Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ಒತ್ತಡದಿಂದ ಅಮೆರಿಕ ಯುದ್ಧ ಆರಂಭಿಸಿತು : ‘ಟ್ರಂಪ್’ರ ‘ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ’ ರಾಜೀನಾಮೆ

17/03/2026 7:58 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM

ಕೇರಳ ವಿಧಾನಸಭಾ ಚುನಾವಣೆ 2026: ಕಾಂಗ್ರೆಸ್ ಪಕ್ಷದಿಂದ 55 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

17/03/2026 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.31ರೊಳಗೆ ಎಲ್ಲಾ ಗ್ರಾಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಿ: ಮಂಡ್ಯ ಜಿ.ಪಂ.ಸಿಇಓ ನಂದಿನಿ ಸೂಚನೆ
KARNATAKA

ಜ.31ರೊಳಗೆ ಎಲ್ಲಾ ಗ್ರಾಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಿ: ಮಂಡ್ಯ ಜಿ.ಪಂ.ಸಿಇಓ ನಂದಿನಿ ಸೂಚನೆ

By kannadanewsnow0902/01/2026 8:57 PM

ಮಂಡ್ಯ: ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾ.ಪಂ. ನಲ್ಲಿ ನಡೆದ ಕಡತ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಗ್ರಾ.ಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡುವಂತೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಫಲವಾಗಿ ಈವರೆಗೆ 129 ಗ್ರಾಮ ಪಂಚಾಯತ್ ಗಳಲ್ಲಿ ಅಭಿಲೇಖಾಲಯವನ್ನು ಸುಸಜ್ಜಿತವಾಗಿ ಸಜ್ಜುಗೊಳಿಸಲಾಗಿದ್ದು ಸದರಿ ಗ್ರಾ.ಪಂ.ಗಳನ್ನು ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಅಭಿನಂದಿಸಿದರು.

ಶುಕ್ರವಾರ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉತ್ತಮವಾಗಿ ಅಭಿಲೇಖಾಲಯ ಸಜ್ಜುಗೊಳಿಸಿ ದಾಖಲೆಗಳನ್ನು ಸೂಕ್ತವಾಗಿ ನಿರ್ವಹಿಸುವ ಗ್ರಾ.ಪಂ. ಮತ್ತು ತಾಲ್ಲೂಕು ಪಂಚಾಯತ್ ಗಳಿಗೆ ಜನವರಿ 10ರಂದು ನಡೆಯುವ ಪಂಚಾಯತ್ ರಾಜ್ ಉತ್ಸವದಂದು ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಹೊಸದಾಗಿ ಜಾರಿಗೆ ತರಲಾಗಿರುವ ಇ-ಸ್ವತ್ತು ತಂತ್ರಾಂಶದಲ್ಲಿ ಕೋರಲಾಗುವ ದಾಖಲಾತಿಗಳನ್ನು ಪೂರ್ವಭಾವಿಯಾಗಿ ಸಂಗ್ರಹಿಸಲು, ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನಿಗಧಿತ ಸಮಯದೊಳಗೆ ಒದಗಿಸಲು ಅಭಿಲೇಖಾಲಯ ಅಗತ್ಯವಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳು ಜನವರಿ 31ರೊಳಗೆ ಅಭಿಲೇಖಾಲಯ ಸಜ್ಜುಗೊಳಿಸುವಂತೆ ಸೂಚಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆ 2026-27ನೇ ಸಾಲಿನ ಕ್ರಿಯಾಯೋಜನೆ ಜನವರಿ 15ರೊಳಗೆ ಸಿದ್ದಪಡಿಸಿ ಸಲ್ಲಿಸಬೇಕಾಗಿದ್ದು, ಉಪಕಾರ್ಯದರ್ಶಿ (ಅಭಿವೃದ್ಧಿ) ಸೇರಿದಂತೆ ನರೇಗಾ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ, ಗ್ರಾ.ಪಂ. ಹಂತದಲ್ಲಿಯೇ ನಿಯಮಾನುಸಾರ ಹಾಗೂ ಯೋಜನೆಯ ಮಾರ್ಗಸೂಚಿಯನುಸಾರ ಸಿದ್ದಪಡಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದರು.

