂದ 13 ಯುವಕರು ಪ್ರವಾಸಕ್ಕೆ ಎಂದು ಮಹಾರಾಷ್ಟಕ್ಕೆ ತೆರಳಿದ್ದರು. ನಿಪ್ಪಾಣಿಯ ಗಣೇಶ ಕದಂ, ಹಾಗೂ ಪ್ರತೀಕ್ ಪಾಟೀಲ್ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ನೀರು ಪಾಲಾದ ಯುವಕರಿಗಾಗಿ ಅಗ್ನಿಶಾಮಕದಳ ಸಿಬ್ಬಂದಿಗಳು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.

Share.
Exit mobile version