ನರೇಗಾ ಯೋಜನೆಯಡಿ ಬಿಡುಗಡೆಯಾಗಿರುವ ವೈಯುಕ್ತಿಕ ಕಾಮಗಾರಿಗಳ ಸಾಮಗ್ರಿ ಮೊತ್ತದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಲು ಕ್ರಮವಹಿಸಬೇಕು, ಯಾವುದೇ ಅನುದಾನವನ್ನು ವ್ಯಪಗತವಾಗದಂತೆ ಫಲಾನುಭವಿಗಳಿಗೆ ನಿಯಮಾನುಸಾರ ಪಾವತಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನೀಡಲಾಗಿರುವ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಹಾಗೂ 2025-26ನೇ ಸಾಲಿನ ಎಂಪಿಕ್ ಗುರಿಗೆ ಅನುಗುಣವಾಗಿ ಶೇಕಡ 100ರಷ್ಟು ಪ್ರಗತಿ ಸಾಧಿಸುವಂತೆ ಸೂಚಿಸಲಾಗಿದೆ. ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

15ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಿ ಬಾಕಿ ಉಳಿದಿರುವ ಅನುದಾನವನ್ನು ನಿಮಾನುಸಾರ ವೆಚ್ಚ ಭರಿಸುವಂತೆ ಗ್ರಾ.ಪಂ. ಪಿಡಿಓ ಗಳು ಹಾಗೂ ತಾ.ಪಂ. ಇಓ ಗಳಿಗೆ ಸೂಚಿಸಲಾಗಿದೆ. ಕೆಲವು ಗ್ರಾಮ ಪಂಚಾಯತ್ ಗಳಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಸದರಿ ಸಮಸ್ಯೆಗಳ ಬಗ್ಗೆ ಈಗಾಗಲೇ ರಾಜ್ಯ ಕಚೇರಿಗೆ ಮಾಹಿತಿ ನೀಡಲಾಗಿದ್ದು, ಸಮಸ್ಯೆ ಪರಿಹರಿಸಲು ಅನುಸರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತೆರಿಗೆ ವಸೂಲಾತಿಯ ಪ್ರಗತಿಯನ್ನು ಹೆಚ್ಚಿಸಲು ಎಲ್ಲಾ ತಾ.ಪಂ. ಗಳಿಗೆ ಗುರಿ ನಿಗಧಿಗೊಳಿಸಲಾಗಿದ್ದು, 10 ದಿನಗಳ ನಂತರ ಮತ್ತೊಮ್ಮೆ ಈ ಬಗ್ಗೆ ಪರಿಶೀಲನೆ ನಡೆಸಿ ನಿಗಧಿಗೊಳಿಸಲಾಗಿರುವ ಗುರಿಗೆ ಅನುಗುಣವಾಗಿ ಪ್ರಗತಿಯಾಗಿರುವ ಬಗ್ಗೆ ಪರಿಶೀಲಿಸಲಾಗುವುದು. ಆದ್ದರಿಂದ ಮುಂದಿನ 10 ದಿನದಲ್ಲಿ ನಿರೀಕ್ಷಿತ ಗುರಿಯನ್ನು ಸಾಧಿಸಲು ಕ್ರಮವಹಿಸುವಂತೆ ಸೂಚಿಸಿದರು.

ಬಿಕ್ಷುಕರ ಕರ ಮತ್ತು ಗ್ರಂಥಾಲಯ ಕರ ಪಾವತಿ:

ಸರ್ಕಾರದ ನಿರ್ದೇಶನದಂತೆ ಗ್ರಾ.ಪಂ.ಗಳು ಬಿಕ್ಷುಕರ ಕರ ಮತ್ತು ಗ್ರಂಥಾಲಯ ಕರವನ್ನು ಪಾವತಿಸಬೇಕಾಗಿದ್ದು, ಹಿಂದಿನ ಸಾಲುಗಳ ಆಡಿಟ್ ವರದಿಗಳನ್ನು ಪರಿಶೀಲಿಸಿ ಪಾವತಿಸಬೇಕಾಗಿರುವ ಶೇಕಡವಾರು ಮೊತ್ತಕ್ಕೆ ಅನುಗುಣವಾಗಿ ಬಿಕ್ಷುಕರ ಕರ ಮತ್ತು ಗ್ರಂಥಾಲಯ ಕರವನ್ನು ಪಾವತಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸ್ವಚ್ಛ ಭಾರತ ಮಿಷನ್ ಯೋಜನೆಯ ಪ್ರಗತಿ:

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣ ಮಾಡಿಕೊಂಡಿರುವ ಫಲಾನುಭವಿಗಳ ವಿವರವನ್ನು ಐಎಂಐಎಸ್ ನಲ್ಲಿ ದಾಖಲಿಸಿ ನಂತರ ಜಿಯೋ ಟ್ಯಾಗ್ ಮಾಡಲು ಕ್ರಮವಹಿಸುವಂತೆ ಸಂಬಂಧಪಟ್ಟ ಪಿಡಿಓಗಳಗೆ ಸೂಚಿಸುವಂತೆ ತಿಳಿಸಲಾಗಿದೆ ಹಾಗೂ ಬೂದು ನೀರು ನಿರ್ವಹಣಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅನುದಾನ ಬೇಡಿಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದರು.

ಗ್ರಾ.ಪಂ. ಮಟ್ಟದ ಸಂಜೀವಿನಿ ಒಕ್ಕೂಟಗಳ ಲೆಕ್ಕ ಪರಿಶೋಧನೆ ಪೂರ್ಣಗೊಳಿಸಲು ಸೂಚನೆ:

ಎನ್.ಆರ್.ಎಲ್. ಎಂ. ಯೋಜನೆಯಡಿ ರಚಸಲಾಗಿರುವ ಗ್ರಾ.ಪಂ. ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವು ಉದ್ದೇಶಿತ ಚಟುವಟಿಕೆಗಳಿಗೆ ಬಳಕೆಯಾಗಿರುವ ಬಗ್ಗೆ ಸರ್ಕಾರದ ನಿರ್ದೇಶನದಂತೆ ಲೆಕ್ಕ ಪರಿಶೋಧನೆಯನ್ನು ನಡೆಸಿ ವರದಿ ಸಲ್ಲಿಸಬೇಕು ಹಾಗೂ ವಾರ್ಷಿಕ ಮಹಾ ಸಭೆಗಳನ್ನು ನಡೆಸಬೇಕು ಎಂದು ಸೂಚಿಸಲಾಗಿದೆ ಎಂದರು.

2025-26ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದ ಕಾಮಗಾರಿಗಳನ್ನು ಫೆಬ್ರವರಿ-2026 ರೊಳಗೆ ಮುಕ್ತಾಯಗೊಳಿಸಿ ಅನುದಾನ ವ್ಯಪಗತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಅನುದಾನ ವ್ಯಪಗತಕ್ಕೆ ಸಂಬಂಧಪಟ್ಟವರನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ, ಸಹಾಯಕ ಕಾರ್ಯದರ್ಶಿ (ಆಡಳಿತ) ರವೀಂದ್ರ, ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಚಂದ್ರು, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು ಮತ್ತು ಪಿಡಿಓ ಗಳು ಹಾಜರಿದ್ದರು.

ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: DC ಡಾ.ಕುಮಾರ

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM1 Min Read

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

17/03/2026 7:31 PM2 Mins Read

BREAKING: ಲೈಂಗಿಕ ಕಿರುಕುಳ ಆರೋಪದಡಿ ‘ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್’ ಸಸ್ಪೆಂಡ್

17/03/2026 7:24 PM1 Min Read
Recent News

BREAKING : ಇಸ್ರೇಲ್ ಒತ್ತಡದಿಂದ ಅಮೆರಿಕ ಯುದ್ಧ ಆರಂಭಿಸಿತು : ‘ಟ್ರಂಪ್’ರ ‘ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ’ ರಾಜೀನಾಮೆ

17/03/2026 7:58 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM

ಕೇರಳ ವಿಧಾನಸಭಾ ಚುನಾವಣೆ 2026: ಕಾಂಗ್ರೆಸ್ ಪಕ್ಷದಿಂದ 55 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

17/03/2026 7:36 PM

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

17/03/2026 7:31 PM
State News
KARNATAKA

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

By kannadanewsnow0917/03/2026 7:47 PM KARNATAKA 1 Min Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ…

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

17/03/2026 7:31 PM

BREAKING: ಲೈಂಗಿಕ ಕಿರುಕುಳ ಆರೋಪದಡಿ ‘ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್’ ಸಸ್ಪೆಂಡ್

17/03/2026 7:24 PM

ಹೆಚ್.ಡಿ.ದೇವೇಗೌಡರ ಮನವಿಗೆ ಕೇಂದ್ರದ ಸ್ಪಂದನೆ: ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಗ್ರೀನ್ ಸಿಗ್ನಲ್

17/03/2026 7:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.